NEWSಕೃಷಿನಮ್ಮರಾಜ್ಯ

ಮಂಡ್ಯ-ಕೆಆರ್‌ಎಸ್‌ಗೆ ಒಳಹರಿವು ಹೆಚ್ಚಳ: ರೈತರ, ಸಿಎಂ ಮುಖದಲ್ಲಿ ಮಂದಹಾಸ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಈ ವರ್ಷದ ವರುಣ ರಾಜ್ಯದಲ್ಲಿ ಅಬ್ಬರಿಸುತ್ತಿದ್ದು, ಕೆರೆ, ಕಟ್ಟೆಗಳು ತುಂಬುತ್ತಿವೆ. ಇದರಿಂದ ಅನ್ನದಾತರಿಗಂತೂ ಸಂತಸ ಮನೆ ಮಾಡಿದ್ದು, ಉತ್ತಮ ಬೆಳೆ ತೆಗೆಯುವುದಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಜತೆಗೆ ಈ ಬಾರಿ ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದು ಸರ್ಕಾರಕ್ಕೂ ಖುಷಿಯ ವಿಷಯವಾಗಿದೆ.

ಹೌದು! ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿದೆ ಹೀಗಾಗಿ ಕೃಷ್ಣರಾಜ ಸಾಗರ ಅಣೆಕಟ್ಟೆಗೆ ನೀರು ಹರಿದು ಬರುತ್ತಿದೆ. ಇದು ರೈತರ ಮತ್ತು ರಾಜ್ಯದ ಮುಖ್ಯಮಂತ್ರಿಗಳ ಮುಖದಲ್ಲೂ ಮಂದಹಾಸ ಮೂಡುವಂತೆ ಮಾಡಿದೆ.

ರಾಜ್ಯದಲ್ಲಿ ಕಾವೇರಿ ಒಡಲನ್ನೇ ನಂಬಿಕೊಂಡೇ ಕೋಟ್ಯಂತರ ಕುಟುಂಬಗಳು ಜೀವನ ನಡೆಸುತ್ತಿವೆ. ಕೃಷಿ, ಕುಡಿಯಲು ಕಾವೇರಿಯನ್ನೇ ನಂಬಿರುವ ಕೋಟ್ಯಂತರ ಕುಟುಂಬಗಳಿವೆ. ಆದರೆ ಕಳೆದ ವರ್ಷ ಕಾವೇರಿ ನೀರಿನ ಅಭಾವ ಉಂಟಾಗಿ ಬೆಂಗಳೂರಿನ ಜನತೆಯೂ ತತ್ತರಿಸಿ ಹೋಗಿದ್ದರು. ಈ ವರ್ಷದ ವರುಣನ ಅಬ್ಬರ ನೋಡಿದರೆ ಕೆಆರ್​ಎಸ್ ಅತೀ ಶೀಘ್ರದಲ್ಲೇ ತುಂಬಲಿದೆ ಎಂಬ ಭರವಸೆ ಮೂಡುತ್ತಿದೆ.

ಇನ್ನು ಇಂದಿನ ಕೆಆರ್‌ಎಸ್ ನೀರಿನ ಮಟ್ಟ ತಿಳಿಯುವುದಾದರೆ:
ಗರಿಷ್ಠ ಮಟ್ಟ – 124.80 ಅಡಿ
ಇಂದಿನ ಮಟ್ಟ – 84.95 ಅಡಿ
ಗರಿಷ್ಠ ಸಾಂದ್ರತೆ – 49.452 ಟಿಎಂಸಿ
ಇಂದಿನ ಸಾಂದ್ರತೆ – 13.142 ಟಿಎಂಸಿ
ಒಳ ಹರಿವು – 1,423 ಕ್ಯೂಸೆಕ್
ಹೊರ ಹರಿವು – 444 ಕ್ಯೂಸೆಕ್

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ