NEWSನಮ್ಮಜಿಲ್ಲೆನಮ್ಮರಾಜ್ಯವಿಡಿಯೋ

ಮಳೆಗೆ ಸೋರುತ್ತಿರುವ ಬಿಎಂಟಿಸಿ ಬನಶಂಕರಿ ಟಿಟಿಎಂಸಿ!!

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬನಶಂಕರಿ ಟಿಟಿಎಂಸಿ ಬಸ್ ನಿಲ್ದಾಣ  ಮಳೆಗೆ ಸೋರುತ್ತಿದೆ.

ಈ ವೇಳೆ ಸಾರ್ವಜನಿಕರು ಕುಳಿತುಕೊಳ್ಳುವುದಿರಲಿ ನಿಲ್ಲುವುದಕ್ಕೂ ಆಗುತ್ತಿಲ್ಲ. ಸಾರಿಗೆ ಸಚಿವರು ಮತ್ತು ಅಧಿಕಾರಿಗಳಿಗೆ ಈ ಬಗ್ಗೆ ಕಾಳಜಿಯೇ ಇಲ್ಲವಾಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ರಾಜಧಾನಿಗೆ ದೇಶ ವಿದೇಶದಿಂದ ಲಕ್ಷಾಂತರ ಮಂದಿ ಬಂದು ನೆಲೆಸಿದ್ದಾರೆ. ಆದರೆ, ಇಲ್ಲಿನ ಅಧಿಕಾರಿಗಳ ನಿರ್ಲಕ್ಷ್ಯದಿಂದ ಮಳೆ ಬಂದರೆ ಕುಳಿತುಕೊಳ್ಳುವುದಕ್ಕೂ ಆಗದ ಪರಿಸ್ಥಿತಿ ಎದುರಾಗಿದೆ.

ಈ ಬಗ್ಗೆ ವಿದೇಶದಿಂದ ಪ್ರವಾಸಕ್ಕೆ ಬಂದು ಹೋಗುವ ವಿದೇಶಿಗರ ಮನಸ್ಸಿನಲ್ಲಿ ಯಾವ ರೀತಿಯ ಭಾವನೆ ಮೂಡುತ್ತದೆ ಎಂಬ ಅರಿವು ಕೂಡ ಇಲ್ಲದವರಂತೆ ಅಧಿಕಾರಿಗಳು ಮತ್ತು ಸರ್ಕಾರ ನಡೆದುಕೊಳ್ಳುತ್ತಿರುವುದುವು ಭಾರಿ ಖೇದಕರ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈಗ ಮಳೆಗಾಲ ಆರಂಭವಾಗಿದ್ದು ಇನ್ನುಮೇಲಾದರು ಈ ರೀತಿ ನಿಲ್ದಾಣಗಳು ಸೋರದಂತೆ ಅದರಲ್ಲೂ ಟಿಟಿಎಂಸಿಗಳಲ್ಲಿ ಇಂಥ ಆವಂತರಗಳು ಆಗದಂತೆ ನೋಡಿಕೊಳ್ಳಬೇಕಿದೆ ಎಂದು ನಾಗರಿಕರು ಸಲಹೆ ನೀಡಿದ್ದಾರೆ.

ಇತ್ತೀಚೆಗೆ ಮಳೆಗೆ ಬಿಎಂಟಿಸಿ ಜಯನಗರ 4ನೇ ಘಟಕದ ಬಸ್‌ ಸೋರುತ್ತಿದ್ದರ ಬಗ್ಗೆ ಪ್ರಯಾಣಿಕರೊಬ್ಬರು ಫೋಟೋ ತೆಗೆದು ವಿಜಯಪಥ ಕಚೇರಿಗೆ ಕಳುಹಿಸಿದ್ದರು. ಈ ಬಗ್ಗೆ ವರದಿ ಬಂದ ಬಳಿಕ ಬಸ್‌ ಸೋರದಂತೆ ಮಾಡಿದ್ದಾರೆ.

ಇನ್ನು ಈ ರೀತಿ ಸೋರುತ್ತಿರುವ ಬಸ್‌ಗಳನ್ನು ಆಯಾಯ ಡಿಪೋ ವ್ಯವಸ್ಥಾಪಕರು ಸಂಬಂಧ ಪಟ್ಟವರಿಗೆ ನೋಡಿಕೊಳ್ಳುವಂತೆ ಸೂಚನೆ ನೀಡಿ ಮಾರ್ಗಕ್ಕೆ ಇಳಿಯುವ ಮುನ್ನವೇ ಸರಿಪಡಿಸಬೇಕು ಎಂದು ಜನತೆ ಆಗ್ರಹಿಸಿದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ