NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಅಶ್ವಮೇಧ ಕ್ಲಾಸಿಕ್‌ ಬಸ್‌ಗಳಿಗೆ ಮೈಸೂರಲ್ಲಿ ಉಸ್ತುವಾರಿ ಸಚಿವ ಡಾ.ಮಹದೇವಪ್ಪ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಂದ ವಿವಿಧೆಡೆ ಸಂಚರಿಸಲಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 20 ನೂತನ ಅಶ್ವಮೇಧ ಕ್ಲಾಸಿಕ್‌ ಬಸ್‌ಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಶನಿವಾರ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಮೈಸೂರು ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಸಂಸ್ಥೆಯ ಮೈಸೂರು ವಿಭಾಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೈಸೂರು ಗ್ರಾಮಾಂತರ ಘಟಕದಿಂದ ಸಂಚರಿಸಲಿರುವ 20 ನೂತನ ಅಶ್ವಮೇಧ ಕ್ಲಾಸಿಕ್‌ ಬಸ್‌ಗಳ ಸಂಚಾರಕ್ಕೆ ಚಾಲನೆ ನೀಡಲಾಯಿತು.

ಈಗಾಗಲೇ ಬೆಂಗಳುರು, ಮಂಡ್ಯ ಸೇರಿದಂತೆ ವಿವಿಧ ಘಟಕಗಳಿಂದ ಅಶ್ವಮೇಧ ಬಸ್‌ಗಳು ಕಾರ್ಯಾಚೆಣೆ ಮಾಡುತ್ತಿದ್ದು, ಪ್ರಯಾಣಿಕರ ಮನಗೆದ್ದಿವೆ. ಇದೀಗ ಮೈಸೂರು ಘಟಕಕ್ಕೆ ಹೊಸದಾಗಿ 20 ಅಶ್ವಮೇಧ ಬಸ್‌ಗಳು ಸೇರ್ಪಡೆಗೊಂಡಿದ್ದು ಜನರ ಸೇವೆ ಆರಂಭಿಸಿವೆ.

ಮೈಸೂರು-ಬೆಂಗಳೂರು ನಡುವೆ 3 ಬಸ್, ನಂಜನಗೂಡು-ಮೈಸೂರು-ಬೆಂಗಳೂರು ನಡುವೆ 3 ಬಸ್, ನಂಜನಗೂಡು-ತಿ.ನರಸೀಪುರ-ಬೆಂಗಳೂರು ನಡುವೆ 7 ಬಸ್, ಎಚ್.ಡಿ.ಕೋಟೆ-ಬೆಂಗಳೂರು ನಡುವೆ 2 ಬಸ್, ಹುಣಸೂರು-ಬೆಂಗಳೂರು ನಡುವೆ 2 ಬಸ್, ಹಾಸನ- ಬೆಂಗಳೂರು ನಡುವೆ 2 ಬಸ್ ಹಾಗೂ ಮೈಸೂರು- ವಿರಾಜಪೇಟೆ ನಡುವೆ ಒಂದು ಬಸ್‌ ಸಂಚರಿಸಲಿದೆ.

ಅಶ್ವಮೇಧ ಬಸ್‌ಗಳ ವಿಶೇಷ: ಪಾಯಿಂಟ್ ಟು ಪಾಯಿಂಟ್ ಎಕ್ಸ್‌ಪ್ರೆಸ್ ಬಸ್‌ಗಳಾಗಿ ಅಶ್ವಮೇಧ ಕ್ಲಾಸಿಕ್ ಬಸ್‌ಗಳು ಸಂಚರಿಸಲಿವೆ. ಬಿ.ಎಸ್-6 ಮಾದರಿಯ ಈ ಬಸ್‌ಗಳು ಪರಿಸರ ಸ್ನೇಹಿ ಬಸ್‌ಗಳಾಗಿವೆ. ಸೆನ್ಸಾರ್ ಚಾಲಿತ ನ್ಯೂಮ್ಯಾಟಿಕ್ ಬಾಗಿಲು, ತುರ್ತು ಬಟನ್ ಅಳವಡಿಸಲಾಗಿದೆ. ಸಾಮಾನ್ಯ ಬಸ್‌ಗಳಿಗಿಂತ ಒಂದು ಅಡಿ ಎತ್ತರ ಹೊಂದಿರುವುದರಿಂದ ಬೆಳಕು, ಗಾಳಿ ಚನ್ನಾಗಿದೆ. ಪ್ರಯಾಣಿಕರ ಸೀಟ್ ನಡುವೆ ಹೆಚ್ಚಿನ ಸ್ಥಳಾವಕಾಶ ಇರುವುದರಿಂದ ಆರಾಮದಾಯಕ ಪ್ರಯಾಣ ಮಾಡಬಹುದಾಗಿದೆ.

ನೀರಿನ ಬಾಟಲ್ ಹಾಗೂ ಪತ್ರಿಕೆ ಇಡಲು ಪೌಚ್ ವ್ಯವಸ್ಥೆ ಇದೆ. ಮೊಬೈಲ್ ಚಾರ್ಜಿಂಗ್, ಪ್ಯಾನಿಕ್ ಬಟನ್, ಬಸ್‌ನ ಮುಂದೆ ಹಾಗೂ ಹಿಂದೆ ಸಿಸಿ ಕ್ಯಾಮರಾ ಅಳವಡಿಸಲಾಗಿದೆ.

ಶಾಸಕರಾದ ಕೆ.ಹರೀಶ್‌ಗೌಡ, ತನ್ವೀರ್‌ಸೇಠ್‌, ಮಂಜೇಗೌಡ, ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಬಿ.ಶ್ರೀನಿವಾಸ್‌, ನಗರ ವಿಭಾಗೀಯ ನಿಯಂತ್ರಣಾಧಿಕಾರಿ ವೀರೇಶ್‌, ಕಾರ್ಮಿಕ ಕಲ್ಯಾಣಾಧಿಕಾರಿ ಪುಟ್ಟೇಗೌಡ ಮತ್ತಿತರರು ಇದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ