NEWSನಮ್ಮಜಿಲ್ಲೆ

KSRTC: ಕನಕಪುರದಿಂದ ಮೇದಾರ ದೊಡ್ಡಿಗೆ ಇಂದಿನಿಂದ ಬಸ್‌ ಸಂಚಾರ- ಗ್ರಾಮಸ್ಥರಲ್ಲಿ ಸಡಗರ

ವಿಜಯಪಥ ಸಮಗ್ರ ಸುದ್ದಿ

ಕನಕಪುರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ರಾಮನಗರ ವಿಭಾಗದ ಕನಕಪುರ ಘಟಕದಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳ ಕೋರಿಕೆ ಮೇರೆಗೆ ಕನಕಪುರದಿಂದ ಚಿಕ್ಕ ಮುದುವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇದಾರ ದೊಡ್ಡಿ ಗ್ರಾಮಕ್ಕೆ ಇಂದಿನಿಂದ ಬಸ್ಸೊಂದನ್ನು ಬಿಡಲಾಗಿದೆ.

ಸೋಮವಾರ ಬೆಳಗ್ಗೆ ಬಸ್‌ ಗ್ರಾಮಕ್ಕೆ ಬರುತ್ತಿದ್ದಂತೆ ಗ್ರಾಮದ ಮುಖಂಡರು ಮತ್ತು ಗ್ರಾಮಸ್ಥರು ಬಸ್‌ಗೆ ಪೂಜೆ ಸಲ್ಲಿಸಿ ಬಳಿಕ ಪಟಾಕಿ ಸಿಡಿಸಿ  ಸಂಭ್ರಮಿಸಿದರು.

ಈ ವೇಳೆ ಮಾತನಾಡಿದ ಗ್ರಾಮಸ್ಥರು, ನಮ್ಮ ಗ್ರಾಮಕ್ಕೆ ಹಲವು ವರ್ಷಗಳಿಂದ ಬಸ್‌ ಬರುತ್ತಿರಲಿಲ್ಲ, ಇದರಿಂದ ಗ್ರಾಮದಿಂದ ಬೇರೆಡೆಗೆ ಶಾಲೆ, ಕಾಲೇಜುಗಳೀಗೆ ಹೋಗಿ ಬರುವುದಕ್ಕೆ ವಿದ್ಯಾರ್ಥಿಗಳಿಗೆ ತುಂಬ ತೊಂದರೆ ಆಗುತ್ತಿತ್ತು. ಈಗ ಅನುಕೂಲವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಇನ್ನು ನಮ್ಮ ಗ್ರಾಮಕ್ಕೆ ಬೆಳಗ್ಗೆ, ಮಧ್ಯಾಹ್ನ ಹಾಗೂ ಸಂಜೆ ಮೂರು ಟೈಂ ಬಸ್‌ ಬಂದರೆ ಅನುಕೂಲವಾಗುತ್ತದೆ. ನಮ್ಮ ಗ್ರಾಮದವರು ತಾಲೂಕು ಕೇಂದ್ರಕ್ಕೆ ಕೆಲಸದ ನಿಮಿತ್ತ ಹೋಗಿ ಬರುವುದಕ್ಕೂ ಅನುಕೂಲವಾಗುತ್ತದೆ ಎಂದು ಖುಷಿ ಹಂಚಿಕೊಂಡು ನಿಗಮದ ಅಧಿಕಾರಿಗಳಿಗೆ ಅದರಲ್ಲೂ ಕನಕಪುರ ಘಟಕ ವ್ಯವಸ್ಥಾಪಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಅಲ್ಲದೆ ಈವರೆಗೂ ಬಸ್ ಸೌಕರ್ಯ ಇಲ್ಲದ ಕಡೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬೆಳಗ್ಗೆ ಮತ್ತು ಸಂಜೆ ಬಸ್ ಸೌಕರ್ಯವನ್ನು ಕಲ್ಪಿಸಿಕೊಟ್ಟಿರುವುದು ಉತ್ತಮ ಬೆಳವಣಿಗೆ ಈ ಬಸ್‌ ನಿಲ್ಲದಂತೆ ಘಟಕ ವ್ಯವಸ್ಥಾಪಕರು ಕಾಳಜಿ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ