NEWSಬೆಂಗಳೂರುರಾಜಕೀಯ

44ನೇ ವಯಸ್ಸಿಗೇ ಸಿಎಂ ಆಗಿ ಸಾಧನೆಗೈದ ಆರ್. ಗುಂಡೂರಾವ್: ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಆರ್.ಗುಂಡೂರಾವ್ ಅವರು ಸಿಎಂ ಆಗಿದ್ದಾಗ ನಾನು ಜನತಾ ಪಕ್ಷದಲ್ಲಿ ಇದ್ದೇ, ಲೋಕಸಭಾ ಸದಸ್ಯರಾಗಿದ್ದ ಸಂದರ್ಭದಲ್ಲಿ ಅವರನ್ನು ನೋಡಲು ಹೋಗಿದ್ದೇ ಎಂದು ಸಿಎಂ ಸಿದ್ದರಾಮಯ್ಯ ಹಳೆಯ ನೆನಪನ್ನು ಮೆಲುಕುಹಾಕಿದರು.

ಇಂದು ಸಂಜೆ ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಾಂತಲಾ ಸಿಲ್ಕ್ಸ್ ಮುಂಭಾಗದಲ್ಲಿ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ ಆರ್.ಗುಂಡೂರಾವ್ ಅವರು ಪ್ರತಿಮೆ ಅನಾವರಣ ಮತ್ತು ವೃತ್ತ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾಜಿ ಮುಖ್ಯಮಂತ್ರಿಗಳಾದ ಆರ್.ಗುಂಡೂರಾವ್ ರವರ ಪುತ್ಥಳಿ ಮತ್ತು ವೃತ್ತ (ಸರ್ಕಲ್) ಅನಾವರಣ ಮಾಡಲಾಗಿದೆ. ಅವರು 1983ರಲ್ಲಿ ಮೂರು ವರ್ಷ ಮುಖ್ಯಮಂತ್ರಿಯಾಗಿದ್ದರು, ದೇವರಾಜ ಅರಸು ಕಾಂಗ್ರೆಸ್ ತೊರೆದಾಗ, ಗುಂಡೂರಾವ್ ಅವರು ಕಾಂಗ್ರೆಸ್ ಪಕ್ಷದಲ್ಲೇ ಉಳಿದರು, ಇನ್ನು ಲೋಕಸಭಾ ಚುನಾವಣೆಯಲ್ಲಿ ಅರಸು ಅವರ ಪಾರ್ಟಿ ಒಂದು ಸೀಟು ಗೆಲ್ಲಲಿಲ್ಲ.

ಈ ವೇಳೆ ಎಫ್.ಎಂ.ಖಾನ್ ಅವರು ಇಂದಿರಾ ಗಾಂಧಿ ಅವರ ಫೋಟೋ ತೋರಿಸಿದರೆ ಸಾಕು ಗೆಲ್ಲುತ್ತೀರ ಎಂದು ಹೇಳಿದ್ದರು. ಅದರಂತೆ ಆರ್.ಗುಂಡೂರಾವ್ ಅವರ ನೇತೃತ್ವದಲ್ಲಿ 27 ಲೋಕಸಭಾ ಕ್ಷೇತ್ರದಲ್ಲಿ ವಿಜಯಶಾಲಿಯಾದರು ಎಂದು ಅವರ ಹೋರಾಟದವನ್ನು ಮೆಲುಕುಹಾಕಿದರು.

ಇನ್ನು ಮೈಸೂರಿನಲ್ಲಿ ರೈತ ಸಂಘ ಆಯೋಜಿಸಿದ್ದ ಚರ್ಚೆಯಲ್ಲಿ ನಂಜುಂಡಸ್ವಾಮಿ ಅವರ ಜತೆಯಲ್ಲಿ ನಾನು ಭಾಗವಹಿಸಿದ್ದೇ. ಅಂದೇ ನಾನು ಗುಂಡೂರಾವ್ ಅವರನ್ನ ನೇರ ಭೇಟಿ ಮಾಡಿದೆ. ಆರ್.ಗುಂಡೂರಾವ್ ದಕ್ಷ ಆಡಳಿತಗಾರ ಎಂಬುದು ಮುಖ್ಯ. ಮುಖ್ಯಮಂತ್ರಿಯಾಗಿ ಜನಪರ ಕೆಲಸ ಮಾಡಿದ್ದಾರೆ. ಅವರು ಮಾಡಿರುವ ಆನೇಕ ಕೆಲಸಗಳಿಗೆ ಸಾಕ್ಷ್ಮಿ ಗುಡ್ಡೆಗಳೇ ಇವೆ, ಶಿಕ್ಷಣಕ್ಕೆ ಒತ್ತು ನೀಡಿದರು ಎಂದರು.

ವರ್ಗಾವಣೆ ನೀತಿಯಲ್ಲಿ ಕಠಿಣ ನಿಲುವು ತಾಳಿದ್ದರು, ದಿವಂಗತ ಮಾಜಿ ಪ್ರಧಾನಿ ಇಂದಿರಾಗಾಂಧಿ, ಸಂಜಯ್ ಅವರ ಹತ್ತಿರ ನಿಕಟ ಸಂಪರ್ಕವಿದ್ದ ಅವರು ರಾಜಕೀಯದಲ್ಲಿ ಹಲವಾರು ಜನರನ್ನ ಬೆಳಸಿದರು, 44 ವರ್ಷ ವಯಸ್ಸಿನಲ್ಲಿಯೇ ಮುಖ್ಯಮಂತ್ರಿಯಾದರು. ಮೂರು ವರ್ಷ ಸಿಎಂ ಆಗಿ ಉತ್ತಮ ಕೆಲಸ ಮಾಡಿದ್ದಾರೆ ಅವರ ಪ್ರತಿಮೆ ಸ್ಥಾಪಿಸಿರುವುದು ಒಳ್ಳೆಯ ಕೆಲಸ ಎಂದು ಸಿದ್ದರಾಮಯ್ಯ ಹೇಳಿದರು.

ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ನಮ್ಮ ತಂದೆ ಆರ್.ಗುಂಡೂರಾವ್ ಅವರು ಬ್ರಾಹ್ಮಣ ಸಮುದಾಯ, ಶಿಕ್ಷಕ ಕುಟುಂಬದ ಮಗನಾದ ಸಿಎಂ ಆಗಿ ಅಧಿಕಾರ ಮಾಡಿದ್ದು ಈಗ ಇತಿಹಾಸ. ಹಂತ, ಹಂತವಾಗಿ ಬೆಳೆದು ಎರಡು ಬಾರಿ ಶಾಸಕರಾಗಿ ನಂತರ ವಿಪಕ್ಷದ ನಾಯಕರಾಗಿ, ಮುಖ್ಯಮಂತ್ರಿಯಾದರು.

ರಾಷ್ಟ್ರ ಮಟ್ಟದ ರಾಜಕಾರಣದಲ್ಲಿ ತಮ್ಮ ಛಾಪು ಮೂಡಿಸಿದರು. ಮೂರು ವರ್ಷದ ಮುಖ್ಯಮಂತ್ರಿಯಾಗಿ ಆಡಳಿತ ಅವಧಿಯಲ್ಲಿ ಕೆಂಪೇಗೌಡ ಬಸ್ ನಿಲ್ದಾಣವನ್ನು 40 ವರ್ಷಗಳ ಹಿಂದೆ ಸ್ಥಾಪಿಸಿದರು. ನಗರ ಸಿಲಿಕಾನ್ ಸಿಟಿಯಾಗಿ ಬೆಳಯಲು ಕಾರಣರಾದರು. ಇಂಜಿನಿಯರ್, ವೈದ್ಯಕೀಯ ಕಾಲೇಜು ಸ್ಥಾಪನೆ ಮತ್ತು ವಿಧಾನಸೌಧ ಮುಂಭಾಗ ಅಂಬೇಡ್ಕರ್ ಪ್ರತಿಮೆ ಅನಾವರಣ ಮಾಡಿದರು.

ಇನ್ನು ವಿಧಾನಸೌಧ ಎಲ್ಲ ಕಚೇರಿಯಲ್ಲಿ ಅಂಬೇಡ್ಕರ್ ಭಾವಚಿತ್ರ ಮತ್ತು ವರ್ಗಾವಣೆಯಲ್ಲಿ ಕಠಿಣ ನಿಲುವು ಮತ್ತು ವಿಶ್ವ ಕನ್ನಡ ಸಮ್ಮೇಳನ, ಮೈಸೂರು ಕಲಾಮಂದಿರ, ಜಂಗಲ್ ಲಾಡ್ಜ್ ಹೀಗೆ ಹಲವಾರು ಜನ ಪರ ಕಾರ್ಯ ಮಾಡಿದ ಧೀಮಂತ ನಾಯಕರು. ಅವರು ಏನೇ ಅಡತಡೆ ಬಂದರು ವರ್ಣರಂಜಿತ ರಾಜಕಾರಣಿಯಾಗಿ ಕೀರ್ತಿ ಪಡೆದರು ಎಂದು ತಂದೆಯ ಕೆಲಸ, ಸಾಧನೆಯ ಪುಟವನ್ನು ಒಮ್ಮೆ ತಿರುವಿಹಾಕಿದರು ದಿನೇಶ್‌ ಗುಂಡೂರಾವ್‌.

ಸಮಾರಾಂಭದಲ್ಲಿ ಸಚಿವರಾದ ಬೋಸರಾಜು, ಸುಧಾಕರ್, ಶಾಸಕರಾದ ಪಿ.ಎಂ.ಅಶೋಕ್, ರಿಜ್ವಾನ್ ಅರ್ಹದ್, ವಿಧಾನ ಪರಿಷತ್ ಸಚೇತಕ ಸಲೀಮ್ ಅಹಮದ್, ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ, ಟಬೂ ದಿನೇಶ್ ಗುಂಡೂರಾವ್, ಅನನ್ಯಾ ರಾವ್ ಇದ್ದರು.

Megha
the authorMegha

Leave a Reply

error: Content is protected !!
Latest news
ಟನ್‌ ಕಬ್ಬಿಗೆ 4500 ರೂ. ನಿಗದಿಗೊಳಿಸಿ: ಕೇಂದ್ರ ಸರ್ಕಾರಕ್ಕೆ ಅತ್ತಹಳ್ಳಿ ದೇವರಾಜ್ ಆಗ್ರಹ ಟನ್‌ ಕಬ್ಬಿಗೆ 3650 ರೂ. ಎಫ್ಆರ್‌ಪಿ ದರ ಘೋಷಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಸಲ್ಲ- 4500 ರೂ. ನಿಗದಿಗೊಳಿಸಬೇಕು: ಕ... KKRTC ವಿಜಯಪುರ: ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಭ್ರಷ್ಟಾಚಾರ ಸಾಬೀತು- ಆದರೂ ಕ್ರಮ ತೆಗೆದುಕೊಳ್ಳದ ಎಂಡ... KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ