CrimeNEWSನಮ್ಮಜಿಲ್ಲೆಬೆಂಗಳೂರು

BBMP: ಕರ್ತವ್ಯ ಲೋಪ -ಆರು ಮಂದಿ ಕಂದಾಯ ಅಧಿಕಾರಿಗಳ ಅಮಾನತು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ತವ್ಯ ಲೋಪ ಆರೋಪದಡಿ ಬೊಮ್ಮನಹಳ್ಳಿ ಬಿಬಿಎಂಪಿ ವಲಯದ ಆರು ಮಂದಿ ಕಂದಾಯ ಅಧಿಕಾರಿಗಳನ್ನು ಅಮಾನತು ಮಾಡಿ ಬಿಬಿಎಂಪಿ ವಿಶೇಷ ಆಯುಕ್ತ ಮನೀಷ್ ಮೌದ್ಗಿಲ್ ಆದೇಶ ಹೊರಡಿಸಿದ್ದಾರೆ.

ಈ ಅಧಿಕಾರಿಗಳ ವಿರುದ್ಧ ಆಸ್ತಿ ತೆರಿಗೆ ಸಂಬಂಧಿತ ಕರ್ತವ್ಯ ಲೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ಬಗ್ಗೆ ಕಾರಣ ಕೇಳಿ ಜಂಟಿ ಆಯುಕ್ತ ಅಜಿತ್ ಅವರಿಗೆ ನೋಟಿಸ್ ಹಾಗೂ ಕಂದಾಯ ಉಪ ಆಯುಕ್ತ ಡಿ.ಕೆ.ಬಾಬು ಅವರ ವಿರುದ್ಧ ಇಲಾಖೆ ವಿಚಾರಣೆ ನಡೆಸುವಂತೆ ಸೂಚಿಸಿದ್ದರು.

ಬೊಮ್ಮನಹಳ್ಳಿ ವಲಯದಲ್ಲಿ ಆಸ್ತಿ ತೆತಿಗೆ ಸಂಗ್ರಹ, ತೆರಿಗೆ ಬಾಕಿ, ಟಾಪ್- 50 ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಗೃಹ ಹಾಗೂ ಗೃಹೇತರ ಕಟ್ಟಡಗಳ ಮಾಲೀಕರ ಆಸ್ತಿಗಳನ್ನು ಮುಟ್ಟುಗೋಲು ಹಾಗೂ ಬೀಗಮುದ್ರೆ ಹಾಕದ ಪ್ರಕರಣಗಳು ಜ.30 ರಂದು ನಡೆಸಿದ ಪರಿಶೀಲನೆ ವೇಳೆ ಕಂಡು ಬಂದಿದ್ದವು.

ಈ ಹಿನ್ನೆಲೆಯಲ್ಲಿ ಜಂಟಿ ಆಯುಕ್ತರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲು ಹಾಗೂ ಡಿ.ಕೆ.ಬಾಬು ಅವರ ವಿರುದ್ಧ ಇಲಾಖಾ ತನಿಖೆ ನಡೆಸುವಂತೆ ಸಂಬಂಧಿಸಿದವರಿಗೆ ಸೂಚನೆ ನೀಡಿ ಆದೇಶ ಹೊರಡಿಸಿದ್ದಾರೆ.

ಡಿಸಿ ಬಾಬು ಕಳೆದ ಎರಡು ತಿಂಗಳಲ್ಲಿ ಟಾಪ್-50 ಗೃಹೇತರ ಕಟ್ಟಡಗಳಲ್ಲಿ ಒಂದು ಕಟ್ಟಡವನ್ನು ಸೀಲ್ ಮಾಡಿಲ್ಲ. ಅದೇ ರೀತಿ ಟಾಪ್ -50 ವಸತಿ ಕಟ್ಟಡಗಳಲ್ಲಿ ಒಂದು ಆಸ್ತಿಯನ್ನು ಅಟ್ಯಾಚ್ ಮೆಂಟ್ ಮಾಡಿಲ್ಲ. ಈ ಕುರಿತಂತೆ ಡಿಕೆ ಬಾಬು ವಿರುದ್ಧ ಇಲಾಖಾ ವಿಚಾರಣೆ ನಡೆಸಬೇಕಿದೆ ಎಂದು ಮೌದ್ಗಿಲ್ ವಿವರಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ