CrimeNEWSನಮ್ಮರಾಜ್ಯ

KSRTC: ದಾಖಲೆ ಇಲ್ಲದೆ ಬಸ್‌ನಲ್ಲಿ ಚಿನ್ನ ಸಾಗಿಸುತ್ತಿದ್ದ ಚಾಲಕ, ನಿರ್ವಾಹಕ ವಶಕ್ಕೆ

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಮಗಳೂರು: ದಾಖಲೆಯಿಲ್ಲದೆ ಬಸ್‌ನಲ್ಲಿ ಚಿನ್ನ ಸಾಗಿಸುತ್ತಿದ್ದ ವೇಳೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಾಲಕ ಮತ್ತು ನಿರ್ವಾಹಕರನ್ನು ವಶಕ್ಕೆ ಪಡೆಯಲಾಗಿದೆ.

ಲೋಕಸಭಾ ಚುನಾವಣೆ ನೀತಿಸಂಹಿತೆ ಜಾರಿಯಾಗಿದ್ದು, ಪೊಲೀಸ್‌ ಸೇರಿದಂತೆ ಚುನಾವಣಾಧಿಕಾರಿಗಳು ಹದ್ದಿಕಣ್ಣಿಟ್ಟಾರೆ ಎಂಬುವುದು ಗೊತ್ತಿದ್ದರೂ  ಕೂಡ ದಾಖಲೆಗಳಿಲ್ಲದೆ ಚಿನ್ನ, ಹಣ ಸಾಗಟ ಮಾಡುವುದು ಹೆಚ್ಚಾಗಿ ಕಂಡು ಬರುತ್ತಿದೆ.

ಅದರಂತೆ ಕೆಎಸ್‌ಆರ್‌ಟಿಸಿ ಬಸ್‌ ಸೇರಿದಂತೆ ಇತರೆ ವಾಹನಗಳಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಚಿನ್ನ ಮತ್ತು 5.90 ಲಕ್ಷ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಬಂದು ಅಲ್ಲಿಂದ ಕಡೂರಿಗೆ ತೆರಳುತ್ತಿದ್ದ KA-18 F-0824 ಕೆಎಸ್‌ಆರ್‌ಟಿಸಿಬಸ್‌ನಲ್ಲಿ ಸಾಗಿಸುತ್ತಿದ್ದ ಹಣವನ್ನು ವಶಕ್ಕೆ ಪಡೆಯಲಾಗಿದೆ.

ಈ ವೇಳೆ ಚಾಲಕ ಪ್ರಕಾಶ್ ಮತ್ತು ನಿರ್ವಾಹಕ ರಾಜೇಂದ್ರ ಮೂರ್ತಿಯನ್ನು ವಶಕ್ಕೆ ಪಡೆದಯ ವಿಚಾರಣೆ ನಡೆಸಲಾಗುತ್ತಿದೆ.

ಬಣಕಲ್ ವ್ಯಾಪ್ತಿಯ ಕೊಟ್ಟಿಗೆಹಾರ ಚೆಕ್ ಪೋಸ್ಟ್‌ನಲ್ಲಿ ಒಂದು ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ. ಮೂಡಿಗೆರೆ ತಾಲೂಕು ಗೋಣಿಬೀಡು ವ್ಯಾಪ್ತಿಯ ಚೆಕ್‌ಪೋಸ್ಟ್‌ನಲ್ಲಿ 3.62 ಲಕ್ಷ ರೂ. ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ