NEWSಕೃಷಿನಮ್ಮರಾಜ್ಯ

ಅಥಣಿ ರೈತ ಬೆಳೆದ ಅರಿಶಿಣ ದೇಶದಲ್ಲೇ ದಾಖಲೆ ಮಟ್ಟಕ್ಕೆ ಮಾರಾಟ- ಸೈಬಣ್ಣ ದಿಲ್‌ಖುಷ್‌

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ರೈತರೊಬ್ಬರು ಬೆಳೆದ ಅರಿಶಿಣ ದಾಖಲೆ ಮಟ್ಟಕ್ಕೆ ಮಾರಾಟವಾಗಿ ಇದು ಇಡೀ ಭಾರತದಲ್ಲೇ ಮೊದಲು ಎಂಬಂತಾಗಿದ್ದು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.

ಕೋಹಳ್ಳಿ ಗ್ರಾಮದ ರೈತ ಸೈಬಣ್ಣ ಭೂಪತಿ ಪೂಜಾರಿ ಎಂಬುವರೆ ಅರಿಶಿನ ಬೇಳೆದ ಈಗ ಫುಲ್ ಖುಷಿಯಲ್ಲಿದ್ದಾರೆ. ಹೌದು! ಇದು ಭಾರತದಲ್ಲಿ ಅಚ್ಚರಿಯ ದರಕ್ಕೆ ಮಾರಾಟವಾಗಿದ್ದು, ಪ್ರತಿ ಕ್ವಿಂಟಲ್​ಗೆ ಬರೋಬ್ಬರಿ 41,101 ರೂ. ದಾಖಲೆ ಮೊತ್ತಕ್ಕೆ ಮಾರಾಟವಾಗಿದೆ.

ಮೂರು ಎಕರೆ ಜಮೀನಿನಲ್ಲಿ ಅರಿಶಿಣ ಬೆಳೆದ ರೈತ ಪ್ರತಿ ಎಕರೆಗೆ 25-28 ಕ್ವಿಂಟಲ್ ಅರಿಶಿನ ಇಳುವರಿ ಪಡೆದಿದ್ದು, ಸದ್ಯ ಇದು ಶ್ರಮಕ್ಕೆ ತಕ್ಕ ವರದಾನವಾಗಿದೆ ಎಂದು ಸೈಬಣ್ಣ ಸಂತಸ ಹಂಚಿಕೊಂಡಿದ್ದಾರೆ.

ಸೈಬಣ್ಣ ಶೈಲಂ ತಳಿಯ ಅರಿಶಿನ ಬಿಜ ನಾಟಿ ಮಾಡಿ ಸಮರ್ಪಕ ನೀರು ಔಷಧೋಪಚಾರದೊಂದಿಗೆ ಉತ್ತಮ ಇಳುವರಿ ಪಡೆದಿದ್ದಾರೆ. ಈಗಾಗಲೇ 18 ಕ್ವಿಂಟಲ್ ಅರಿಶಿನ ಮಾರಾಟವಾಗಿದ್ದು ಅದರಿಂದ 7ಲಕ್ಷ ರೂ. ನಿವ್ವಳ ಲಾಭ ಪಡೆದಿದ್ದಾರೆ.

ಪ್ರತಿ ಎಕ್ಕರೆಗೆ 30 ಸಾವಿರ ಖರ್ಚು ಮಾಡಿದ ಅವರು ಮೂರು ಎಕ್ಕರೆ ಅರಿಶಿನದಿಂದ ಅಂದಾಜು 30 ಲಕ್ಷ ರೂಪಾಯಿ ಆದಾಯದ ನಿರೀಕ್ಷೆಯಲ್ಲಿ ಇದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ