NEWSನಮ್ಮರಾಜ್ಯ

ಲಾಕ್‌ಡೌನ್ ನಡುವೆಯು ರಕ್ತದಾನ ಮಾಡಿದ ಯುವ ಜನತೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವಸಬಲೀಕರಣ ಸಚಿವ ಸಿ.ಟಿ ರವಿ ಮೆಚ್ಚುಗೆ

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಮಗಳೂರು: ದೇಶಾದ್ಯಂತ ಲಾಕ್‌ಡೌನ್ ನಲ್ಲಿಯು ಜಿಲ್ಲೆಯಲ್ಲಿ ತುರ್ತು ಸಂದರ್ಭ ರಕ್ತನಿಧಿಗಳಲ್ಲಿ ರಕ್ತದ ಕೊರತೆಯಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ರಕ್ತದಾನ ಶಿಬಿರವನ್ನು ಏರ್ಪಡಿಸಿರುವುದು ಸಂತಸ ವಿಷಯ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ ರವಿ ಹೇಳಿದರು.

ಬುಧವಾರ ನಗರದ ಬಸವನಹಳ್ಳಿ ಮುಖ್ಯ ರಸ್ತೆಯ ರಂಗಣ್ಣನವರ ಛತ್ರದಲ್ಲಿ ಚಿಕ್ಕಮಗಳೂರು ಯುವಕರ ಸಂಘದಿಂದ ಆಯೋಜಿಸಲಾಗಿದ್ದ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಗರದಲ್ಲಿ ರಾಷ್ಟೋತ್ತನ ಬಳಗದಿಂದ ರಕ್ತದಾನ ಶಿಬಿರ ಮಾಡುವ ಸಂದೇಶ ಬಂದ ಹಿನ್ನೆಲೆ ಜಿಲ್ಲೆಯ ಯುವಕರ ಸಂಘವು ಇಂತಹ ಸಂಕಷ್ಟದ ತುರ್ತು ಸಂದರ್ಭದಲ್ಲಿಯೂ ಶಿಬಿರವನ್ನು ಏರ್ಪಡಿಸಿದ್ದು ಜತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ರಕ್ತದಾನಿಗಳು ಭಾಗಿಯಾಗಿರುವುದು ಖುಷಿಯ ವಿಚಾರ ಎಂದರು.

ರಕ್ತದಾನ ಮಹಾದಾನವಾಗಿದ್ದು ರಾಜ್ಯಾದ್ಯಂತ ಪ್ರತಿಯೊಂದು ಜಿಲ್ಲೆಗಳಲ್ಲಿಯೂ ರಕ್ತದಾನ ಶಿಬಿರವನ್ನು ಏರ್ಪಡಿಸುವುದು ಒಳಿತು. ಸಂಕಷ್ಟದ ಸಂದರ್ಭಗಳಲ್ಲಿ ಇಂತಹ ಶಿಬಿರಗಳು ಅನುಕೂಲವಾಗಲಿದ್ದು ಯಾವುದೇ ಸಮಯದಲ್ಲೂ ರಕ್ತದ ಕೊರತೆಯಾಗದಂತೆ ನೋಡಿಕೊಳ್ಳುವುದು ಸೂಕ್ತ ಎಂದರು.

ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಹಿರಿಯ ವೈದ್ಯಾಧಿಕಾರಿ ಮುರಳಿಧರ್ ಮಾತನಾಡಿ ಕೊರೋನಾ ಸೋಂಕು ಹರಡುತ್ತಿರುವ ಹಿನ್ನೆಲೆ ಹೆಚ್ಚು ಜನರು ಒಂದೆಡೆ ಸೇರಬಾರದು ಎನ್ನುವ ಕಾರಣದಿಂದ ಕೆಲದಿನಗಳ ಕಾಲ ರಕ್ತದಾನ ಶಿಬಿರಗಳು ಸ್ಥಗಿತಗೊಂಡಿದ್ದವು ಇದೀಗ ಜಿಲ್ಲೆಯ ಯುವಕರ ಸಂಘ ಸ್ವಯಂ ಇಚ್ಚೆಯಿಂದ ರಕ್ತದಾನ ಶಿಬಿರ ಏರ್ಪಡಿಸಿರುವುದು ಒಳ್ಳೆಯ ಸಂಗತಿ ಎಂದ ಅವರು ರಕ್ತದ ಕೊರತೆ ಸಂದರ್ಭದಲ್ಲಿ ಇಂತಹ ಶಿಬಿರಗಳು ಹೆಚ್ಚು ಅನುಕೂಲವಾಗಲಿದ್ದು ಬಡವರು, ಸಂಕಷ್ಟದಲ್ಲಿರುವವರಿಗೆ ಮತ್ತಷ್ಟು ಪ್ರಯೋಜನವಾಗಲಿದೆ ಎಂದರು.

ರಕ್ತದಾನದ ಸಂದರ್ಭದಲ್ಲಿ ಪ್ರತಿಯೊಬ್ಬರಿಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿಸಲಾಗಿದೆ ಅಲ್ಲದೇ ಆರೋಗ್ಯ ಸ್ವಚ್ಚತೆಯ ಬಗ್ಗೆ ಹೆಚ್ಚು ಗಮನಹರಿಸಿ ಸೋಂಕು ಬರದಂತೆ ತಡೆಯಲು ಅರಿವು ಮೂಡಿಸಲಾಗಿದೆ ಎಂದರು.

ಸ್ವಯಂ ಸೇವಕರಾದ ಭರತ್, ರಘು, ಧನಂಜಯ್‌ಗೌಡ, ಪ್ರದೀಪ್‌ರಾಜ್  ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ