CrimeNEWSನಮ್ಮಜಿಲ್ಲೆ

ಕುಡಿದ ಮತ್ತಿನಲ್ಲಿ ಮಹಿಳೆ, ಯುವತಿ ಮೇಲೆ ಮೂವರಿದ್ದ ಗ್ಯಾಂಗ್‌ ಹಲ್ಲೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕುಡಿದ ಮತ್ತಿನಲ್ಲಿ ಕ್ಲುಲ್ಲಕ ಕಾರಣಕ್ಕೆ ಮಹಿಳೆ ಮತ್ತು ಯುವತಿಯೊಬ್ಬರು ಪುಂಡರು ಎಳೆದಾಡಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಿನ್ನೆ ಸಂಜೆ ನಡೆದಿದೆ.

ಆವಲಹಳ್ಳಿಯಲ್ಲಿ ಭಾನುವಾರ ಸಂಜೆ 6 ಗಂಟೆಗೆ ಘಟನೆ ನಡೆದಿದ್ದು, ಬಾಲಾಜಿ, ಯೋಗಿ ಎಂಬುವರು ಸೇರಿದಂತೆ ಮೂವರು ಆರೋಪಿಗಳೂ ಈ ಕೃತ್ಯ ಎಸೆಗಿದ್ದಾರೆ.

ಮಹಿಳೆ ಮತ್ತು ಯುವತಿ ಮೇಲೆ ಸಾರ್ವಜನಿಕವಾಗಿ ಹಲ್ಲೆ ಮಾಡಿದ್ದಲ್ಲದೇ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಆರೋಪಿಗಳು. ಇದನ್ನು ಕಂಡ ನೆರೆಹೊರೆಯವರು ಸಹಾಯಕ್ಕೆ ಬಂದಿದ್ದರಿಂದ ಯುವತಿ ಮತ್ತು ಮಹಿಳೆ ಕೂದಲೆಳೆ ಅಂತರದಲ್ಲಿ ಆರೋಪಿಗಳ ಕೈಯಿಂದ ಬಚಾವಾಗಿದ್ದಾರೆ.

ರಸ್ತೆಯಲ್ಲಿ ಮಗ ಮಕ್ಕಳೊಂದಿಗೆ ಆಟವಾಡಿದ್ದನು. ಈ ವೇಳೆ ಮನೆ ಬಳಿ ಬಂದ ಗ್ಯಾಂಗ್ ನಿಂದಿಸಿದೆ. ಅದನ್ನು ಪ್ರಶ್ನಿಸಿದ್ದಕ್ಕೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಪುಂಡರು ಯುವತಿಯ ಕೂದಲು ಹಿಡಿದೆಳೆದು ಅಟ್ಟಾಡಿಸುವ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್‍ಗಳಲ್ಲಿ ಸೆರೆಹಿಡಿದಿದ್ದಾರೆ.

ಸದ್ಯ ಆರೋಪಿಗಳಾದ ಬಾಲಾಜಿ ಮತ್ತು ಯೋಗಿ ಇತರರ ವಿರುದ್ಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದ್ದು, ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ.

ದೂರು ದಾಖಲಿಸಿಕೊಂಡಿರುವ ಪೊಲೀಸರು ಐಪಿಸಿ ಸೆಕ್ಷನ್ 506 (ಬೆದರಿಕೆ), 34, 504 (ಶಾಂತಿ ಕದಡುವ ಪ್ರಯತ್ನ), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 354 (ಮಹಿಳೆಯ ಮೇಲೆ ದೌರ್ಜನ್ಯ) ಅಡಿ ಕೇಸ್ ದಾಖಲಿಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ