NEWSನಮ್ಮರಾಜ್ಯವಿಡಿಯೋ

NWKRTC: ಸೋರುತಿಹುದು ಬಸ್‌ ಮಾಳಿಗೆ ಅಧಿಕಾರಿಗಳ ಅಜ್ಞಾನದಿಂದ ಮಳೆಗೆ ಸೋರುತಿಹುದು..!!

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್‌ ಮಾಳಿಗೆ ಮಳೆಗೆ ಸೋರುತಿದ್ದು  ಇದು ಅಧಿಕಾರಿಗಳ ಬೇಜವಾಬ್ದಾರಿಗೆ ಹಿಡಿದ ಕನ್ನಡಿಯಾಗಿದೆ.

ಸಂಸ್ಥೆಯ ಧಾರವಾಡ  ಘಟಕದ ಬಸ್‌ ಛಾವಣಿ ತೂತು ಬಿದ್ದಿದ್ದು ಮಳೆಗೆ ಅದು ಸೋರುತ್ತಿದೆ. ಆ ಬಸ್ಸನ್ನೇ ಚಾಲಕ ಕೊಡೆ ಹಿಡಿದುಕೊಂಡು ಮಳೆಯೊಳಗೆ ಓಡಿಸುತ್ತಿರುವುದನ್ನು ಪ್ರಯಾಣಿಕರು ವಿಡಿಯೋ ಮಾಡಿದ್ದಾರೆ.

ಇದು ಘಟಕದ ಅಧಿಕಾರಿಗಳು ಮತ್ತು ಸಂಸ್ಥೆಯ ಅಧಿಕಾರಿಗಳ ನಡೆಯನ್ನು ತೋರಿಸುವಂತಿದೆ. ಬಸ್‌ಗಳನ್ನು ರಿಪೇರಿ ಮಾಡದೆ ಬಸ್‌ಗಳ ಫಿಟ್‌ನೆಸ್‌ ನೋಡದೆ ಚಾಲಕರ ಕೈಗೆ ಬಸ್‌ಕೊಟ್ಟು ಕಳುಹಿಸುವ ಚಾಳಿಯಿಂದ ಈ ರೀತಿಯ ಅವಾಂತರಗಳು ನಡೆಯುತ್ತಿವೆ.

ಇನ್ನು ಚಾಲಕರು ಇಂಥ ಬಸ್‌ ಬೇಡ ಎಂದು ಹೇಳಿದರೆ ಅವರಿಗೆ ಮೆಮೋ ಕೊಡುವುದು ಇಲ್ಲ ಬೇರೆ ಬಸ್‌ ಕೊಡದೆ ಡಿಪೋನಲ್ಲೇ ಕೂರಿಸಿ ಬಳಿಕ ಗೈರು ಹಾಜರಿ ಮಾಡಿ ವೇತನ ಬರದಂತೆ ಮಾಡುವುದು.

ಇದನ್ನು ಪ್ರಶ್ನಿಸಿದರೆ ಮೇಲಧಿಕಾರಿಗಳಿಗೆ ಎದುರು ಮಾತನಾಡಿದ ಎಂದು ಹೇಳಿ ಮೆಮೋ ಕೊಟ್ಟು ಬಳಿಕ ಅಮಾನತು ಮಾಡುವುದು. ಇಲ್ಲಿ ಚಾಲಕರು ಬಸ್‌ ಸರಿಯಿಲ್ಲ ಎಂದು ಹೇಳುವುದಕ್ಕೂ ಬಿಡದೆ ಈ ರೀತಿ ಅಧಿಕಾರಿಗಳು ದಬ್ಬಾಳಿಕ ಮಾಡುತ್ತಿರುವುದರಿಂದ ಇಂದು ಕೊಡೆ ಹಿಡಿದುಕೊಂಡು ಬಸ್‌ ಓಡಿಸುವ ಸ್ಥಿತಿ ಚಾಲಕರಿಗೆ ಬಂದಿದೆ.

ಇನ್ನಾದರೂ ಈ ಬಗ್ಗೆ ಸಾರಿಗೆ ಸಚಿವರು ಮತ್ತು ನಿಗಮದ ವ್ಯವಸ್ಥಾಪಕ ನಿರ್ದೇಶಕರು  ಗಮನ ಹರಿಸಿ ಬೇಜವಾಬ್ದಾರಿಯಿಂದ ನಡೆದುಕೊಳ್ಳುತಿರುವ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು ಎಂದು ಪ್ರಯಾಣಿಕರೆ ಒತ್ತಾಯಿಸಿದ್ದಾರೆ.

  • ಸ್ಪಷ್ಟನೆ: ಈ ಮೊದಲು ಅಂದರೆ ಗುರುವಾರ ನ್ಯೂಸ್‌ ಬಂದ ಸಮಯದಲ್ಲಿ ಧಾರವಾಡ ಗ್ರಾಮಾಂತರ ಘಟಕ ಎಂಬುದರ ಬದಲಿಗೆ  ಹಾವೇರಿ ವಿಭಾಗದ ಹಾವೇರಿ ಘಟಕದ ಬಸ್‌ ಮಳೆಗೆ ಸೋರುತ್ತಿದೆ ಎಂದು ವರದಿ ಪ್ರಸಾರವಾಗಿದ್ದಕ್ಕೆ ವಿಷಾದಿಸುತ್ತೇವೆ. -ಸಂ

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ