ಮಡಿಕೇರಿ: ದೇಶದಲ್ಲಿ ಯೋಧರ ಬಗ್ಗೆ ಅಪಾರವಾದ ಕಾಳಜಿ ಹಾಗೂ ಗೌರವವಿದೆ. ದೇಶ ಕಾಯುವ ಸೈನಿಕರಿಗೆ ಅವಶ್ಯಬಿದ್ದಾಗ ಒಂದಲ್ಲ ಒಂದು ರೀತಿಯಲ್ಲಿ ನಮ್ಮಿಂದ ಸಾಧ್ಯವಾಗುವ ಅಳಿಲ ಸೇವೆ ಕೂಡ ಮಾಡುತ್ತಿರುತ್ತೇವೆ. ಆದರೆ ಯೋಧನ ವಿಷಯದಲ್ಲಿ KSRTC ಬಸ್ಸೊಂದರ ಚಾಲಕ ಹಾಗೂ ನಿರ್ವಾಹಕರು ಏಕೋ ಸ್ವಲ್ಪ ಮಾನವೀಯತೆ ಮರೆತ್ತಂತೆ ಕಾಣುತ್ತಿದೆ.
ಮನವಿ ಮಾಡಿದರೂ ಕೂಡ ರಿಕ್ವೆಸ್ಟ್ ಸ್ಟಾಪ್ ಕೊಡದ ಕಾರಣ, ಯೋಧರೊಬ್ಬರು ನಡುರಾತ್ರಿ 2 ಕಿಮೀ ಗಿಂತಲೂ ಹೆಚ್ಚು ದೂರ ನಡೆದು ಮನೆ ಸೇರಿದ್ದಾರೆ.
ಆ ರಾತ್ರಿ ನಡೆದಿದ್ದಿಷ್ಟು: ತ್ರಿಪುರದಲ್ಲಿ ಕರ್ತವ್ಯದಲ್ಲಿರುವ ಕೊಡಗು ಜಿಲ್ಲೆಯ ಯೋಧರೊಬ್ಬರು ರಜೆಯಲ್ಲಿ ಅಲ್ಲಿಂದ ನಾಲ್ಕು ದಿನ ನಿದ್ದೆಗೆಟ್ಟು ಕೊಡಗಿಗೆ ಬಂದಿದ್ದಾರೆ. ಮೊನ್ನೆ ದಿನ ತುರ್ತಾಗಿ ಉಡುಪಿಗೆ ತೆರಳಿದ್ದವರು ಸಂಜೆ ಮಂಗಳೂರಿಗೆ ಹಿಂತಿರುಗಿ ಅಲ್ಲಿಂದ KSRTC ಬಸ್ಸಿನಲ್ಲಿ ಮಡಿಕೇರಿಗೆ ಪ್ರಯಾಣಿಸಿದ್ದಾರೆ.
ಆಗ ತಡರಾತ್ರಿಯಾಗಿದ್ದ ಕಾರಣ ಊರಿಗೆ ತಲುಪುವ ಸ್ಥಿತಿಯಲ್ಲಿರಲಿಲ್ಲ. ಹೀಗಾಗಿ ಸುದರ್ಶನ ಸರ್ಕಲ್ ಬಳಿಯಲ್ಲಿರುವ ಸಹೋದರನ ಮನೆಗೆ ಹೋಗಲು ನಿರ್ಧರಿಸಿದ್ದಾರೆ. ಬಸ್ ಮಡಿಕೇರಿ ನಿಲ್ದಾಣ ತಲುಪಿದಾಗ ಚಾಲಕ ಹಾಗೂ ನಿರ್ವಾಹಕನ ಬಳಿ ಸುದರ್ಶನ ಸರ್ಕಲ್ ಬಳಿ ಬಸ್ ನಿಲ್ಲಿಸುವಂತೆ ರಿಕ್ವೆಸ್ಟ್ ಮಾಡಿಕೊಂಡಿದ್ದಾರೆ. ಆದರೆ ಇದಕ್ಕೆ ಇವರಿಬ್ಬರು ನಿರಾಕರಿಸಿದ್ದಾರೆ.
ಈ ವೇಳೆ ತಾನು ಮಿಲಿಟರಿಯವನು ಎಂದು ತಿಳಿಸಿದರೂ ಕೂಡ ಚಾಲನಾ ಸಿಬ್ಬಂದಿ ಒಪ್ಪಲಿಲ್ಲ. ಸುಂಟಿಕೊಪ್ಪಕ್ಕೆ ಟಿಕೆಟ್ ತೆಗೆದು ಕೊಳ್ಳುವುದಾಗಿ ಹೇಳಿದರೂ ಕೂಡ ಬಸ್ ನಿಲ್ಲಿಸಲು ಆಗುವುದಿಲ್ಲ ಎಂದಿದ್ದಾರೆ ಎನ್ನಲಾಗಿದೆ. ಕೊನೆಗೆ ವಿಧಿ ಇಲ್ಲದೆ ಮಧ್ಯರಾತ್ರಿ ಮಡಿಕೇರಿ ಬಸ್ ನಿಲ್ದಾಣದಲ್ಲೇ ಇಳಿದ ಇಳಿದ ಸುದರ್ಶನ ಸರ್ಕಲ್ ವರೆಗೆ ನಡೆದುಕೊಂಡೇ ಹೋಗಿ ಸಹೋದರನ ಮನೆ ತಲುಪಿದ್ದಾರೆ.
ಇನ್ನು ಈ ಯೋಧರಿಗೆ ಹಗಲಿರುಳು ನಡೆದುಕೊಂಡು ಹೋಗುವುದು ಪ್ರಯಾಸವಲ್ಲ. ಅದೇ ರೀತಿ ನಿಯಮ ಪ್ರಕಾರ ಮಾರ್ಗಮಧ್ಯದಲ್ಲಿ ಬಸ್ ನಿಲ್ಲಿಸಲು ಅವಕಾಶವಿಲ್ಲ ಆದರೂ ಮುಂದಿನ ಊರಿಗೆ ಟಿಕೆಟ್ ನೀಡಿಯಾದರೂ ಯೋಧನನ್ನು ಮಾನವೀಯತೆ ದೃಷ್ಟಿಯಿಂದ ಬಸ್ ಸಾಗುವ ಮಾರ್ಗಮಧ್ಯೆ ಇರುವ ಸುದರ್ಶನ್ ಸರ್ಕಲ್ ಬಳಿ ಇಳಿಸಬಹುದಿತ್ತು.
ದೇಶದ ಹಲವೆಡೆ ಊರಿಗೆ ರಜೆಯಲ್ಲಿ ತೆರಳಿದ್ದ ಯೋಧರನ್ನು ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ರಜೆ ಮೊಟಕುಗೊಳಿಸಿ ವಾಪಸ್ ಕರೆಸಿಕೊಳ್ಳಲಾಗುತ್ತಿದೆ. ಉತ್ತರಾಖಂಡದಲ್ಲಿ ಯೋಧರಿಗೆ ಟ್ಯಾಕ್ಸಿ ಚಾಲಕರು 50% ರಿಯಾಯಿತಿಯನ್ನು ನೀಡುತ್ತಿದ್ದಾರೆ.
ಕೆಲವೆಡೆ ಉಚಿತ ಸೇವೆಯನ್ನು ಸಹ ನೀಡಲಾಗುತ್ತಿದೆ. ಸೈನಿಕರಿಗಾಗಿ ಸೀಟುಗಳನ್ನು ಕಾಯ್ದಿರಿಸಲಾಗಿದೆ. ಇವೆಲ್ಲ ಪ್ರಚಾರಗೊಳ್ಳದ ಮೌನ ಸೇವೆಗಳಾಗಿವೆ. ಆದರೆ.. ನಮ್ಮೂರಲ್ಲಿ ಪರಿಸ್ಥಿತಿ ವ್ಯತಿರಿಕ್ತವಾಗಿದೆ ಎಂದು ಯೋಧ ಬೇಸರ ವ್ಯಕ್ತ ಪಡಿಸಿದ್ದಾರೆ.
ಅಲ್ಲದೇ ಇನ್ನು ಮುಂದಾದರೂ KSRTC ಚಾಲಕರು ಮತ್ತು ನಿರ್ವಾಹಕರು ಯೋಧರೊಂದಿಗೆ ಸಕಾರಾತ್ಮಕವಾಗಿ ಸ್ಪಂದಿಸುವಂತಾಗಲಿ ಎಂದು ಆಶಿಸಿರುವ ಯೋಧ ಕ್ಯೂಟ್ ಕೂರ್ಗ್ ನೊಂದಿಗೆ ಮೇ 9ರಂದು ತಮಗಾದ ಅನುಭವವನ್ನು ಹಂಚಿಕೊಂಡಿದ್ದಾರೆ.
Related

You Might Also Like
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...
BMTC: ಬ್ರೇಕ್ ಫೇಲಾಗಿ ಕಂದಕಕ್ಕೆ ನುಗ್ಗಿದ ಬಸ್- ಅದೃಷ್ಟವಶಾತ್ ಪ್ರಯಾಣಿಕರು ಸೇಫ್
ಆನೇಕಲ್: ಬ್ರೇಕ್ ಫೇಲಾಗಿ ರಸ್ತೆ ಬದಿಯ ಕಂದಕಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನುಗ್ಗಿರುವ ಘಟನೆ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಹರಪ್ಪನಹಳ್ಳಿ ಬಳಿ...
ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಸಿಗುತ್ತಿದೆ ಮುಕ್ತಿ
ಬೆಂಗಳೂರು: ರಾಜ್ಯ ರಾಜಧಾನಿಯ ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಮುಕ್ತಿ ಸಿಗುತ್ತಿದೆ. ಹೌದು! ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಉದ್ಘಾಟನೆ ಆಗುತ್ತಿದೆ. ಇಂದು...
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...