NEWSನಮ್ಮಜಿಲ್ಲೆನಮ್ಮರಾಜ್ಯ

KKRTC: ವಿಜಯಪುರ ವಿಭಾಗದ ನಿವೃತ್ತ ಡಿಸಿಯಿಂದ ಸಂಸ್ಥೆ ವಾಹನ ದುರರ್ಬಳಕೆ – ಯಾಕೂಬ ಪಟೇಲ್ ನಾಟಿಕಾರ ಆರೋಪ

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕಲ್ಯಾಣ ರಥ ಪ್ರತಿಷ್ಠಿತ ಸಾರಿಗೆ ವಾಹನವನ್ನು ನಿವೃತ್ತ ವಿಭಾಗೀಯ ನಿಯಂತ್ರಣಾಧಿಕಾರಿ ಜೆ.ಎಂ. ಫೈಜ್‌ ಅವರು ಸಂಸ್ಥೆಯಿಂದ ನಿವೃತ್ತಿ ಆದರೂ ಸಹ ಪ್ರತಿಷ್ಠಿತ ವಾಹದಲ್ಲಿ ಬೆಂಗಳೂರುವರೆಗೆ ಹಾಗೂ ಮರಳಿ ವಿಜಯಪುರ ವರೆಗೆ ಟಿಕೆಟ್‌ ಪಡೆಯದೇ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸಾರಿಗೆ ನೌಕರ ಕೂಟ ವಿಜಯಪುರ ವಿಭಾಗದ ಗೌರವ ಅಧ್ಯಕ್ಷ ಯಾಕೂಬ ಪಟೇಲ್ ನಾಟಿಕಾರ ಆರೋಪಿಸಿದ್ದಾರೆ.

ಅಲ್ಲದೆ ಈ ವಾಹನವನ್ನು ಹಾಲಿ ಪ್ರಭಾರಿ ವಿಭಾಗೀಯ ನಿಯಂತ್ರಣಾಧಿಕಾರಿ ದೇವಾನಂದ ಬಿರಾದಾರ ಅವರು ದುರ್ಬಳಕೆ ಮಾಡಿಕೊಳ್ಳಲು ಸಾಥ್ ನೀಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿರುವ ಅವರು, ವಿಜಯಪುರ ವಿಭಾಗದಲ್ಲಿ ನಿವೃತ್ತ ವಿಭಾಗೀಯ ನಿಯಂತ್ರಣಾಧಿಕಾರಿ ಫೈಜ್‌ ಅವರನ್ನು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಅಮಾನತು ಮಾಡಲಾಗಿತ್ತು ಬಳಿಕ ನಿವೃತ್ತಿ ಹೊಂದಿದ್ದಾರೆ.

ಅವರನ್ನು ಇಲಾಖಾ ವಿಚಾರಣೆ ಬಾಕಿ ಉಳಿಸಿ ಸಂಸ್ಥೆಯಿಂದ ಸದ್ಯ ಬಿಡುಗಡೆ ಗೊಳಿಸಿದ್ದು, ಈ ಬಾಕಿ ಉಳಿದಿರುವ ವಿಚಾರಣೆಯಲ್ಲಿ ಕೇಂದ್ರ ಕಚೇರಿ ಬೆಂಗಳೂರಿಗೆ ಹೋಗಲು ವಿಜಯಪುರ ವಿಭಾಗದ ಕಲ್ಯಾಣ ರಥ ಪ್ರತಿಷ್ಠಿತ ಸಾರಿಗೆ ವಾಹನವನ್ನು ಟಿಕೆಟ್ ನೀಡದೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.

ಸಂಸ್ಥೆಯ ಸುತ್ತೋಲೆಗಳನ್ವಯ ಪ್ರತಿಷ್ಠಿತ ಸಾರಿಗೆ ವಾಹನದಲ್ಲಿ ಅಧಿಕಾರಿಗಳು ಪ್ರಯಾಣಿಸಲು ಅರ್ಥ ಟಿಕೆಟನ್ನು ಪಡೆಯಬೇಕು. ಆದಿವರು ಟಿಕೆಟ್ ಪಡೆಯದೇ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇವರ ಈ ಕೃತ್ಯಕ್ಕೆ ಹಾಲಿ ಪ್ರಭಾರಿ ವಿಭಾಗೀಯ ನಿಯಂತ್ರಣಾಧಿಕಾರಿ ದೇವಾನಂದ ಬಿರಾದಾರ ಅವರು ಸಾಥ್ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಆರೋಪದ ವಿಷಯದಲ್ಲಿ ಪೂರ್ಣ ಪ್ರಮಾಣದ ತನಿಖೆ ಮಾಡಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಶಿಸ್ತಿನ ಕ್ರಮ ಜರಗಿಸಬೇಕು ಇನ್ನು ಆರೋಪದ ಸತ್ಯಾಸತ್ಯತೆ ತಿಳಿಯಲು KKRTC ವ್ಯವಸ್ಥಾಪಕ ನಿರ್ದೇಶಕರು ಸಿಸಿ ಟಿವಿ ಫುಟೇಜ್‌ ಪಡೆದುಕೊಂಡು ಪರಿಶೀಲಿಸಬೇಕು ಎಂದು ನಾಟಿಕಾರ ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತ ಕಟ್ಟುನಿಟ್ಟಿನ ಕಾನೂನು ಜಾರಿಗೆ ರೈತ ಮುಖಂಡರ ಆಗ್ರಹ KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು