NEWSಕ್ರೀಡೆ

ಕೆಕೆಆರ್‌ ವಿರುದ್ಧ ಆರ್‌ಸಿಬಿ ಸೋತರೂ ಬೌಲಿಂಗ್​ನಲ್ಲಿ ಮಿಂಚಿದ ಕನ್ನಡಿಗ ವೈಶಾಕ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಶುಕ್ರವಾರ ನಡೆದ ಐಪಿಎಲ್ ಪಂದ್ಯದಲ್ಲಿ ಆರ್​ಸಿಬಿ ತಂಡ ಕೋಲ್ಕತ್ತ ನೈಟ್​ ರೈಡರ್ಸ್​ ವಿರುದ್ಧ ಹೀನಾಯವಾಗಿ ಸೋತಿದೆ. ಆರ್​ಸಿಬಿ ಸೋಲಿಗೆ ಬೌಲಿಂಗ್ ವಿಭಾಗವೇ ಪ್ರಮುಖ ಕಾರಣ. ನಂಬುಗೆಯ ಬೌಲರ್ಸ್​ ತುಂಬಾನೇ ದುಬಾರಿಯಾದರು. ಪರಿಣಾಮ ಕೆಕೆಆರ್ ತಂಡದ ಮುಂದೆ ಆರ್​ಸಿಬಿ ತಲೆ ಬಾಗಬೇಕಾಯಿತು.

ಮೊಹ್ಮದ್ ಸಿರಾಜ್, ಜೋಸೆಫ್, ಯಶ್ ದಯಾಳ್ ತುಂಬಾನೇ ದುಬಾರಿಯಾದರು. ಸಿರಾಜ್ ಮೂರು ಓವರ್​ ಮಾಡಿ ಯಾವುದೇ ವಿಕೆಟ್ ಪಡೆಯದೇ 46 ರನ್​ಗಳನ್ನು ನೀಡಿದರು. ಅದೇ ರೀತಿ ಯಶ್ ದಯಾಳ್ ಕೂಡ 4 ಓವರ್ ಮಾಡಿ 46 ರನ್​ ನೀಡಿದರು. ಇನ್ನು, ಜೋಸೆಫ್ ಕೇವಲ 2 ಓವರ್ ಮಾಡಿ 34 ರನ್​​ ನೀಡಿದರು.

ವಿಶೇಷ ಅಂದರೆ ಕನ್ನಡಿಗ ವಿಜಯಕುಮಾರ್ ವೈಶಾಕ್‌ 4 ಓವರ್​ ಮಾಡಿ 23 ರನ್​​ಗಳನ್ನು ಮಾತ್ರ ನೀಡಿ ಒಂದು ವಿಕೆಟ್ ಪಡೆದರು. ಹಾಗೆಯೇ ಮಯಾಂಕ್ ಡಗರ್​ ಅವರು 2.5 ಓವರ್ ಮಾಡಿ ಒಂದು ವಿಕೆಟ್ ಪಡೆದು 23 ರನ್​​ ಕೊಟ್ಟರು. ವಿಶೇಷ ಅಂದರೆ ಕಮರೂನ್ ಗ್ರೀನ್ ಕೇವಲ ಒಂದು ಓವರ್ ಮಾಡಿ 7 ರನ್​ ಮಾತ್ರ ನೀಡಿದ್ದರು.

ಎಲ್ಲ ಬೌಲರ್​ಗಳಿಂತ ಗ್ರೀನ್ ಬೆಟರ್​​ ಬೌಲಿಂಗ್ ಮಾಡಿ ಗಮನ ಸೆಳೆದರು. ಇನ್ನು ಮೊದಲು ಬ್ಯಾಟ್ ಮಾಡಿದ್ದ ಆರ್​ಸಿಬಿ ಕೊಹ್ಲಿ ಅವರ 86 ರನ್​ಗಳ ಅಜೆಯ ಆಟದಿಂದ 6 ವಿಕೆಟ್ ಕಳೆದುಕೊಂಡು 182 ರನ್​ಗಳಿಸಿತ್ತು. ಈ ಗುರಿಯನ್ನು ಬೆನ್ನು ಹತ್ತಿದ್ದ ಕೆಕೆಆರ್, ಮೂರು ವಿಕೆಟ್ ಕಳೆದುಕೊಂಡು 186 ರನ್​ಗಳಿಸಿ ಸಂಭ್ರಮಿಸಿತು.

Leave a Reply

error: Content is protected !!
LATEST
ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ