BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ ಬೆಂಗಳೂರು ಮಹಾನಗರ ಸಾರಿಗೆ ನಿಗಮದ ನೌಕರರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ವಿಮೆ ಮೊತ್ತದ ಚೆಕ್ಕನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿತರಿಸಿದರು.
ಭಾನುವಾರ ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಮೃತ ನೌಕರರ ಕುಟುಂಬದವರಿಗೆ ಚೆಕ್ ವಿತರಿಸಿ ಮಾತನಾಡಿದ ಅವರು, ಇಂದು 1 ಕೋಟಿ ರೂ. ಮೊತ್ತದ ಚೆಕ್ ವಿತರಿಸಲಾಗಿದೆ. ಕಾರಣ ಇವರೆಲ್ಲ ಅಕ್ಟೋಬರ್ 25ಕ್ಕೂ ಮುಂಚೆ ಅಪಘಾತದಲ್ಲಿ ಜೀವಕಳೆದುಕೊಂಡಿದ್ದರು.
ಇನ್ನು 2024 ಅಕ್ಟೋಬರ್ 25ರಿಂದ 1.5 ಕೋಟಿ ರೂಪಾಯಿ ಅಪಘಾತ ವಿಮೆ ಪರಿಹಾರ ದೊರಕಲಿದೆ. ಇದು ನೌಕರರ ಅವಲಂಬಿತರಿಗೆ ತುಂಬಾ ಉಪಯೋಗಕ್ಕೆ ಬರುತ್ತದೆ ಎಂದು ಸಚಿವರು ತಿಳಿಸಿದರು.
ಅಪಘಾತ ವಿಮೆ 1.5 ಕೋಟಿ ರೂ. ನೀಡುವ ಯೋಜನೆಗೆ ಸಂಬಂಧಿಸಿದಂತೆ ಬಿಎಂಟಿಸಿ ಮತ್ತು ಕೆನರಾ ಬ್ಯಾಂಕ್ ಮಧ್ಯೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಅಪಘಾತದಲ್ಲಿ ನೌಕರರು ಮೃತಪಟ್ಟ ಪ್ರಕರಣಗಳಲ್ಲಿ ಅವರ ಕುಟುಂಬಕ್ಕೆ ವಿಮೆ ಭದ್ರತೆ 1 ಕೋಟಿ ರೂ. ಹಾಗೂ ಸಂಸ್ಥೆಯಿಂದ 50 ಲಕ್ಷ ರೂಪಾಯಿ ಪರಿಹಾರ ದೊರೆಯಲಿದೆ ಎಂದರು.
ಅಪಘಾತ ಹೊರತುಪಡಿಸಿ ಅನಾರೋಗ್ಯ, ಇನ್ನಿತರ ಕಾರಣದಿಂದ ನೌಕರರು ಮೃತಪಟ್ಟರೆ ಅವರ ಕುಟುಂಬಕ್ಕೆ ₹10 ಲಕ್ಷ ಪರಿಹಾರ ನೀಡಲಾಗುತ್ತಿದ್ದು ಇಂದು ಅಂಥವ ಕುಟುಂಬದವರಿಗೂ ಪರಿಹಾರದ ಚೆಕ್ ವಿತರಿಸಲಾಯಿತು ಎಂದು ಹೇಳಿದರು.
ಬಿಎಂಟಿಸಿಯಲ್ಲಿ ಜಾರಿಯಲ್ಲಿದ್ದ ಗುಂಪು ವಿಮಾ ಯೋಜನೆಯನ್ನು ಪರಿಷ್ಕರಿಸಿ 2024ರ ಫೆ.19ರಂದು ಜಾರಿ ಮಾಡಲಾಗಿತ್ತು. ಅ ನಂತರದ ಅವಧಿಯಲ್ಲಿ ಈವರೆಗೆ 86 ನೌಕರರು ಮೃತಪಟ್ಟಿದ್ದಾರೆ. ಪರಿಶೀಲನೆ ಹಂತದಲ್ಲಿ 31 ಪ್ರಕರಣಗಳಿದ್ದು, ಉಳಿದವರಿಗೆ ಪರಿಹಾರ ವಿಮೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದರು..
ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್ ಆರ್., ನಿರ್ದೇಶಕಿ ಶಿಲ್ಪಾ ಎಂ., ಪ್ರಧಾನ ವ್ಯವಸ್ಥಾಪಕ ಮಹೇಶ್ ಪೈ ಹಾಗೂ ಇತರರು ಉಪಸ್ಥಿತರಿದ್ದರು.
Related

You Might Also Like
ಪೂಜೆಗೆ ಹೋದ ಮಹಿಳೆಯ ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್ಮೇಲ್: ಅರ್ಚಕನ ಬಂಧನ
ಬೆಂಗಳೂರು: ಮಹಿಳೆಯ ನಗ್ನ ವಿಡಿಯೋವನ್ನು ವಾಟ್ಸಪ್ನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿ ಬಳಿಕ ಬ್ಲ್ಯಾಕ್ ಮಾಡುತ್ತಿದ್ದ ಕೇರಳ ತ್ರಿಶೂರ್ನ ಪ್ರತಿಷ್ಠಿತ ದೇವಾಲಯದ ಅರ್ಚಕನನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಪ್ರತಿಷ್ಠಿತ...
BMTC ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣ: ಕಠಿಣ ಕ್ರಮಕ್ಕೆ ಆಯುಕ್ತರು, ಗೃಹ ಸಚಿವರಿಗೆ ಸಾರಿಗೆ ಸಚಿವರ ಆಗ್ರಹ
ಬೆಂಗಳೂರು: ತಾನು ಕೇಳಿದ ಸ್ಥಳದಲ್ಲಿ ಬಸ್ ನಿಲ್ಲಿಸಿಲ್ಲ ಎಂದು ಮೂರು ದಿನದ ಹಿಂದೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ಚಾಲಕನಿಗೆ ಮಹಿಳಾ ಟೆಕ್ಕಿ ಉದ್ಯೋಗಿಯೊಬ್ಬರು ಚಪ್ಪಲಿಯಿಂದ...
KSRTC: ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ-ಸಾರಿಗೆ ಸಚಿವರ ನಡುವೆ ಏನೋ ಸರಿ ಇಲ್ಲ..!
ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ...
BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ...
BMTC: 79ರ ಬದಲು 34ಕಿಮೀ ಕಾರ್ಯಾಚರಣೆ ಮಾಡಿ ಆರ್ಥಿಕ ನಷ್ಟಮಾಡಿದ ಆರೋಪ- ಚಾಲನಾ ಸಿಬ್ಬಂದಿಗೆ ಡಿಎಂ ಮೆಮೋ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸುಮಾರು 3500 ರೂ.ಗಳಷ್ಟು ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುತ್ತೀರಿ ಎಂದು ಆರೋಪಿಸಿ ಚಾಲನಾ ಸಿಬ್ಬಂದಿ ವಿರುದ್ಧ ಘಟಕ ವ್ಯವಸ್ಥಾಪಕರು ಆರೋಪಣ ಪತ್ರ...
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...