NEWSನಮ್ಮಜಿಲ್ಲೆನಮ್ಮರಾಜ್ಯ

2024-25 STATE BUDGET: 3.71ಕೋಟಿ ರೂ. ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು 15ನೇ ಬಾರಿಗೆ ಬಜೆಟ್​ ಮಂಡಿಸುತ್ತಿದ್ದಾರೆ. ಆ ಮೂಲಕ ಇತಿಹಾಸ ನಿರ್ಮಿಸುತ್ತಿದ್ದಾರೆ. ಬಸವಾದಿ ಶರಣ ಕಾಯಕ, ದಾಸೋಹ ತತ್ವ ನಮಗೆ ಪ್ರೇರಣೆ ಎಂದು ಹೇಳುವ ಮೂಲಕ ಸದನದಲ್ಲಿ ಬಜೆಟ್​ ಮಂಡಿಸುತ್ತಿದ್ದಾರೆ.

ಬಜೆಟ್​​ ಗಾತ್ರವೆಷ್ಟು?: ವರನಟ ರಾಜ್​ಕುಮಾರ್​ರವರ ‘ಆಗದು ಎಂದು ಕೈ ಕಟ್ಟಿ ಕುಳಿತರೆ’ ಹಾಡನ್ನು ಪ್ರಸ್ತಾಪಿಸಿ ಬಜೆಟ್​ ಮಂಡಿಸುತ್ತಿದ್ದಾರೆ. ಕಳೆದ ಬಾರಿ ಜುಲೈನಲ್ಲಿ 3.27 ಲಕ್ಷ ಕೋಟಿಯ ಬಜೆಟ್​ ಮಂಡಿಸಿದ್ದರು. ಆದರೆ ಈ ಬಾರಿ ಬಜೆಟ್ ಗಾತ್ರ 3, 71, 383 ಕೋಟಿಯದ್ದಾಗಿದೆ. 2024-25ರಲ್ಲಿ 57 ಸಾವಿರ ಕೋಟಿ 5 ಗ್ಯಾರಂಟಿಗಳಿಗೆ ಹಂಚಿಕೆ ಮಾಡಲಾಗ್ತಿದೆ. ಜನರ ಆಹಾರ, ಆರೋಗ್ಯ, ಶಿಕ್ಷಣ, ಉದ್ಯೋಗ, ವಾಸದ ಭದ್ರತೆ ಯೋಜನೆ ಬಗ್ಗೆ ಒತ್ತು ನೀಡಿದೆ.

ಅತ್ಯಂತ ಕೀಳಾದವನೂ ಮೇಲಾಗಬೇಕು: ಬಜೆಟ್​ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯನವರು, ರಾಜಕೀಯ, ಆರ್ಥಿಕ ಕ್ಷೇತ್ರಗಳಲ್ಲಿ ಸರ್ವತ್ರ ವ್ಯಾಪಿಸಬೇಕು. ಅತ್ಯಂತ ಕೀಳಾದವನೂ ಮೇಲಾಗುವಂತೆ ಆಗಬೇಕು. ಕೋಟ್ಯಂತರ ಜನರ ಕೈಗೆ ಗ್ಯಾರಂಟಿ ಯೋಜನೆಗಳ ಹಂಚಿಕೆಯಾಗಬೇಕು. ವಾರ್ಷಿಕ 50-55 ಸಾವಿರ ರೂ. ಪ್ರತಿ ಕುಟುಂಬಕ್ಕೆ ಒದಗಿಸಲಾಗುತ್ತೆ ಎಂದು. ಹೇಳಿದ್ದಾರೆ.

ಚುನಾವಣಾ ಗಿಮಿಕ್ ಅಲ್ಲ: ಭಾರತ ಗಣರಾಜ್ಯವಾಗಿ 75ನೇ ವರ್ಷಕ್ಕೆ ಕಾಲಿಟ್ಟಿದೆ. ದುಡಿಮೆಯ ಪಾಲು ಹಂಚಬೇಕೆಂಬುದು ನಮಗೆ ಮಾರ್ಗದರ್ಶನ. ಗ್ಯಾರಂಟಿ ಯೋಜನೆಗಳನ್ನ ಅತ್ಯಂತ ಕಡಿಮೆ ಅವಧಿಯಲ್ಲಿ ಅನುಷ್ಠಾನಗೊಳಿಸಲಾಗಿದೆ. ನಮ್ಮ ಗ್ಯಾರಂಟಿ ಯೋಜನೆಗಳು ಕೇವಲ ಚುನಾವಣಾ ಗಿಮಿಕ್ ಅಲ್ಲ. ನಮ್ಮ ಕಾರ್ಯಕರ್ತರು ಸಂಗ್ರಹಿಸಿದ ಅಭಿಪ್ರಾಯವನ್ನು ಜಾರಿ ಮಾಡಲಾಗುತ್ತಿದೆ. ಸರ್ವೋದಯ, ಸಮನ್ವಯ ದೃಷ್ಟಿ ಎಲ್ಲೆಲ್ಲೂ ತಾಂಡವವಾಡಬೇಕು. ಎಲ್ಲರನ್ನೂ ಒಳಗೊಂಡ ಅಭಿವೃದ್ಧಿ, ತ್ವರಿತ ಆರ್ಥಿಕ ಅಭಿವೃದ್ಧಿ ಗುರಿಯನ್ನು ಈ ಬಜೆಟ್​ ಹೊಂದಿದೆ ಎಂದು ಹೇಳಿದ್ದಾರೆ.

ಇನ್ನು ಬಜೆಟ್‌ನ ಸಂಪೂರ್ಣ ಮಾಹಿತಿಗಾಗಿ  ಇಲ್ಲಿ ಕ್ಲಿಕ್‌ ಮಾಡಿ … Karnataka State Budget 2024-25 Kannada

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ