NEWSಆರೋಗ್ಯನಮ್ಮಜಿಲ್ಲೆ

ಅಂಧ ಕಲಾವಿದರಿಗೆ ಕಾರ್ಮಿಕ ಇಲಾಖೆಯಿಂದ ಅಗತ್ಯ ವಸ್ತುಗಳ ವಿತರಣೆ  

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ತುಮಕೂರು: ತಾಲೂಕಿನ ಹೆಗ್ಗೆರೆ ಗ್ರಾಮದ ಭೈರವೇಶ್ವರ ಕಾಲೇಜಿನ ಬಳಿ ವಾಸವಿರುವ ಅಂಧ ಕಲಾವಿದರಿಗೆ ಇಂದು ಬೆಳಗ್ಗೆ ಕಾರ್ಮಿಕ ಇಲಾಖೆಯಿಂದ 25 ಕೆ.ಜಿ. ಅಕ್ಕಿ, ಸಕ್ಕರೆ, ಸೋಪು ಹಾಗೂ ಮತ್ತಿತರ ಅಗತ್ಯ ವಸ್ತುಗಳನ್ನು ವಿತರಣೆ ಮಾಡಲಾಯಿತು.

ಸೋಂಕು ಹರಡದಂತೆ ಜಾರಿಯಲ್ಲಿರುವ ಲಾಕ್‌ಡೌನ್ ಸಂದರ್ಭದಲ್ಲಿ ಆಹಾರಕ್ಕೆ ತೊಂದರೆಯಾಗಬಾರದೆನ್ನುವ ದೃಷ್ಟಿಯಿಂದ ಈ ಅಂಧ ಕಲಾವಿದರ ತಂಡಕ್ಕೆ  ಅಗತ್ಯ ವಸ್ತುಗಳನ್ನು ವಿತರಣೆ ಮಾಡಲಾಯಿತು. ಕಾರ್ಮಿಕ ಅಧಿಕಾರಿ ಸುಭಾಷ್ ಎಂ. ಆಲದಕಟ್ಟೆ, ಕಂದಾಯ ನಿರೀಕ್ಷಕರು ಮತ್ತಿತರರಿದ್ದರು.

ಕೊರೊನಾ ಯೋಧರಿಂದ ಆಹಾರ ಪೂರೈಕೆ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಹಾಗೂ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆ ಸಹಯೋಗದಲ್ಲಿ ರಚಿಸಲಾಗಿರುವ ಕೊರೊನಾ ಯೋಧರು (ಕೊರೊನಾ ವಾರಿಯರ್ಸ್) ಪ್ರತಿದಿನ ಬೆಳಗ್ಗೆ ಹಾಗೂ ಸಂಜೆ ಹೆಗ್ಗೆರೆಯ ಈ 5 ಮಂದಿ ಅಂಧ ಕಲಾವಿದರಾದ ವಿಜಯ್‌ಕುಮಾರ್, ಸುರೇಶ್, ಮಂಜುಳ, ಶಿವಮ್ಮ, ಶೈಲಜ ಅವರಿಗೆ   ಆಹಾರ ಪೂರೈಕೆ ಮಾಡುವ ಮೂಲಕ ಮಾನವೀಯತೆ ಮೆರೆಯುತ್ತಿದ್ದಾರೆ.

ನಂದನ್‌ಕುಮಾರ್, ಹೇಮಂತ್‌ಕುಮಾರ್, ಕುಮಾರಸ್ವಾಮಿ, ಗಿರೀಶ್ ಸೇರಿದಂತೆ 8 ಕೊರೊನಾ ಯೋಧರ ತಂಡವು ಬಾಳನಕಟ್ಟೆಯಲ್ಲಿರುವ ವೀರಶೈವ ಸಮಾಜದ ಕಲ್ಯಾಣ ಮಂಟಪದಲ್ಲಿ ತಯಾರಿಸಲಾಗುತ್ತಿರುವ ಆಹಾರವನ್ನು ಪ್ರತೀ ದಿನ ಅಂಧರಿಗೆ   ತಲುಪಿಸುವ ಕೆಲಸ ಮಾಡುವುದರೊಂದಿಗೆ    ಭೀಮಸಂದ್ರದಿಂದ ಮಲ್ಲಸಂದ್ರದವರೆಗೆ ಜೋಪಡಿಗಳಲ್ಲಿ ವಾಸಿಸುತ್ತಿರುವ 150 ಮಂದಿ ನಿರ್ಗತಿಕರು ಹಾಗೂ ಕಡುಬಡವರಿಗೂ ಆಹಾರ ಪೂರೈಕೆ ಮಾಡುತ್ತಿದ್ದಾರೆ.

ಹೆಗ್ಗೆರೆಯ ಅಂಧ ಕಲಾವಿದರ ತಂಡವು ಲಾಕ್‌ಡೌನ್‌ನಿಂದ ಆಹಾರ ಸಮಸ್ಯೆ ಎದುರಿಸುತ್ತಿದ್ದಾರೆಂದು   ಸಾಮಾಜಿಕ ಜಾಲತಾಣದ ಮೂಲಕ  ಮಾಹಿತಿ ತಿಳಿದ ಕೂಡಲೇ ಕಾರ್ಮಿಕ ಇಲಾಖೆ, ವಾರ್ತಾ ಇಲಾಖೆ, ಆಹಾರ ಇಲಾಖೆ ಅಧಿಕಾರಿಗಳು ಕೂಡಲೇ ಧಾವಿಸಿ ದಿನಸಿ ಪದಾರ್ಥ, ಮಾಸ್ಕ್‌ಗಳನ್ನು ವಿತರಿಸುವುದರೊಂದಿಗೆ ಕೊರೊನಾ ವೈರಸ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಮೂಡಿಸಿದರು.

ಗ್ರಾ.ಪಂ. ಅಧ್ಯಕ್ಷ ನಾಗರಾಜ್, ಸದಸ್ಯ ಭೋಜಣ್ಣ, ವಾರ್ತಾ ಇಲಾಖೆ ಆರ್. ರೂಪಕಲಾ, ಆನಂದ್, ಆಹಾರ ನಿರೀಕ್ಷಕ ಕಾಂತರಾಜಯ್ಯ, ಸ್ಥಳೀಯರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ