NEWSಕ್ರೀಡೆನಮ್ಮಜಿಲ್ಲೆ

ಐಪಿಎಲ್  ಕ್ರಿಕೆಟ್: ಚಿನ್ನಸ್ವಾಮಿ ಸ್ಟೇಡಿಯಂಗೆ ಬಿಎಂಟಿಸಿ ಬಸ್ ವ್ಯವಸ್ಥೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಈಗಾಗಲೇ ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ಪಂದ್ಯಾವಳಿಗೆ ತೆರಳಲು ಕ್ರಿಕೆಟ್ ಪ್ರೇಮಿಗಳಿಗೆ ಅನುಕೂಲವಾಗುವಂತೆ ಬಿಎಂಟಿಸಿ ವಿವಿಧ ಮಾರ್ಗಗಳಲ್ಲಿ ಬಸ್ ವ್ಯವಸ್ಥೆಯನ್ನು ಮಾಡಿದ್ದು, ಇದರಿಂದ ಕ್ರಿಕೆಟ್ ಪ್ರೇಮಿಗಳಿಗೆ ಅನುಕೂಲವಾಗಲಿದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ   ಏ.15,  ಮೇ 4,  ಮೇ, 12 ನೇ ಮೇ 18ರಂದು  ಐಪಿಎಲ್  ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ. ಈ ಪಂದ್ಯಾವಳಿಯನ್ನು ವೀಕ್ಷಿಸಲು ಸಹಸ್ರಾರು ಮಂದಿ ಬೆಂಗಳೂರಿಗೆ ಆಗಮಿಸಲಿದ್ದು, ಅವರಿಗೆ ಸ್ಟೇಡಿಯಂಗೆ ತೆರಳಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಬಿಎಂಟಿಸಿ ಕ್ರಮ ಕೈಗೊಂಡಿದೆ. ಅದರಂತೆ ವಿವಿಧ ಮಾರ್ಗಗಳಲ್ಲಿ ಬಸ್ ಗಳ ವ್ಯವಸ್ಥೆ ಮಾಡಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.

ಇನ್ನು ಕ್ರಿಕೆಟ್ ಪಂದ್ಯಾವಳಿ ನಡೆಯುವ ದಿನಗಳಲ್ಲಿ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಮಾರ್ಗಸಂಖ್ಯೆ ಎಸ್.ಬಿ.ಎಸ್-1 ರಿಂದ  ಕಾಡಗೋಡಿ ಬಸ್ ನಿಲ್ದಾಣ (ಹೆಚ್.ಎ.ಎಲ್ ರಸ್ತೆ), ಎಸ್.ಬಿ.ಎಸ್-13 ಮಾರ್ಗದಿಂದ ಕಾಡಗೋಡಿ ಬಸ್ ನಿಲ್ದಾಣ (ಹೂಡಿ ರಸ್ತೆ), ಜಿ-2 ಮಾರ್ಗದಿಂದ ಸರ್ಜಾಪುರ, ಜಿ-3 ಮಾರ್ಗದಿಂದ ಎಲೆಕ್ಟ್ರಾನಿಕ ಸಿಟಿ (ಹೊಸೂರು ರಸ್ತೆ). ಜಿ-4  ಮಾರ್ಗದಿಂದ ಬನ್ನೇರುಘಟ್ಟ ಮೃಗಾಲಯ, ಜಿ-6 ಮಾರ್ಗದಿಂದ ಕೆಂಗೇರಿ ಕೆ.ಹೆಚ್.ಬಿ ಕ್ವಾಟ್ರಸ್ (ಎಂ.ಸಿ.ಟಿ.ಸಿ ನಾಯಂಡಹಳ್ಳಿ).

ಇನ್ನು ಜಿ-7 ಮಾರ್ಗದಿಂದ ಜನಪ್ರಿಯ ಟೌನ್‍ಷಿಪ್ (ಮಾಗಡಿ ರಸ್ತೆ),  ಜಿ-8 ಮಾರ್ಗದಿಂದ   ನೆಲಮಂಗಲ, ಜಿ-9 ಮಾರ್ಗದಿಂದ  ಯಲಯಂಕ 5ನೇ ಹಂತ, ಜಿ-10 ಮಾರ್ಗದಿಂದ ಆರ್.ಕೆ. ಹೆಗಡೆ ನಗರ (ನಾಗವಾರ, ಟ್ಯಾನರಿ ರಸ್ತೆ), ಜಿ-11 ಮಾರ್ಗದಿಂದ ಬಾಗಲೂರು (ಹೆಣ್ಣೂರು ರಸ್ತೆ), ಕೆ.ಬಿ.ಎಸ್ 12 ಹೆಚ್.ಕೆ. ಮಾರ್ಗದಿಂದ ಹೊಸಕೋಟೆಗೆ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ.

ಕ್ರಿಕೆಟ್ ಪ್ರೇಮಿಗಳು ಈ ಮಾರ್ಗಗಳಲ್ಲಿ ಸಂಚರಿಸುವ ಬಸ್ ಗಳಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ತೆರಳಬಹುದಾಗಿದೆ. ಮುಂದಿನ ದಿನಗಳಲ್ಲಿ ಕ್ರಿಕೆಟ್ ಪಂದ್ಯಾವಳಿಗಳು ಕುತೂಹಲ ಘಟ್ಟಕ್ಕೆ ಹೋಗಲಿದ್ದು, ಜೀವನದಲ್ಲಿ ಒಮ್ಮೆಯಾದರೂ ಸ್ಟೇಡಿಯಂನಲ್ಲಿ ಕುಳಿತು ಪಂದ್ಯಾವಳಿಯನ್ನು ನೋಡಬೇಕೆಂದು ಬಯಸುವವರು ಟಿಕೆಟ್ ಕಾದಿರಿಸಲು ಮುಗಿಬಿದ್ದಿದ್ದಾರೆ. ಅದರಂತೆ ಕ್ರಿಕೆಟ್ ಪ್ರೇಮಿಗಳು ಸ್ಟೇಡಿಯಂಗೆ ತೆರಳಲು ಯಾವುದೇ ರೀತಿಯ ತೊಂದರೆಯಾಗಬಾರದೆಂದು ಬಿಎಂಟಿಸಿ ಬಸ್ ವ್ಯವಸ್ಥೆಗಳನ್ನು ಕಲ್ಪಿಸಿದೆ.

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ