CrimeNEWSಬೆಂಗಳೂರು

ಅತಿಯಾಗಿ ಲೈಂಗಿಕ ಕ್ರಿಯೆಗೆ ಪೀಡಿಸಿದ್ದರಿಂದ ಒಂಟಿ ಮಹಿಳೆಯ ಕೊಲೆ: ಹತ್ಯೆ ರಹಸ್ಯ ಬೇಧಿಸಿದ ಪೊಲೀಸರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅತಿಯಾಗಿ ಲೈಂಗಿಕ ಕ್ರಿಯೆಗೆ ಪೀಡಿಸಿದ್ದರಿಂದ ಕೋಪಗೊಂಡು ಮಹಿಳೆಯನ್ನು ಕೊಲೆ ಮಾಡಿದ್ದಾಗಿ ಹತ್ಯೆ ಆರೋಪಿ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟ್​ನಲ್ಲಿ ಏ.19ರಂದು ಮನೆಯಲ್ಲಿ ನಗ್ನವಾಗಿ ಮಹಿಳೆಯ ಮೃತದೇಹ ಪತ್ತೆಯಾದ ಘಟನೆಯ ಪ್ರಕರಣವನ್ನು ಬೇಧಿಸಿರುವ ಕೊಡಿಗೇಹಳ್ಳಿ ಪೊಲೀಸರು ಕೊಲೆಗೆ ಕಾರಣವೇನು ಎಂಬುದರ ಬಗ್ಗೆ ಇನ್ನಷ್ಟು ವಿಚಾರಣೆ ನಡೆಸುತ್ತಿದ್ದಾರೆ.

ಒಂಟಿ ಮಹಿಳೆ ಕೊಲೆ ಪ್ರಕರಣ ಕೈಗೆತ್ತಿಕೊಂಡ ಕೊಡಿಗೇಹಳ್ಳಿ ಪೊಲೀಸರು ಆರೋಪಿ ನವೀನ್ ಎಂಬಾತನ್ನು ಬಂಧಿಸುವ ಮೂಲಕ ಪ್ರಕರಣ ಬೇಧಿಸಿದ್ದಾರೆ.

ಘಟನೆ ಏನು? ಇದೇ ಏಪ್ರಿಲ್ 19ರಂದು ಮನೆಯಲ್ಲಿ ಶೋಭಾ ಎಂಬ ಮಹಿಳೆಯ ಮೃತದೇಹ ನಗ್ನವಾಗಿ ಪತ್ತೆಯಾಗಿತ್ತು. ಮೃತ ಶೋಭಾ ಅವರಿಗೆ ಇಬ್ಬರು ಪುತ್ರಿಯರಿದ್ದಾರೆ. ಆ ಇಬ್ಬರು ಮಕ್ಕಳಿಗೂ ಮದುವೆ ಮಾಡಿಕೊಟ್ಟಿದ್ದಾರೆ.

ಆ ಮಕ್ಕಳಲ್ಲಿ ಒಬ್ಬರು ಏಪ್ರಿಲ್ 19ರಂದು ಎಷ್ಟು ಬಾರಿ ಫೋನ್ ಮಾಡಿದರೂ ಶೋಭಾ ಕರೆ ಸ್ವೀಕರಿಸಿರಲಿಲ್ಲ. ಅನುಮಾನಗೊಂಡ ಮಗಳು ಮನೆಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿತ್ತು.

ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದ ಕೊಡಿಗೇಹಳ್ಳಿ ಪೊಲೀಸರು ನವೀನ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ನವೀನ್ ಹೇರೋಹಳ್ಳಿ ನಿವಾಸಿಯಾಗಿದ್ದು, ಇನ್‌ಸ್ಟಾಗ್ರಾಂನಲ್ಲಿ ಶೋಭಾಗೆ ಪರಿಚಯವಾಗಿದ್ದ. ಪರಿಚಯದಿಂದ ಸ್ನೇಹ ಬೆಳೆದು ಇಬ್ಬರ ಮಧ್ಯೆ ಅನೈತಿಕ ಸಂಬಂಧ ಇತ್ತು ಎನ್ನಲಾಗಿದೆ.

ಶೋಭಾ ಕೊಲೆಯಾದ ದಿನ ಆರೋಪಿ ನವೀನ್‌ನನ್ನು ಕರೆಸಿಕೊಂಡಿದ್ದು ಮನೆಗೆ ಬಂದ ನವೀನ್‌ನನ್ನು ಅತಿಯಾಗಿ ಲೈಂಗಿಕ ಕ್ರಿಯೆಗೆ ಪೀಡಿಸಿದ್ದಾಳೆ. ಈ ವೇಳೆ ಅತಿಯಾಗಿ ಸೆಕ್ಸ್‌ಗೆ ಮಹಿಳೆ ಒತ್ತಾಯಿಸುತ್ತಿದ್ದಂತೆ ಬೇಸರಗೊಂಡ ಆರೋಪಿ ನವೀನ್‌ ಮಹಿಳೆಯ ಕೊಲೆ ಮಾಡಿದ್ದಾಗಿ ವಿಚಾರಣೆ ವೇಳೆ ತಿಳಿಸಿದ್ದಾನೆ ಎನ್ನಲಾಗಿದೆ.

Leave a Reply

error: Content is protected !!
LATEST
20 ದಿನದೊಳಗೆ ರೈತರಿಗೆ ಬರ ಪರಿಹಾರ ನೀಡದಿದ್ದರೆ ರಾಜ್ಯಾದ್ಯಂತ ಹೋರಾಟ: ಕುರುಬೂರು ಶಾಂತಕುಮಾರ್ ಎಚ್ಚರಿಕೆ KSRTC: ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಬಸ್‌ -6ಮಂದಿಗೆ ಗಾಯ KSRTC ಗುಂಡ್ಲುಪೇಟೆ ಘಟಕ: ನೌಕರರಿಗೆ ಡ್ಯೂಟಿ ಕೊಡದೆ ಕಿರುಕುಳ ನೀಡುತ್ತಿರುವ ಡಿಎಂ, ಎಟಿಎಸ್‌ - DC ಮೌನ NWKRTC: ಬಸ್‌ನಿಂದ ಆಯತಪ್ಪಿ ಬಿದ್ದು ಚಕ್ರದಡಿ ಸಿಲುಕಿ ಮಹಿಳೆ ಧಾರುಣಸಾವು ಬಸ್‌ - ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ : ನಾಲ್ವರು ಮೃತ, ಹಲವರಿಗೆ ಗಾಯ KSRTC ಬಸ್‌ - ಕಾರು ನಡುವೆ ಅಪಘಾತ: ಕಾರಿನಲ್ಲಿದ್ದ ನಾಲ್ವರು ಸೇರಿ ಹಲವರಿಗೆ ಗಾಯ NWKRTC: ಕರ್ತವ್ಯ ನಿರತರಾಗಿದ್ದಾಗಲೇ ಚಾಲಕರಿಗೆ ಹೃದಯಘಾತ - ವಿಜಯಪುರ ಬಸ್‌ ನಿಲ್ದಾಣದಲ್ಲೇ ಕುಸಿದು ಬಿದ್ದು ನಿಧನ ಕನ್ನಡ ಮಾಧ್ಯಮ ಶಾಲೆಗಳ ವೈಫಲ್ಯ, ಕೇಂದ್ರದ ಹಿಂದಿ ಹೇರಿಕೆಯಿಂದ ನಾಶವಾಗುತ್ತಿದೆ ಕನ್ನಡ : ರಮೇಶ್‌ ಬೆಳ್ಳಮ್ಕೊಂಡ KSRTC: 2024ರ ವೇತನ ಪರಿಷ್ಕರಣೆ ಸುಳಿವು ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ KKRTC ವಿಜಯಪುರ: ತಪ್ಪು ಮಾಡಿ ಅಮಾನತಾದ ಡಿಸಿ ಪರ ನಿಂತರೆ ನಿಗಮದ ಅಧಿಕಾರಿಗಳು!!?