NEWSನಮ್ಮಜಿಲ್ಲೆನಮ್ಮರಾಜ್ಯ

KKRTC: ಹಲವು ವರ್ಷಗಳಿಂದ ಬೇರುಬಿಟ್ಟ ಸಿಬ್ಬಂದಿಗಳ ಬದಲಾಯಿಸಿ: ಸಿಪಿಎಂ ಆದೇಶ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ ಮೂರು ವರ್ಷ ಮೇಲ್ಪಟ್ಟು ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಆಡಳಿತ ಸಿಬ್ಬಂದಿಗಳ ಬದಲಾವಣೆ ಮಾಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕ ಆದೇಶಿಸಿದ್ದಾರೆ.

ಈ ಸಂಬಂಧ ಕೆಕೆಆರ್‌ಟಿಸಿ ನಿಗಮದ ಎಲ್ಲ ವಿಭಾಗೀಯ ಕಚೇರಿ, ಘಟಕಗಳು ಹಾಗೂ ಯುನಿಟ್‌ಗಳಲ್ಲಿ ಮೂರು ವರ್ಷಗಳಿಗಿಂತ ಹೆಚ್ಚಿನ ಅವಧಿ ಒಂದೇ ಶಾಖೆ/ ಒಂದೇ ವಿಷಯ ಸಂಕಲನವನ್ನು ನಿರ್ವಹಿಸುತ್ತಿರುವ ವಿಷಯ ನಿರ್ವಾನಕರುಗಳನ್ನು ಹಾಗೂ ಇತರೇ ಸಿಬ್ಬಂದಿಯನ್ನು ಮೂರು ವರ್ಷಗಳಿಗೊಮ್ಮೆ ಬದಲಾವಣೆ ಮಾಡುವಂತೆ ನಿರ್ದೇಶನ ವಿದೆ.

ಈ ನಿರ್ದೇಶನವಿದ್ದರೂ ಸಹ ಕೆಲವೊಂದು ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿಷಯ ನಿರ್ವಾಹಕರು ಹಲವಾರು ವರ್ಷಗಳಿಂದ ಒಂದೇ ಕಡೆ ಕೆಲಸ ನಿರ್ವಹಿಸುತ್ತಿರುವುದಾಗಿ ಇತರ ಸಿಬ್ಬಂದಿಗಳಿಂದ/ ಸಂಘಟನೆಗಳಿಂದ ಹಲವಾರು ದೂರುಗಳು ಈ ಕಚೇರಿಗೆ ಬಂದಿವೆ.

ಮುಂದುವರೆದು ಈ ಕುರಿತು ಪರಿಶೀಲಿಸಿದ ಸೂಕ್ತಾಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಕೂಡಲೇ ವಿಭಾಗೀಯ ಕಚೇರಿ/ಶಾಖೆ/ಘಟಕ/ಯುನಿಟ್‌ಗಳಲ್ಲಿ 03 ವರ್ಷಗಳಗಿಂತ ಹೆಚ್ಚಿನ ಅವಧಿಯಲ್ಲಿ ಒಂದೇ ಶಾಖೆ/ ಒಂದೇ ವಿಷಯ ಸಂಕಲನವನ್ನು ನಿರ್ವಹಿಸುತ್ತಿರುವ ವಿಷಯ ನಿರ್ವಾಹಕರನ್ನು ಹಾಗೂ ಇತರೇ ಸಿಬ್ಬಂದಿಯನ್ನು ಬದಲಾಯಿಸುವಂತೆ ಆದೇಶ ಹೊರಡಿಸಿದ್ದಾರೆ.

ಸೂಕ್ತಾಧಿಕಾರಿಗಳ ಆದೇಶದಂತೆ ಮೂರು ವರ್ಷಗಳಿಗಿಂತ ಹೆಚ್ಚಿನ ಅವಧಿಯಲ್ಲಿ ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿರುವ ವಿಷಯ ನಿರ್ವಾಹಕರನ್ನು ಹಾಗೂ ಇತರೇ ಸಿಬ್ಬಂದಿಯನ್ನು ಕೂಡಲೇ ಬದಲಾಯಿಸಲು ಕ್ರಮವಹಿಸಿ, ಅನುಸರಣಾ ವರದಿಯನ್ನು ಈ ಕಚೇರಿಗೆ ಕೊಡಬೇಕು ಎಂದು ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ತಿಳಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ