NEWSನಮ್ಮಜಿಲ್ಲೆನಮ್ಮರಾಜ್ಯ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘದ ನೂತನ ಕಚೇರಿ ಉದ್ಘಾಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘದ ನೂತನ ಕಚೇರಿ ಇಂದು ರಾಜ್ಯ ರಾಜಧಾನಿಯ ಸುಂಕದಕಟ್ಟೆಯಲ್ಲಿ ಉದ್ಘಾಟನೆ ಮಾಡಲಾಯಿತು.

ಸಂಘದ ಗೌರವಾಧ್ಯಕ್ಷ, ಗೋವಿಂದರಾಜು ಮತ್ತು ಸಂಘದ ಅಧ್ಯಕ್ಷ ಭೈರೇಗೌಡ ಅವರ ಅಧ್ಯಕ್ಷತೆಯಲ್ಲಿ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ ಜರುಗಿತು.

ಇನ್ನು ಸಂಘದ ಸದಸ್ಯರು ನೂತನ ಕಚೇರಿ ನಂ. 31/31, ಹೆಗ್ಗನಹಳ್ಳಿ ಮುಖ್ಯ ರಸ್ತೆ ಸಲ್ಲಾಪುರದಮ್ಮ ದೇವಸ್ಥಾನದ ಹತ್ತಿರ ಸುಂಕದಕಟ್ಟೆ, ಬೆಂಗಳೂರು -91ಕ್ಕೆ ತಮ್ಮ ಯಾವುದೆ ವ್ಯವಹಾರವಿದ್ದರು ಭೇಟಿ ನೀಡಬಹುದು ಎಂದು ಅಧ್ಯಕ್ಷ ಭೈರೇಗೌಡ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಸಂಸ್ಥೆಯ ನಿವೃತ್ತ ಅಧಿಕಾರಿ ವೇಣುಗೋಪಾಲ್, ಸಂಘದ ಒಳಿತಿಗಾಗಿ ಹಗಲು ಇರುಳು ಶ್ರಮಿಸಿದ ಹಲವಾರು ಹಿರಿಯ ಅಧಿಕಾರಿಗಳು ಮತ್ತು ಕಾರ್ಮಿಕ ಮುಖಂಡರಾದ ಸತೀಶ್, ಬಸವಣ್ಣ, ರಘು ಮೈಸೂರ್, ಮಹದೇವಸ್ವಾಮಿ ಇದ್ದರು.

ಸಂಘಕ್ಕೆ ಸರ್ವಾನುಮತದಿಂದ ನಿರ್ದೇಶಕರಾಗಿ ಆಯ್ಕೆಯಾದ ಹಾಸನ ಪ್ರೇಮಕುಮಾರ್, ರುದ್ರೇಶ್ ಎಸ್. ನಾಯಕ, ಸಂಘದ ಉಪಾಧ್ಯಕ್ಷ ಪ್ರಕಾಶ್ ಪಿ.ಎಂ., ಖಜಾಂಚಿ ಮಂಜುನಾಥ್ ಪ್ರಸಾದ್ (ಮಂಜಣ್ಣ ಎ.ಸಿ.) ಹಿರಿಯ ನಿರ್ದೇಶಕ ಮುತ್ತಣ್ಣ, ಜಂಟಿ ಕಾರ್ಯದರ್ಶಿ ಮತ್ತು ನಿರ್ದೇಶಕರಾದ ಆನಂದ್ ಮೈಗೂರ ಹಾಗೂ ಪಂಪಾಪತಿ ಯಾದವ್, ಮಹಿಳಾ ನಿರ್ದೇಶಕಿ ರಾಮಲಕ್ಷ್ಮಮ್ಮ ಇದ್ದರು.

Leave a Reply

error: Content is protected !!
LATEST
ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ