NEWSನಮ್ಮಜಿಲ್ಲೆ

ಯೋಗ ಜೀವನದ ಒಂದು ಭಾಗವಾಗಲಿ : ಅಪರ ಜಿಲ್ಲಾ ನ್ಯಾ.ಟಿ.ಗೋಪಾಲ ಕೃಷ್ಣ ರೈ ಕರೆ

ವಿಜಯಪಥ ಸಮಗ್ರ ಸುದ್ದಿ

ಶ್ರೀರಂಗಪಟ್ಟಣ: ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಶ್ರೀರಂಗಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದ ಆವರಣದಲ್ಲಿ ವಕೀಲರದ ಸಂಘದಿಂದ ಆಯೋಜಿಸಿದ್ದ 10ನೇ ಅಂತಾರಾಷ್ಟ್ರೀಯ ಯೋಗ ಆಚರಣೆಲ್ಲಿ ನ್ಯಾಯಾಧೀಶರು ಹಾಗೂ ವಕೀಲರು ಯೋಗ ಪ್ರದರ್ಶನ ಮಾಡಿ ಯೋಗದ ಮಹತ್ವವನ್ನು ಜಗತ್ತಿಗೆ ಸಾರಿದರು.

ಈ ವೇಳೆ ಮಾತನಾಡಿದ ಮೂರನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ಗೋಪಾಲ ಕೃಷ್ಣ ರೈ ಅವರು, ಯೋಗವು ರೋಗವನ್ನು ದೂರ ಮಾಡುವ ಶಕ್ತಿ ಹೊಂದಿದೆ. ಹೀಗಾಗಿ ಪ್ರತಿಯೊಬ್ಬರೂ ಜೀವನದ ಒಂದು ಭಾಗವಾಗಿ ಯೋಗ ಅಳವಡಿಸಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಯೋಗಾಸನ ಅನ್ನೋದು ಜೂನ್ 21 ಕ್ಕೆ ಮಾತ್ರ ಸೀಮಿತವಾಗಬಾರದು. ಪ್ರತಿ ದಿನವೂ ನಮ್ಮೆಲ್ಲರ ಜೀವನದ ಭಾಗವಾಗಿ ಅಳವಡಿಸಿಕೊಂಡಾಗ ಯಾವುದೇ ರೋಗವೂ ನಮ್ಮ ಹತ್ತಿರ ಸುಳಿಯದು. ಅದರಂತೆ ಮನಸ್ಸು ಶುದ್ಧವಾಗಿ, ದೇಹ ಸದೃಢವಾಗಿ ಇಟ್ಟುಕೊಳ್ಳಲು ಯೋಗವೂ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಹಿರಿಯ ಸಿವಿಲ್‌ ನ್ಯಾಯಾಧೀಶರಾದ ಡಿ.ರೂಪಾ ಮಾತನಾಡಿ, ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ನಮ್ಮ ದೇಶದ ಸಾಂಸ್ಕೃತಿಕ ಸಂಪತ್ತನ್ನು ಸೂಚಿಸುತ್ತದೆ. ಆಧುನಿಕ ಯುಗದಲ್ಲಿ ಪ್ರತಿಯೊಬ್ಬರಿಗೂ ಯೋಗಾಭ್ಯಾಸ ಅತ್ಯವಶ್ಯಕ. ಯೋಗವೂ ಒಂದು ಕ್ರೀಡೆ, ಇದರಲ್ಲೂ ಅನೇಕ ರೀತಿಯಲ್ಲಿ ಸಾಧನೆಗೈದ ಸಾಧಕರನ್ನು ಕಾಣಬಹುದು ಎಂದರು.

ಈ ವೇಳೆ ‘ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ಎಂಬ ಈ ಬಾರಿಯ ಘೋಷವಾಕ್ಯದೊಂದಿಗೆ ಸಾಮೂಹಿಕವಾಗಿ ನ್ಯಾಯಾಧೀಶರು ಮತ್ತು ವಕೀಲರು ವಿವಿಧ ಯೋಗಾಸನವವನ್ನು ಮಾಡಿದರು.

ಪ್ರಧಾನ ಕಿರಿಯ ನ್ಯಾಯಾಧೀಶರಾದ ಹರೀಶ್‌ ಕುಮಾರ್‌, ಕಿರಿಯ ಸಿವಿಲ್‌ ನ್ಯಾಯಾಧೀಶರಾದ ಹನುಮಂತರಾಯಪ್ಪ, ವಕೀಲರ ಸಂಘದ ಅಧ್ಯಕ್ಷ ಸತ್ಯನಾರಾಯಣ, ಪ್ರಧಾನ ಕಾರ್ಯದರ್ಶಿ ಡಿ.ಪವನ್‌ ಕುಮಾರ್‌ ಸೇರಿದಂತೆ ಹಲವಾರು ನಾಯವಾದಿಗಳು ಭಾಗವಹಿಸಿದ್ದರು.

Leave a Reply

error: Content is protected !!
LATEST
KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತ ಕಟ್ಟುನಿಟ್ಟಿನ ಕಾನೂನು ಜಾರಿಗೆ ರೈತ ಮುಖಂಡರ ಆಗ್ರಹ KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು