NEWSಕೃಷಿನಮ್ಮರಾಜ್ಯಬೆಂಗಳೂರು

ಮಳೆಗೆ ನೆಲಕ್ಕುರುಳಿದ ಮರ, ವಿದ್ಯುತ್‌ ಕಂಬಗಳು – ಪೆಟ್ರೋಲ್‌ ಬಂಕ್‌, ಮನೆಗಳು ಜಲಾವೃತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ರಾತ್ರಿ ಕೂಡ ಭರ್ಜರಿ ಮಳೆಯಾಗಿದ್ದು, ರಾತ್ರಿಬಿದ್ದ ಮಳೆಗೆ ಸಿಲಿಕಾನ್ ಸಿಟಿ ಸಖತ್ ಕೂಲ್ ಕೂಲ್‌ ಆಗಿದ್ದು, ಜತೆಗೆ ಜೋರಾಗಿ ಬಂದ ಗಾಳಿ ಸಹಿತ ಮಳೆಗೆ ಹಲವು ಅನಾಹುತಗಳು ಸಂಭವಿಸಿವೆ.

ಬಿರುಗಾಳಿ ಮಳೆಯ ರೌದ್ರಾವತಾರಕ್ಕೆ ನಗರದ ಜನ ಹೈರಾಣಾಗಿದ್ದಾರೆ. ಇತ್ತ ಮೂರು ವಿದ್ಯುತ್ ಕಂಬಗಳು ನೆಲಕ್ಕೆ ಬಿದ್ದಿವೆ. ಹೆಮ್ಮರವೊಂದು ಉರುಳಿ ಬಿದ್ದ ಪರಿಣಾಮ ಎರಡು ಕಾರುಗಳು ಒಂದು ಟಿಟಿ ವಾಹನ ಜಖಂಗೊಂಡಿದೆ. ರಾತ್ರಿ 11.30ರ ಸುಮಾರಿಗೆ ದೀಪಾಂಜಲಿ ನಗರದ ವ್ಯಾಪ್ತಿಯಲ್ಲಿ ಭಾರಿ ಅವಘಡ ಸಂಭವಿಸಿದೆ.

ರಾತ್ರಿ ಆಗಿರುವ ಅವಾಂತರ ಬೆಳ್ಳಂಬೆಳಗ್ಗೆ ಜನರ ಗಮನಕ್ಕೆ ಬಂದಿದೆ. ಮರ ಮತ್ತು ಕಂಬ ಬಿದ್ದಿದ್ದನ್ನು ನೋಡಿದ ಮಂದಿ ಕಂಗಾಲಾಗಿದ್ದಾರೆ. ಅಪಾಯಕಾರಿ ಮರಗಳ ತೆರವುಗೊಳಿಸುವ ಮೂಲಕ ಈ ಅವಾಂತರ ತಪ್ಪಿಸಿ ಎಂದು ಬಿಬಿಎಂಪಿಯನ್ನು ಒತ್ತಾಯಿಸಿದ್ದಾರೆ.

ಹಾಗೆಯೇ ನಾಗರಭಾವಿಯಲ್ಲಿ ದೊಡ್ಡ ಮರವೊಂದು ಬೇರು ಸಹಿತ ನೆಲಕ್ಕುರುಳಿದೆ. ನಾಗರಬಾವಿ ಸರ್ಕಲ್ ರಸ್ತೆ ಬದಿ ಇರುವ ಮರಬಿದ್ದಿದ್ದು ಅದೃಷ್ವವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ. ರಸ್ತೆ ಬದಿ, ಮನೆ, ಕಾಂಪ್ಲೆಕ್ಸ್ ಮುಂದೆ ಮರ ಬಿದ್ದಿದ್ದರ ಪರಿಣಾಮ ಕಾರು ಮಾತ್ರ ಸ್ವಲ್ಪಮಟ್ಟಿಗೆ ಜಖಂ ಆಗಿದೆ.

ಇನ್ನು ಆರ್​ಆರ್ ನಗರದಲ್ಲಿ ಮಳೆಯಿಂದಾಗಿ ಪೆಟ್ರೋಲ್ ಬಂಕ್ ಜಲಾವೃತಗೊಂಡಿದೆ. ರಾತ್ರಿ ಸಂಪೂರ್ಣ ಜಲಾವೃತವಾಗಿದ್ದ ಹಿನ್ನೆಲೆಯಲ್ಲಿ ಬೆಳಗ್ಗೆ ನೀರು ತೆಗೆಯುವ ಕೆಲಸದಲ್ಲಿ ಪೆಟ್ರೋಲ್ ಬಂಕ್ ಸಿಬ್ಬಂದಿ ನಿರತರಾಗಿದ್ದರು. ಮಳೆಯಿಂದ ಪೆಟ್ರೋಲ್ ಬಂಕ್ ಜಲಾವೃತವಾಗಿದ್ದ ಪರಿಣಾಮ ಪೆಟ್ರೋಲ್ ಸಿಗದೇ ವಾಹನ ಸವಾರರು ಬೇರೆಡೆಗೆ ಹೋಗುತ್ತಿದ್ದಾರೆ.

ಹೀಗೆ ನಗರದ ಹಲವು ಭಾಗಗಳಲ್ಲಿರುವ ಮನೆಗಳಿಗೆ ನೀರು ನುಗ್ಗಿದೆ. ಅನ್ನಪೂರ್ಣೇಶ್ವರಿ ನಗರದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ನಿದ್ದೆಯಿಲ್ಲದೇ ಸ್ಥಳೀಯರು ರಾತ್ರಿಯೆಲ್ಲ ನೀರನ್ನು ಹೊರಹಾಕುವ ಕೆಲಸ ಮಾಡಿದರು. ಮನೆಯ ವಸ್ತುಗಳೆಲ್ಲ ಮಳೆಗೆ ತೊಯ್ದಿವೆ. ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಗರದ ಎಲ್ಲೆಲ್ಲಿ ಎಷ್ಟೆಷ್ಟು ಮಳೆ?
ಕೆಂಗೇರಿ – 89 ಮಿಮೀ. ಪೀಣ್ಯ ಇಂಡಸ್ಟ್ರಿಯಲ್ ಏರಿಯಾ – 62 ಮಿಮೀ ನಾಯಂಡನಹಳ್ಳಿ – 61.5 ಮಿಮೀ. ಹೆಮ್ಮಿಗೆಪುರ – 61 ಮಿಮೀ. ಆರ್‌.ಆರ್. ನಗರ – 60 ಮಿಮೀ. ಮಾರುತಿ ಮಂದಿರ – 51.50 ಮಿಮೀ.  ವಿದ್ಯಾಪೀಠ – 50 ಮಿಮೀ. ಉತ್ತರಹಳ್ಳಿ – 42 ಮಿಮೀ.

ಹಂಪಿನಗರ – 39 ಮಿಮೀ. ಯಲಹಂಕ – 38.50 ಮಿಮೀ. ಜಕ್ಕೂರು – 38 ಮಿಮೀ. ಕೊಟ್ಟಿಗೆಪಾಳ್ಯ – 33 ಮಿಮೀ. ಕೊಡಿಗೆಹಳ್ಳಿ – 28.50 ಮಿಮೀ. ನಂದಿನಿ ಲೇಔಟ್ – 28 ಮಿಮೀ ಮಳೆಯಾಗಿದ್ದು ಇನ್ನೂ 2ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.

Leave a Reply

error: Content is protected !!
LATEST
KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತ ಕಟ್ಟುನಿಟ್ಟಿನ ಕಾನೂನು ಜಾರಿಗೆ ರೈತ ಮುಖಂಡರ ಆಗ್ರಹ KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು