CrimeNEWSನಮ್ಮಜಿಲ್ಲೆ

ಚಾಲಕನ ನಿಯಂತ್ರಣ ತಪ್ಪಿ ಕೆರೆಬಿದ್ದ ಕಾರು: ಒಬ್ಬ ಮೃತ, ಮತ್ತೊಬ್ಬ ಪಾರು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಬಿದ್ದ ಪರಿಣಾಮ ಮೇಲೆ ಬರಲಾಗದೆ ದಿನೇಶ್ (33) ಎಂಬುವರು ಅಂಬಳೆ ಕೆರೆಯಲ್ಲಿ ಮೃತಪಟ್ಟಿದ್ದು, ಮತ್ತೊಬ್ಬರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಇಂದು ಮುಂಜಾನೆ ನಡೆದಿದೆ.

ಗುರುವಾರ ಬೆಳಗ್ಗಿನ ಜಾವ ಚಿಕ್ಕಮಗಳೂರಿನಿಂದ ಅಂಬಳೆ ಗ್ರಾಮಕ್ಕೆ ದಿನೇಶ್‌ ಮತ್ತು ​​ ಸಂತೋಷ್  ಇಬ್ಬರು ಕಾರಿನಲ್ಲಿ  ಹೋಗುತ್ತಿದ್ದರು. ಈ ವೇಳೆ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಕೆರೆಗೆ ಬಿದ್ದಿದೆ. ಪರಿಣಾಮ ದಿನೇಶ್​ ಕಾರಿನೊಳಗೆ ಕೊನೆಯುಸಿರೆಳೆದಿದ್ದಾರೆ.

ದಿನೇಶ್ ಹಾಗೂ ಸಂತೋಷ್ ಅಂಬಳೆ ಗ್ರಾಮದವರಾಗಿದ್ದು, ದಿನೇಶ್‌ಗೆ​​ ಚಿಕ್ಕಮಗಳೂರಿನಲ್ಲಿ ಬಟ್ಟೆ ಅಂಗಡಿ ಇತ್ತು. ಅಲ್ಲೇ ವ್ಯಾಪಾರ ಮಾಡಿಕೊಂಡಿದ್ದರು. ಈ ನಡುವೆ ಇಂದು ಗ್ರಾಮಕ್ಕೆ ಬರುತ್ತಿದ್ದಾಗ ಈ ಘಟನೆ ನಡೆದಿದೆ.

ಅಗ್ನಿ ಶಾಮಕ ದಳ ಹಾಗೂ ಗ್ರಾಮಾಂತರ ಪೊಲೀಸರ ನೇತೃತ್ವದಲ್ಲಿ ದಿನೇಶ್‌​ ಮೃತದೇಹವನ್ನು ನೀರಿನಿಂದ ಹೊರ ತೆಗೆಯಲಾಗಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ