NEWSಕೃಷಿನಮ್ಮಜಿಲ್ಲೆ

ತಿ.ನರಸೀಪುರ: ನೀರಿಗಾಗಿ ನೀರಾವರಿ ನಿಗಮದ ಕಚೇರಿ ಮುಂದೆ ರೈತರ ಪ್ರತಿಭಟನೆ ಆಕ್ರೋಶ

ಉಸ್ತುವಾರಿ ಸಚಿವ ಡಾ:ಎಚ್‌ಸಿಎಂ ನಡೆಗೆ ಖಂಡನೆ

ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ಬರಗಾಲದ ಸಂಕಷ್ಟದಲ್ಲಿರುವ ರೈತರಿಗೆ ಕುಡಿಯುವ ನೀರಿಗಾಗಿ ತಕ್ಷಣವೇ ಕಾಲುವೆಗಳಲ್ಲಿ ನೀರು ಹರಿಸಿ, ನದಿ ಮೂಲಕ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದರು.

ಇಂದು ಪಟ್ಟಣದ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರರ ಕಚೇರಿ ಮುಂದೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ನೇತೃತ್ವದಲ್ಲಿ ಧರಣಿ ನಡೆಸಿ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದರು.

ಈ ವೇಳೆ ಮಾತನಾಡಿದ ಅತ್ತಹಳ್ಳಿ ದೇವರಾಜ್, ಕಬಿನಿ – ಕಾವೇರಿ ಜಲಾಶಯದಿಂದ ತಮಿಳು ನಾಡಿಗೆ ನೀರು ಹರಿಸುವುದನ್ನು ತಕ್ಷಣವೇ ನಿಲ್ಲಿಸಬೇಕು ಹಾಗೂ ಅಚ್ಚುಕಟ್ಟು ಭಾಗದ ನಾಲೆಗಳಿಗೆ ನೀರು ಹರಿಸಿ ಜನ, ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಹಾಲಿ ಬೆಳೆದು ನಿಂತಿರುವ ಬೆಳೆಗಳ ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಸರ್ಕಾರ ರಾಜ್ಯದ ಜನತೆ ಹಾಗೂ ರೈತರನ್ನು ಬಲಿಕೊಟ್ಟು ತಮಿಳುನಾಡಿಗೆ ನೀರು ಹರಿಸುತ್ತಿದೆ. ಅಧಿಕಾರ ಕೊಟ್ಟ ರಾಜ್ಯದ ಜನತೆಗೆ ಹಾಗೂ ರೈತರಿಗೆ ದ್ರೋಹ ಬಗೆದು ತಮ್ಮ ಅಧಿಕಾರದ ಆಸೆಗೆ ಅಧಿಕಾರ ಕೊಟ್ಟ ರಾಜ್ಯದ ರೈತರಿಗೆ ಹಾಗೂ ಜನತೆಗೆ ಮರಣ ಶಾಸನ ಬರೆಯುತ್ತಿದೆ ಎಂದು ಕಿಡಿಕಾರಿದರು.

ನೀರಾವರಿ ನಿಗಮದ ಅಧಿಕಾರಿಗಳು ತಮಿಳುನಾಡಿನ ಗುಲಾಮರಂತೆ ವರ್ತಿಸುವುದನ್ನು ನಿಲ್ಲಿಸಿ ಅಚ್ಚುಕಟ್ಟು ಭಾಗದ ಜನ ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಹಾಲಿ ಬೆಳೆದು ನಿಂತಿರುವ ಬೆಳೆಗಳಿಗೆ ನಾಲೆಗಳ ಮೂಲಕ ನೀರು ಹರಿಸಿ ಕೆರೆಗಳನ್ನು ತುಂಬಿಸಲು ಮುಂದಾಗದೆ, ತಮಿಳುನಾಡಿನ ಹಿತ ಕಾಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ತಕ್ಷಣವೇ ತಮಿಳುನಾಡಿಗೆ ಕಾವೇರಿ – ಕಬಿನಿ ಜಲಾಶಯದಿಂದ ಬಿಟ್ಟಿರುವ ನೀರು ನಿಲಿಸಬೇಕು, ಇಲ್ಲವೇ ಕಚೇರಿ ಬಿಟ್ಟು ತೊಲಗಬೇಕು. ಇದು ರೈತರ ಎಚ್ಚರಿಕೆ. ತಮಿಳುನಾಡಿನ ಗುಲಾಮರಂತೆ ವರ್ತಿಸಿ ಜೀತ ಪದ್ಧತಿ ಮುಂದುವರಿಸಿದರೆ ತಮಿಳುನಾಡಿಗೆ ತೊಲಗಿ ಎಂದು ಎಚ್ಚರಿಕೆ ನೀಡಿ ಒತ್ತಾಯ ಸಲ್ಲಿಸಿದರು.

ಉಸ್ತುವಾರಿ ಸಚಿವ ಡಾ:ಎಚ್‌ಸಿಎಂ ನಡೆಗೆ ಖಂಡನೆ: ಇಂದು ನರಸೀಪುರದ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರರ ಕಚೇರಿ ಮುಂದೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅದೇ ಮಾರ್ಗವಾಗಿ ಬಂದರು ರೈತರನ್ನು ನೋಡಿಯೂ ನೋಡದಂತೆ ಹೋಗಿದ್ದಾರೆ.

ಸೌಜನ್ಯಕ್ಕಾದರು ಇವರು ಕಾರು ಇಳಿದು ಬಂದು ರೈತರ ಸಮಸ್ಯೆ ಏನು ಎಂದು ಕೇಳಬೇಕಿತ್ತು. ಆದರೇ ಇರಿವರಿಗೆ ಕೇಳುವ ತಾಳ್ಮೆ ಸಹನೆ ಇಲ್ಲ ಎಂದರೆ ಇವರು ಜನ ಪ್ರತಿನಿಧಿಯ ಅಥವಾ ಸರ್ವಾಧಿಕಾರಿಯಾ? ಇವರಿಗೆ ರೈತರ ಬಗ್ಗೆ ಎಳ್ಳಷ್ಟೂ ಕಾಳಜಿಯಿಲ್ಲ ಎಂಬುದು ಇದರಿಂದ ಎದ್ದು ಕಾಣುತ್ತದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿ ಸಚಿವರ ವರ್ತನೆಯನ್ನು ಖಂಡಿಸಿದ್ದಾರೆ.

ರೈತರ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಗಸೂರು ಶಂಕರ್, ತಾಲೂಕು ಅಧ್ಯಕ್ಷ ಕುರುಬೂರು ಸಿದ್ದೇಶ್, ತಾಲೂಕು ಉಪಾಧ್ಯಕ್ಷರಾದ ಹೆಗ್ಗೂರು ರಂಗರಾಜ್, ಆದಿಬೆಟ್ಟಹಳ್ಳಿ ನಂಜುಂಡಸ್ವಾಮಿ, ತಾಲೂಕು ಪ್ರದಾನ ಕಾರ್ಯದರ್ಶಿ ಕಿರಗಸೂರು ಪ್ರಸಾದ್ ನಾಯಕ್, ತಾಲೂಕು ಸಂಘಟನಾ ಕಾರ್ಯದರ್ಶಿ ಕುರುಬೂರು ಪ್ರದೀಪ್, ಮುಖಂಡರಾದ ಗೌರಿ ಶಂಕರ್, ಕುರುಬೂರು ಗುರುಸ್ವಾಮಿ, ಬನ್ನೂರು ಸೂರಿ, ಶೇಖರ್, ತರಕಾರಿ ನಿಂಗರಾಜು ಮತ್ತಿತರರು ಇದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ