NEWSನಮ್ಮರಾಜ್ಯಸಂಸ್ಕೃತಿ

ಚಾಮುಂಡಿ ಬೆಟ್ಟದಲ್ಲಿ ಮೊಬೈಲ್‌ ಕಸಿದ ವಾನರನಿಗೆ ಬಾಳೆಹಣ್ಣಿನ ಆಮಿಷ!

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಮೊಬೈಲ್ ಕಸಿದ ವಾನರವೊಂದು ಮರವೇರಿ ಭಕ್ತರೊಬ್ಬರಿಗೆ ಕೆಲಕಾಲ ಆಟವಾಡಿಸಿದ ಘಟನೆ ಬೆಟ್ಟದ ತಪ್ಪಲಿನಲ್ಲಿ ನಡೆದಿದೆ.

ಹಾಸನದಿಂದ ಬಂದ ಕುಟುಂಬ ನಾಡದೇವಿ ಚಾಮುಂಡಿಯ ದರ್ಶನ ಪಡೆಯಲು ಮೆಟ್ಟಿಲು ಮಾರ್ಗದಲ್ಲಿ ಸಾಗಲು ಸಜ್ಜಾಗಿದ್ದರು. ಪಾದದ ಬಳಿ ಇರುವ ಚಾಮುಂಡಿ ವಿಗ್ರಹಕ್ಕೆ ಪೂಜೆ ಸಲ್ಲಿಸುವ ವೇಳೆ ಮಹಿಳೆಯ ಕೈಯಲ್ಲಿದ್ದ ಪರ್ಸ್ ಕಸಿದ ಕೋತಿ ಮರವೇರಿ ಕುಳಿತಿದೆ.

ಆ ಬಳಿಕ ಪರ್ಸ್ ನಲ್ಲಿದ್ದ ಒಂದೊಂದೇ ವಸ್ತುಗಳನ್ನು ಬಿಸಾಡಿದ ಮಂಗ ಕೊನೆಗೆ ಮೊಬೈಲ್ ಬಿಡದೆ ಕೊಂಬೆಯಿಂದ ಕೊಂಬೆಗೆ ಜಿಗಿಯುತ್ತ ಭಕ್ತರನ್ನು ಪರದಾಡುವಂತೆ ಮಾಡಿದೆ.

ಈ ವೇಳೆ ಮೊಬೈಲ್‌ ಪಡೆದುಕೊಳ್ಳುವುದುಕ್ಕೆ ವಾನರನಿಗೆ ಬಾಳೆಹಣ್ಣೀನ ಆಮಿಷ ಒಡ್ಡಿದ್ದಾರೆ. ಆದರೆ ಮಂಗಮಾತ್ರ ಮೊಬೈಲ್ ಬಿಡದೆ. ತನ್ನ ಚೇಷ್ಟೆಯನ್ನು ಮುಂದುವರಿಇದೆ. ಹೀಗೆ ವಾನರ ಸುಮಾರು ಅರ್ಧಗಂಟೆ ಕಾಲ ತನ್ನ ಕುಚೇಷ್ಟೆ ಮುಂದುವರಿಸಿ ಕೊನೆಗೆ ತುಪುಕ್‌ ಎಂದುಮೊಬೈಲ್‌ ಬಿಸಾಡಿತು.

ಸದ್ಯ ಕೊನೆಗೂ ಮೊಬೈಲ್ ಚಿಕ್ಕಿತಲ್ಲ ಎಂದು ಭಕ್ತರು ನೆಮ್ಮದಿಯಿಂದ ನಾಡದೇವಿಯ ದರ್ಶನಕ್ಕೆ ತೆರಳಿದರು. ಈ ವಿಡಿಯೋ ಜಾಲತಾಣದಲ್ಲಿ ಈಗ ಫುಲ್ ವೈರಲ್ ಆಗುತ್ತದ್ದು ವಾರನರ ಆಟವನ್ನು ತಾಮಾಸೆಯಿಂದಲೇ ನೋಡಿ ಖುಷಿಪಡುತ್ತಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ