CrimeNEWSನಮ್ಮರಾಜ್ಯ

ಬಿಜೆಪಿ ನಾಯಕರ ವಿರುದ್ಧದ ಪೋಸ್ಟ್: ಡಿಸಿಎಂ ಶಿವಕುಮಾರ್ ವಿರುದ್ಧ ಎಫ್‌ಐಆರ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಜೆಪಿಯ ಹಿರಿಯ ನಾಯಕರ ವಿರುದ್ಧ ಫೋಟೋ ಪೋಸ್ಟ್ ಮಾಡಿದ ಆರೋಪದಡಿ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಲಾಗಿದೆ.

ಕರ್ನಾಟಕ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಬಿ.ಎಸ್‌. ಯಡಿಯೂರಪ್ಪ, ಬಿ.ವೈ ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರ ಕೈಗೆ ಸ್ಲೇಟ್‌ ಕೊಟ್ಟ ಫೋಟೋಗಳನ್ನು ಪೋಸ್ಟ್ ಮಾಡಲಾಗಿತ್ತು.

ಈ ಫೋಟೋ ಪೋಸ್ಟ್‌ಗೆ ಸಂಬಂಧಪಟ್ಟಂತೆ ಯೋಗೇಂದ್ರ ಹೊಡಾಘಟ್ಟ ಅವರು ಪಿಸಿಆರ್ ದಾಖಲು ಮಾಡಿದ್ರು. 42ನೇ ಎಸಿಎಂಎಂ ಜನಪ್ರತಿನಿಧಿಗಳ ನ್ಯಾಯಾಲಯ ಡಿಕೆಶಿ ಮತ್ತು ಬಿ.ಆರ್. ನಾಯ್ಡು ವಿರುದ್ದ ಕೇಸ್‌ಗೆ ಆದೇಶಿಸಿತ್ತು. ಕೋರ್ಟ್ ಆದೇಶದಂತೆ IPC 153(A), 504, 506 & 464 ಕೇಸ್ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಡಿಸಿಎಂ ಶಿವಕುಮಾರ್ ವಿರುದ್ಧ ನೀಡಿದ ದೂರಿನಲ್ಲಿ ಬಿಜೆಪಿ ನಾಯಕರ ಕೈಗೆ ಸ್ಲೇಟ್ ಕೊಟ್ಟು ಸುಳ್ಳು ಬರಹದ ಪೋಸ್ಟ್ ಮಾಡಲಾಗಿದೆ. ಬಿಜೆಪಿ ಶಾಸಕರು ಮತ್ತು ಸಂಸದರು ಸೇರಿ ಅನೇಕ ನಾಯಕರ ವಿರುದ್ಧ ಪೋಸ್ಟ್ ಮಾಡಲಾಗಿದ್ದು, ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಸದ್ಯ ದೂರು ದಾಖಲಾಗಿದೆ.

ಯಾವ ಸೆಕ್ಷನ್ ಏನು ಹೇಳುತ್ತದೆ: 153(a) : ವ್ಯಕ್ತಿಯ ವೈಯಕ್ತಿವಾಗಿ ಚಾರಿತ್ರ್ಯವಧೆ ಮಾಡುವುದು. 504 : ದುರುದ್ದೇಶಪೂರ್ವಕವಾಗಿ ನಿಂದನೆ ಮಾಡುವುದು. 506: ಪರೋಕ್ಷ ಅಥವಾ ಪ್ರತ್ಯಕ್ಷ ಜೀವ ಬೆದರಿಕೆ ಒಡ್ಡುವುದು. 464: ಸುಳ್ಳು ಪೋಸ್ಟ್ ಕ್ರಿಯೆಟ್ ಮಾಡಿ ಅಪಪ್ರಚಾರ ಆರೋಪ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ