NEWSನಮ್ಮಜಿಲ್ಲೆನಮ್ಮರಾಜ್ಯ

KSRTC:1.25 ಲಕ್ಷ ನೌಕರರಿಗೆ 38 ತಿಂಗಳ ಹಿಂಬಾಕಿಯನ್ನೇ ಕೊಟ್ಟಿಲ್ಲ ಆದರೂ 60 ದಾಟಿದ ಪುರುಷರಿಗೆ ಉಚಿತ ಪ್ರಯಾಣ..!?

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಸ್‌ಗಳಲ್ಲಿ ಕಳೆದ 2023ರ ಜೂನ್‌ 11ರಿಂದ ಆರಂಭವಾಗಿರುವ ಶಕ್ತಿಯೋಜನೆಯಡಿ ಮಹಿಳೆಯರು ಈಗಾಗಲೇ ರಾಜ್ಯಾದ್ಯಂತ ಉಚಿತವಾಗಿ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದಾರೆ.

ಅದೇರೀತಿ ಕೆಎಸ್ಆರ್ಟಿಸಿ ಬಸ್‌ಗಳಲ್ಲಿ ಹಿರಿಯ ನಾಗರಿಕರು ಅಂದ್ರೆ ಅರವತ್ತು ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯರಿ ಪುರುಷರು ಮಹಿಳೆಯರಂತೆಯೇ ರಾಜ್ಯಾದ್ಯಂತ ಉಚಿತ ಪ್ರಯಾಣ ಮಾಡುವುದಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.

ಲೋಕಸಭೆ ಚುನಾವಣೆ ಮುಗಿದ ನಂತರ ಗ್ಯಾರಂಟಿ ಯೋಜನೆಗಳು ನಿಲ್ಲುತ್ತವೆ ಎಂಬುದಾಗಿ ನಾಡಿನ ಜನರು ಮೇಲಾಗಿ ವಿಪಕ್ಷಗಳು ಭಾವಿಸಿದ್ದವು. ಆದರೆ ಸರ್ಕಾರ ಈ ವಿಚಾರದ ಬಗ್ಗೆ ಸ್ಪಷ್ಟ ಮಾಹಿತಿ ನೀಡಿದ್ದು ಯಾವುದೇ ಕಾರಣಕ್ಕೂ ಉಚಿತ ಯೋಜನೆಗಳನ್ನು ನಿಲ್ಲಿಸೊಲ್ಲ ಎಂದು ಹೇಳಿದೆ.

ಅದರ ಜತೆಗೆ ಶೀಘ್ರದಲ್ಲೇ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದ್ದು, ಇದು ಜಾರಿಗೆ ಬಂದರೆ 60ವರ್ಷ ದಾಟಿದ ಪುರುಷರು ಕೂಡ ತಮ್ಮ ಮುಸ್ಸಂಜೆಯ ವಯಸ್ಸಿನಲ್ಲಿ ಗುಡಿ ಗುಂಡಾರಗಳನ್ನು ಪ್ರದಕ್ಷಿಣೆ ಹಾಕುವುದಕ್ಕೆ ಅನುಕೂಲವಾಗಲಿದೆ.

ಆದರೆ, ಇದು ಎಷ್ಟರ ಮಟ್ಟಿಗೆ ಕಾರ್ಯರೂಪಕ್ಕೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ. ಖಂಡಿತವಾಗಿಯೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಇರುವ ರೀತಿಯಲ್ಲೇ ಈ ಯೋಜನೆ ಕೂಡ ಜಾರಿಗೆ ಬಂದರೆ ಸಾಕಷ್ಟು ಜನಪ್ರಿಯವಾಗಲಿದೆ. ಆದರೆ ಇದಕ್ಕೆಲ್ಲ ಸರ್ಕಾರ ಹೇಗೆ ಹಣಹೊಂದಿಸುತ್ತಿದೆ ಎಂಬುವುದು ಯಕ್ಷಪ್ರಶ್ನೆಯಾಗಿದೆ.

ಇನ್ನೊಂದೆಡೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು ಮತ್ತು ನೌಕರರು ಸೇರಿ 1.25 ಲಕ್ಷ ಮಂದಿಗೆ 2023ರ ಜನವರಿ ಒಂದರಿಂದ ಶೇ.15ರಷ್ಟು ಹೆಚ್ಚಳವಾಗಿರುವ ವೇತನದ 38 ತಿಂಗಳ ಹಿಂಬಾಕಿಯನ್ನೇ ಇನ್ನೂ ಕೊಟ್ಟಿಲ್ಲ. ಇದರ ಜತೆಗೆ ಈಗಾಗಲೇ ಮತ್ತೆ 2024ರ ಜನವರಿ 1ರಿಂದ ಮತ್ತೆ ಸಾರಿಗೆ ನಿಗಮಗಳ ನೌಕರರಿಗೆ ವೇತನ ಪರಿಷ್ಕರಣೆ ಆಗಬೇಕಿದೆ. ಅದಕ್ಕೂ ಈವರೆಗೂ ಸರ್ಕಾರ ಯಾವುದೆ ಕ್ರಮ ತೆಗೆದುಕೊಂಡಿಲ್ಲ.

ಇನ್ನು ಬಸ್‌ಗಳಲ್ಲಿ ಈಗಾಗಲೇ ಉಚಿತವಾಗಿ ಪ್ರಯಾಣಿಸಿರುವ ಮಹಿಳೆಯರ ಟಿಕೆಟ್‌ ಮೌಲ್ಯದ ನೂರಾರು ಕೋಟಿ ಹಣವನ್ನು ಬಾಕಿ ಉಳಿಸಿಕೊಂಡಿದೆ ಸರ್ಕಾರ. ಈ ಎಲ್ಲದರ ನಡುವೆ ಹಣ ಕ್ರೋಢೀಕರಣಕ್ಕೆ ಹೆಣಗಾಡುತ್ತಿದ್ದು, ಈವರೆಗೂ ನೌಕರರಿಗೆ ಕೊಡಬೇಕಿರುವುದನ್ನೇ 5 ವರ್ಷವಾಗುತ್ತಿದ್ದರು ಕೊಟ್ಟಿಲ್ಲ. ಹೀಗಿರುವಾಗ ಮತ್ತೆ ಉಚಿತ ಖಚಿತ ಎಂಬುವುದು ಸರ್ಕಾರಕ್ಕೆ ಬೇಕಾ ಎನ್ನುತ್ತಿದ್ದಾರೆ ಪ್ರಜ್ಞಾವಂತ ನಾಗರಿಕರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ