NEWSಸಿನಿಪಥ

‘ಫ್ಯಾಮಿಲಿ ಸ್ಟಾರ್’: ವಿಜಯ್ ದೇವರ ಕೊಂಡಗೆ ‘ಡಾರ್ಲಿಂಗ್’ ಎಂದು ವಿಶ್ ಮಾಡಿದ ರಶ್ಮಿಕಾ

ವಿಜಯಪಥ ಸಮಗ್ರ ಸುದ್ದಿ

ಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ನಡುವಿನ ಸ್ನೇಹದ ಬಗ್ಗೆ ಯಾರೂ ಅಲ್ಲಗಳೆಯುವಂತಿಲ್ಲ. ಈ ಜೋಡಿಯ ನಡುವಿನ ಸಂಬಂಧವನ್ನು ನಾನಾ ರೀತಿಯಲ್ಲಿ ಬಿಂಬಿಸಲಾಗುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಇಬ್ಬರೂ ಅನುಮಾನ ಬರುವಂತೆ ನಡೆದುಕೊಳ್ಳುತ್ತಲೇ ಇರುತ್ತಾರೆ. ಈ ಬಾರಿಯೂ ಅದೇ ಆಗಿದೆ.

ವಿಜಯ್ ದೇವರಕೊಂಡ ನಟನೆಯ ‘ಫ್ಯಾಮಿಲಿ ಸ್ಟಾರ್’ ಸಿನಿಮಾ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದೆ. ಈ ಸಂದರ್ಭದಲ್ಲಿ ಈ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ಶುಭಾಶಯ ಕೋರಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಅವರು ಐ ವಿಶ್ ಮೈ ಡಾರ್ಲಿಂಗ್ಸ್ ಎಂದು ಬರೆದುಕೊಂಡಿದ್ದಾರೆ. ಇದು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

ಹೌದು! ಗೀತ ಗೋವಿಂದಂ’ ಸಿನಿಮಾದಲ್ಲಿ ವಿಜಯ್ ಹಾಗೂ ರಶ್ಮಿಕಾ ಒಟ್ಟಾಗಿ ನಟಿಸಿದಾಗಿನಿಂದಲೂ ಇಬ್ಬರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಒಬ್ಬರ ವೃತ್ತಿ ಜೀವನಕ್ಕೆ ಮತ್ತೊಬ್ಬರು ಬೆಂಬಲವಾಗಿ ನಿಲ್ಲುತ್ತಿದ್ದಾರೆ. ವಿಜಯ್ ಬಳಿ ರಶ್ಮಿಕಾ ಹಲವು ಸಲಹೆಗಳನ್ನು ಕೇಳುತ್ತಾರಂತೆ. ಈ ವಿಚಾರವನ್ನು ಅವರೇ ಈ ಮೊದಲು ಹೇಳಿಕೊಂಡಿದ್ದರು.

ವಿಜಯ್ ದೇವರಕೊಂಡ (Vijay Devarakonda) ಹಾಗೂ ಮೃಣಾಲ್ ಠಾಕೂರ್ ನಟನೆಯ ‘ಫ್ಯಾಮಿಲಿ ಸ್ಟಾರ್’ ಸಿನಿಮಾ ಸದ್ಯ ರಿಲೀಸ್​ಗೆ ರೆಡಿ ಇದ್ದು, ಬರುವ ಏಪ್ರಿಲ್ 5ರಂದು ಈ ಸಿನಿಮಾ ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ಇತ್ತೀಚೆಗೆ ಸಿನಿಮಾದ ಟ್ರೇಲರ್ ರಿಲೀಸ್ ಆಗಿದ್ದು ಎಲ್ಲರೂ ಆಲ್​ ದಿ ಬೆಸ್ಟ್ ಹೇಳುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಕೂಡ ವಿಜಯ್ ದೇವರಕೊಂಡಗೆ ವಿಶ್ ಮಾಡಿದ್ದಾರೆ. ‘ಅಲ್ ದಿ ಬೆಸ್ಟ್ ಡಾರ್ಲಿಂಗ್ಸ್’ ಎಂದು ಪ್ರಿತಿಯಿಂದ ಶುಭಕೋರಿದ್ದಾರೆ.

ಗೀತ ಗೋವಿಂದಂ’ ಸಿನಿಮಾದಲ್ಲಿ ವಿಜಯ್ ಹಾಗೂ ರಶ್ಮಿಕಾ ಒಟ್ಟಾಗಿ ನಟಿಸಿದಾಗಿನಿಂದಲೂ ಇಬ್ಬರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಒಬ್ಬರ ವೃತ್ತಿ ಜೀವನಕ್ಕೆ ಮತ್ತೊಬ್ಬರು ಬೆಂಬಲವಾಗಿ ನಿಲ್ಲುತ್ತಿದ್ದಾರೆ. ವಿಜಯ್ ಬಳಿ ರಶ್ಮಿಕಾ ಹಲವು ಸಲಹೆಗಳನ್ನು ಕೇಳುತ್ತಾರಂತೆ. ಈ ವಿಚಾರವನ್ನು ಅವರೇ ಈ ಮೊದಲು ಹೇಳಿಕೊಂಡಿದ್ದರು. ಅದೇ ರೀತಿ ಸಿನಿಮಾ ರಿಲೀಸ್ ಸಂದರ್ಭದಲ್ಲಿ ಒಬ್ಬರಿಗೊಬ್ಬರು ವಿಶ್ ಮಾಡಿಕೊಳ್ಳುತ್ತಾರೆ.

‘ಫ್ಯಾಮಿಲಿ ಸ್ಟಾರ್’ ಸಿನಿಮಾ ರಿಲೀಸ್ ಸಂದರ್ಭದಲ್ಲಿ ರಶ್ಮಿಕಾ ಟ್ವೀಟ್ ಮಾಡಿದ್ದಾರೆ. ‘ನಾನು ನನ್ನ ಡಾರ್ಲಿಂಗ್​​ಗಳಾದ ವಿಜಯ್ ದೇವರಕೊಂಡ ಹಾಗೂ ಪರಶುರಾಮ್ ಪೆಟ್ಲಾಗೆ (ನಿರ್ದೇಶಕ) ವಿಶ್ ಮಾಡುತ್ತೇನೆ. ಏಪ್ರಿಲ್ 5ರಂದು ಸಿನಿಮಾ ರಿಲೀಸ್ ಆಗಲಿದೆ. ಸಾಕಷ್ಟು ಎಗ್ಸೈಟ್ ಆಗಿದ್ದೇನೆ. ಪಾರ್ಟಿ ಬೇಕು’ ಎಂದಿರುವ ಅವರು, ಮೃಣಾಲ್​ಗೆ ‘ಆಲ್ ದಿ ಬೆಸ್ಟ್ ಮೈ ಲವ್’ ಎಂದು ಬರೆದಿದ್ದಾರೆ.

‘ಫ್ಯಾಮಿಲಿ ಸ್ಟಾರ್’ ಟ್ರೇಲರ್ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ಟ್ರೇಲರ್ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆಯುತ್ತಿದೆ. ಈ ಸಿನಿಮಾ ನೋಡಲು ಫ್ಯಾನ್ಸ್ ಕಾದಿದ್ದಾರೆ. ವಿಜಯ್ ದೇವರಕೊಂಡ ಅವರು ಕೊನೆಯದಾಗಿ ಕಾಣಿಸಿಕೊಂಡಿದ್ದು ‘ಖುಷಿ’ ಚಿತ್ರದಲ್ಲಿ. ಈ ಸಿನಿಮಾದಲ್ಲಿ ಅವರು ಸಮಂತಾ ಜೊತೆ ತೆರೆ ಹಂಚಿಕೊಂಡಿದ್ದರು.

Leave a Reply

error: Content is protected !!
LATEST
ರಾಯಚೂರು: ಕೊರವಿಹಾಳದಲ್ಲಿ ಬೀದಿ ನಾಯಿ ದಾಳಿಗೆ 4 ವರ್ಷ ಹೆಣ್ಣು ಮಗು ಬಲಿ ಮೈಸೂರು: ಕಲುಷಿತ ನೀರು ಸೇವಿಸಿ ಯುವಕ ಮೃತ, 35ಕ್ಕೂ ಹೆಚ್ಚು ಮಂದಿ ಅಸ್ವಸ್ಥ ಮನೆಯಲ್ಲೇ ಬಿಟ್ಟು ಕೆಲಸಕ್ಕೆ ಹೋದ ದಂಪತಿ: ಸಂಪ್‌ಗೆ ಬಿದ್ದು ಮಗು ಸಾವು ಜೂನ್​ 4ರಿಂದ ಗೂಗಲ್ ಪೇ ಕಾರ್ಯ ನಿರ್ವಹಿಸುದಿಲ್ಲ : ಅಚ್ಚರಿ ಮೂಡಿಸಿದ ನ್ಯೂಸ್‌ KSRTC: ಬಸ್‌ ಕಂಪನಿಯೇ ಪ್ರಮಾಣಪತ್ರ ಕೊಟ್ಟಿಲ್ಲ- ಕೆಎಂಪಿಎಲ್ ಕಡಿಮೆ ಅಂತ ನೌಕರರಿಗೆ ಮೆಮೋ ಕೊಡುವ ಅಧಿಕಾರಿಗಳು !? ಕೋರಮಂಗಲದ ಬಿಡಿಎ ಕಾಂಪ್ಲೆಕ್ಸ್ ಕೆಡವಿ ಮಾಲ್ ಕಟ್ಟುವ ಬಿಡಿಎ ನಿರ್ಧಾರಕ್ಕೆ ಎಎಪಿ ವಿರೋಧ ಜೈಲಲ್ಲೇ ದೇವರಾಜೇಗೌಡರ ಜೀವಕ್ಕೆ ಅಪಾಯವಿದೆ : ಸುರೇಶಗೌಡ ಆತಂಕ KSRTC ಬಸ್‌- ಕಾರು ನಡುವೆ ಭೀಕರ ಅಪಘಾತ: ಕಾರು ಚಾಲಕ ಸಾವು, ನಾಲ್ವರ ಸ್ಥಿತಿ ಗಂಭೀರ ಜಿಆರ್ ಫಾರ್ಮ್ ಹೌಸ್‌ನಲ್ಲಿ ರೇವ್​ ಪಾರ್ಟಿ: ನಟಿಯರು ಸೇರಿ 80ಕ್ಕೂ ಹೆಚ್ಚು ಬಂಧನ KSRTC: ಹೆದ್ದಾರಿಯಲ್ಲಿ ಕೆಟ್ಟುನಿಂತ ಬಸ್‌ಗಳು - ಕಿಮೀ ವರೆಗೆ ಟ್ರಾಫಿಕ್ ಜಾಮ್