CrimeNEWSನಮ್ಮರಾಜ್ಯ

ಅವಮಾನವಾಯಿತೆಂದು ದಲಿತ ಬಾಲಕಿ ಕೊಲೆ ಮಾಡಿದ ಯುವಕ: ಪಾಲಕರ ಆರೋಪ

ವಿಜಯಪಥ ಸಮಗ್ರ ಸುದ್ದಿ

ಹೊಸಕೋಟೆ: ದಲಿತ ಬಾಲಕಿ ಕೊಲೆಯಾಯೊಬ್ಬಳ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ನಿನ್ನೆ ಪತ್ತೆಯಾಗಿದ್ದು, ಆಕೆಯಿಂದ ಅವಮಾನವಾಯಿತು ಎಂದು ಸವರ್ಣಿಯ ಯುವಕ ಆ ಬಾಲಕಿಯನ್ನು ಹತ್ಯೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಿಯ ಮೃತದೇಹ ಸಿಕ್ಕಿದೆ. ಬಾಲಕಿ 20 ದಿನಗಳ ಹಿಂದೆ ಶಾಲೆಗೆ ಹೋಗುತ್ತಿದ್ದಾಗ ನಿತಿನ್ ಎಂಬಾತ ಚುಡಾಯಿಸಿದ್ದನು. ಅದನ್ನು ಪ್ರಶ್ನಿಸಿದ್ದಕ್ಕೆ ನಿತಿನ್ ಬಾಲಕಿ ಮೇಲೆ ಹಲ್ಲೆ ನಡೆಸಿದ್ದ.

ಇನ್ನು ಈ ವಿಚಾರವನ್ನು ಬಾಲಕಿ ತನ್ನ ಪೋಷಕರಿಗೆ ತಿಳಿಸಿದ್ದಳು. ಬಳಿಕ ಪಾಲಕರು ಮಾಲೂರು ಪೊಲೀಸ್‌ ಠಾಣೆಗೆ ದೂರು ನೀಡಲು ಹೋಗಿದ್ದರು. ಈ ವೇಳೆ ಎರಡು ಗ್ರಾಮದ ಹಿರಿಯರು ಸೇರಿ ಇಬ್ಬರ ನಡುವೆ ರಾಜಿ ಪಂಚಾಯಿತಿ ಮಾಡಿ ಕಳುಹಿಸಿದ್ದರು.

ರಾಜಿ ಪಂಚಾಯತಿ ಮಾಡಿದ ಮೂರು ದಿನಗಳ ಬಳಿಕ ಬಾಲಕಿ ನಾಪತ್ತೆಯಾಗಿದ್ದಳು. ನಿನ್ನೆ ಕುರಿಹಾಗಿಗಳು ಕುರಿ ಕಾಯಲು ಹೋಗಿದ್ದಾಗ ಬಾಲಕಿಯ ಶವಕಂಡು ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಇತ್ತ ವಿಷಯ ತಿಳಿಸಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವೈಟ್ ಫಿಲ್ಡ್​ನ ವೈದೇಹಿ ಆಸ್ವತ್ರೆಗೆ ರವಾನಿಸಿದರು.

ಅವಮಾನಕ್ಕೆ ಬಾಲಕಿಯ ಕೊಲೆ: ದಲಿತ ಬಾಲಕಿಯಿಂದ ಅವಮಾನವಾಯಿತು ಎಂದು ಸವರ್ಣಿಯ ಯುವಕ ನಿತಿನ್ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಕೊಲೆ ನಂತರ ಆರೋಪಿ ಗ್ರಾಮದಲ್ಲೇ ಓಡಾಡಿಕೊಂಡಿದ್ದನು. ಕೊಲೆ ವಿಚಾರ ಬಯಲಿಗೆ ಬರುತ್ತಿದ್ದಂತೆ ನಿತಿನ್ ಕತ್ತುಕೊಯ್ದುಕೊಂಡಿದ್ದಾನೆ.

ಕೊಲೆ ಮಾಡಿ ಕತ್ತು ಕೊಯ್ದುಕೊಂಡು ಡ್ರಾಮ ಮಾಡುತ್ತಿದ್ದಾನೆ ಎಂದು ಮೃತ ಬಾಲಕಿ ಕುಟುಂಬಸ್ಥರು ಆರೋಪಿಸಿದ್ದು, ಆರೋಪಿ ವಿರುದ್ಧ ಪೊಲೀಸರು ನಾವು ದೂರು ನೀಡಲು ಹೋಗಿದ್ದಾಗಲೇ ಕ್ರಮ ಕೈಗೊಂಡಿದ್ದರೆ ನಮ್ಮ ಮಗಳು ಶವವಾಗಿ ಸಿಗುತ್ತಿರಲಿಲ್ಲ ಎಂದು. ಪೊಲೀಸರ ಬೇಜವಾಬ್ದಾರಿ ಕಾರಣ ಬಾಲಕಿ ಕೊಲೆಯಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಪ್ರಕರಣ ಸಂಬಂಧ ಅನುಗೊಂಡನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ