NEWSನಮ್ಮಜಿಲ್ಲೆ

ಇಂದಿನಿಂದ ಮಂಡ್ಯ ಜಿಲ್ಲೆಯಾದ್ಯಂತ ಬೇಕರಿ, ಸಲೂನ್ ಓಪನ್‌

ಕೊರೊನಾ ಸೋಂಕಿತರು ಪತ್ತೆಯಾಗಿಲ್ಲ ಎಂದು ಲಾಕ್ ​ಡೌನ್ ಸಡಿಲಿಸಿದ ಜಿಲ್ಲಾಧಿಕಾರಿ ವೆಂಕಟೇಶ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ದೇಶಾದ್ಯಂತ ಲಾಕ್​ಡೌನ್​ ಮತ್ತಷ್ಟು ಬಿಗಿಗೊಳ್ಳುತ್ತಿದೆ ಆದರೆ ಮಂಡ್ಯದಲ್ಲಿ ಯಾವುದೇ ಕೊರೊನಾ ಪೀಡಿತರು ಪತ್ತೆಯಾಗಿಲ್ಲ ಎಂಬ ಒಂದೇ ಒಂದು ಕಾರಣವನ್ನಿಟ್ಟುಕೊಂಡು ಲಾಕ್‌ಡೌನ್‌ ಸಡಿಲಗೊಳಿಸಲು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್​​ ಆಲೋಚಿಸಿದ್ದಾರೆ.

ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಪತ್ತೆಯಾಗಿಲ್ಲ ಎಂದು ಮಂಡ್ಯ ಜಿಲ್ಲಾಡಳಿತ ಹಂತ ಹಂತವಾಗಿ ಲಾಕ್ ​ಡೌನ್ ಸಡಿಲಗೊಳಿಸಲು ಮುಂದಾಗಿದ್ದು, ಕೆಲವು ಷರತ್ತುಗಳನ್ನು ವಿಧಿಸಿ ಶನಿವಾರಂದಿ ಬೇಕರಿ, ಸಲೂನ್ ತೆರೆಯಲು ಅನುಮತಿಯನ್ನೂ ನೀಡಿದೆ.

ಒಂದಷ್ಟು ಸಲಹೆಗಳನ್ನು ನೀಡಿದ್ದು, ಬೇಕರಿಯಲ್ಲಿ ಮಾಸ್ಕ್​ ಮತ್ತು ಹ್ಯಾಂಡ್​ ಗ್ಲೌಸ್​ ಬಳಸುವುದು ಕಡ್ಡಾಯ ಎಂದು ಸೂಚನೆ ನೀಡಿದ್ದಾರೆ.  ಜಿಲ್ಲೆಯಲ್ಲಿ ಮಾಂಸ ಮಾರಾಟದ ಮೇಲಿದ್ದ ನಿರ್ಬಂಧವನ್ನು ನಿನ್ನೆಯಿಂದ ಸಡಿಲಿಸಿ ಕೋಳಿ, ಕುರಿ, ಮೇಕೆ, ಮೀನು ಮಾಂಸ ಮಾರಾಟ ನಡೆಸಲಾಗುತ್ತಿದೆ.

ಇದೀಗ ಬೇಕರಿ ಹಾಗೂ ಸಲೂನ್ ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಜಿಲ್ಲಾಡಳಿತದ ಈ ಕ್ರಮ ಜನರಲ್ಲಿ ಆತಂಕ ಮೂಡಿಸಿದೆ.  ಮೈಸೂರಿನಲ್ಲಿ ಕೊರೊನಾ ಪೀಡಿತರ ಸಂಖ್ಯೆ ಏರುತ್ತಿದೆ. ಇಂಥ ವೇಳೆಯಲ್ಲಿ ಮೈಸೂರಿನ ಪಕ್ಕದ ಜಿಲ್ಲೆಯಲ್ಲಿ ಸಲೂನ್, ಬೇಕರಿ ತೆರೆಯಲು ಅನುಮತಿ ಕೊಟ್ಟಿರುವುದು  ಭಯದ ವಾತಾವರಣಕ್ಕೂ ಎಡೆಮಾಡಿಕೊಟ್ಟಿದೆ.

ಈ ನಿಯಮ ಸಡಿಲಿಕೆಯಿಂದ ಜನ ಗುಂಪಾಗಿ ಸೇರುವ ಸಾಧ್ಯತೆಯೇ ಹೆಚ್ಚಿದ್ದು, ಮುಂಜಾಗ್ರತೆ ವಹಿಸದಿದ್ದರೆ ಸೋಂಕಿನಿಂದ ಪಾರಾಗುವುದು ಕಷ್ಟ ಎಂಬುದನ್ನು ಜಿಲ್ಲಾಡಳಿತ ಸೂಕ್ಷ್ಮವಾಗಿ ಅರ್ಥಮಾಡಿಕೊಳ್ಳಬೇಕು ಎಂಬುವುದು ಪ್ರಜ್ಞಾನವಂತರ ಅಭಿಪ್ರಾಯವಾಗಿದೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್