NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಘಟಕ-5ರಲ್ಲಿ ಮಹಿಳಾ ಕಂಡಕ್ಟರ್‌ಗಳಿಗೆ ಕಿರುಕುಳ –  ಡಿಎಂ ವಿರುದ್ಧ ಸಿಎಂ, ಸಾರಿಗೆ ಸಚಿವರಿಗೆ ದೂರು ಕೊಟ್ಟ 44 ಮಂದಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಯನ್ನು ಯಾವುದೋ ಕೀಳು ಕೋಕದಿಂದ ಬಂದವರಂತೆ ಕೆಲ ಘಟಕ ಮಟ್ಟದ ಅಧಿಕಾರಿಗಳು ನಡೆಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಮಹಿಳಾ ಸಿಬ್ಬಂದಿಯನ್ನು ಕಾಲ್‌ಕಸಕ್ಕಿಂತಾ ಕೀಳಾಗಿ ನಡೆಸಿಕೊಳ್ಳುತ್ತಿದ್ದಾರೆ.

ಹೌದು! ರಾಜ್ಯ ಸರ್ಕಾರ ಮಹಿಳಾ ಸಬಲೀಕರಣಕ್ಕಾಗಿ ಶಕ್ತಿ ಯೋಜನೆ ಜಾರಿಗೆ ತಂದಿದೆ. ಆದರೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಮಹಿಳಾ ಕಂಡಕ್ಟರ್‌ಗಳಿಗೆ ಹಗಲು ರಾತ್ರಿ ಡ್ಯೂಟಿ ಮಾಡುವಂತೆ ಇನ್ನಿಲ್ಲ ಟಾರ್ಚರ್ ಕೊಡುತ್ತಿದ್ದಾರೆ. ಇದರಿಂದ ಮಾನಸಿಕವಾಗಿ ನೊಂದು ಈ ಬಗ್ಗೆ ಮಹಿಳಾ ಕಂಡಕ್ಟರ್‌ಗಳು ಸಾರಿಗೆ ಸಚಿವರ ಮೊರೆ ಹೋಗಿದ್ದಾರೆ.

ಬೆಂಗಳೂರಿನ ದೀಪಾಂಜಲಿ ನಗರದಲ್ಲಿರುವ KSRTC ಘಟಕ- 5ರ ಕಂಡಕ್ಟರ್ ನಂಜಮ್ಮ ಎಂಬುವರು ಅಧಿಕಾರಿಗಳ ಕಿರುಕುಳದ ಬಗ್ಗೆ ವಿಡಿಯೋ ಮಾಡಿ ಅಳಲು ತೋಡಿಕೊಂಡಿದ್ದಾರೆ. ಋತುಚಕ್ರದ ಸಮಸ್ಯೆ ಇದ್ದರೂ ಡ್ಯೂಟಿ ಮಾಡಿ ಎಂದು ಟಾರ್ಚರ್ ಕೊಡುತ್ತಿದ್ದಾರೆ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಅಧಿಕಾರಿಗಳ ಈ ಕಿರುಕುಳದ ಬಗ್ಗೆ ಸಿಟಿಎಂ ಅಂತೋಣಿ ಜಾರ್ಜ್ ಅವರ ಗಮನಕ್ಕೆ ತಂದೆವು. ಅವರು ಈ ಬಗ್ಗೆ ವಿಚಾರಿಸುವುದನ್ನು ಬಿಟ್ಟು ನಮಗೆ ದರ್ಪದ ಮಾತುಗಳನ್ನು ಆಡಿ ಅವಾಚ್ಯವಾಗಿ ನಿಂದಿಸಿದ್ದರು. ಅದನ್ನು ಈಗಲೂ ಮುಂದುವರಿಸಿದ್ದಾರೆ ಎಂದು ಹೇಳಿದ್ದಾರೆ.

ಇನ್ನು ಈ ಹಿಂದೆಯೂ ಅಧಿಕಾರಿಗಳ ಕಿರುಕುಳದ ಬಗ್ಗೆ ಮುಂಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರದ ಮೂಲಕ ದೂರು ನೀಡಿದ್ದೇವೆ, ಆದರೆ ಅವರು ಈವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ತಮಗಾದ ನೋವಿನ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಸದ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಸಿಎಂ ಅವರಿಗೆ ಲಿಖಿತವಾಗಿ ದೂರು ನೀಡಿದ್ದು ನಮ್ಮ ದೂರಿಗೆ ಸ್ಪಂದಿಸಿ ಅಧಿಕಾರಿಗಳ ಕಿರುಕುಳದಿಂದ ತಪ್ಪಿಸಲಬೇಕು ಎಂದು ಮನವಿ ಮಾಡಿದ್ದಾರೆ.

ನೋಡಿ ಘಟಕ ವ್ಯವಸ್ಥಾಪಕ ಡ್ಯೂಟಿಗೆ ಬಂದ ಕೂಡಲೇ ಅವರಿಗೆ ಸಂಬಂಧಿಸಿದ ರೂಟ್‌ಗೆ ಕಳುಹಿಸುವ ಬದಲಿಗೆ ಅನಗತ್ಯವಾಗಿ ಡಿಪೋದಲ್ಲೇ ಕಾಯಿಸಿ ಬಳಿಕ ತಡವಾಗಿ ಡ್ಯೂಟಿಗೆ ಹಾಕುತ್ತಾರೆ. ಬೇಗ ಬಂದರೂ ಡ್ಯೂಟಿ ಕೊಡದೆ ಸುಮ್ಮನೇ ಕೂರಿಸಿರುತ್ತಾರೆ. ಬಳಿಕ ತಡವಾಗಿ ಡ್ಯೂಟಿ ಕೊಟ್ಟು ಎಷ್ಟು ತಡವಾದರೂ ಡ್ಯೂಟಿ ಮುಗಿಸಿ ಮನೆಗೆ ಹೋಗಬೇಕು ಎಂದು ಹೇಳುತ್ತಾರೆ.

ಘಟಕ ವ್ಯವಸ್ಥಾಪಕರ ಈ ವರ್ತನೆಯಿಂದ ನಾವು ಈಗಾಗಲೇ ಅರ್ಧ ಸತ್ತುಹೋಗಿದ್ದೇವೆ. ಇವರಿಂದ ಆಗುತ್ತಿರುವ ಕಿರುಕುಳವನ್ನು ತಪ್ಪಿಸಿ ನಮಗೆ ನೆಮ್ಮದಿಯಿಂದ ಕರ್ತವ್ಯ ಮಾಡುವುದಕ್ಕೆ ಅನುವು ಮಾಡಿಕೊಡಬೇಕು ಎಂದು ಮಾನಸಿಕವಾಗಿ ನೊಂದ 40ಕ್ಕೂ ಹೆಚ್ಚುಮಹಿಳಾ ಕಂಡಕ್ಟರ್‌ಗಳು ಸಹಿ ಮಾಡಿದ್ದಾರೆ.

ಇನ್ನು ಈ ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಿಗೆ 44 ಮಂದಿ ಸಿಬ್ಬಂದಿ ಸಹಿ ಮಾಡಿರುವ ಪತ್ರದೊಂದಿಗೆ ಲಿಖಿತವಾಗಿ ದೂರು ನೀಡಿದ್ದೇವೆ ಎಂದು ಮಂಜಮ್ಮ ತಿಳಿಸಿದ್ದಾರೆ.

Vijayapatha - ವಿಜಯಪಥ

Leave a Reply

error: Content is protected !!
LATEST
KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪ್ರಣಾಪಾಯದಿಂದ ಪತ್ನಿ ಪಾರು 600ರಿಂದ 800 ಮಂದಿ ಅಧಿಕಾರಿಗಳಿಗಾಗಿ 1.07 ಲಕ್ಷ ನೌಕರರಿಗೆ ಅನ್ಯಾಯ ಮಾಡಲು ಹೊರಟಿರುವುದು ನ್ಯಾಯವೇ? KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರಿಗೆ ಸಮಾನ ವೇತನ ಲಾಭವೋ-ನಷ್ಟವೋ..!?? ಹರಿಯಾಣದಲ್ಲಿ ಸಮಾವೇಶ: ಎಂಎಸ್‌ಪಿ ಖಾತ್ರಿ ಕಾನೂನು ಜಾರಿಗೆ ಅನ್ನದಾತರ ಪಟ್ಟು ಪ್ರಜಾಪ್ರಭುತ್ವದ ಉಳಿವಿಗಾಗಿ ಮಾನವ ಸರಪಳಿ : ಉಸ್ತುವಾರಿ ಸಚಿವ ಮುನಿಯಪ್ಪ BMTC ಅಧಿಕಾರಿಗಳ ವಾಹನಗಳಿಗೂ ಖಾಸಗಿ ಚಾಲಕರ ನೇಮಕಕ್ಕೆ ಟೆಂಡರ್‌ ಕರೆದ ಸಂಸ್ಥೆ KSRTC ಮಡಿಕೇರಿ: ವೇತನ ಬಿಡುಗಡೆ ಆಗ್ರಹಿಸಿ ಪ್ರತಿಭಟನೆಗೆ ಇಳಿದ ಗುತ್ತಿಗೆ ಚಾಲಕರು KSRTC ನೌಕರರ ನಂಬಿಸಲು ಹೋದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳಿಂದಲೇ ಅವರ ಊಸರವಳ್ಳಿ ಬಣ್ಣ ಬಯಲು..! KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ