NEWSನಮ್ಮರಾಜ್ಯ

ಕಡಿಮೆ ತೂಕ, ಮುದ್ರೆಯಿಲ್ಲದ ಯಂತ್ರಗಳ ಬಳಕೆ

ನ್ಯಾಯ ಬೆಲೆ ಅಂಗಡಿಗಳ ವಿರುದ್ಧ 16 ಮೊಕದ್ದಮೆ ದಾಖಲು 

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಕಲಬುರಗಿ ಜಿಲ್ಲೆಯ ನ್ಯಾಯ ಬೆಲೆ ಅಂಗಡಿ ಮತ್ತು ಸಗಟು ಮಾರಾಟ ಮಳಿಗೆಗಳಲ್ಲಿ ಸತ್ಯಾಪನೆ ಮತ್ತು ಮುದ್ರೆ ಇಲ್ಲದ ತೂಕದ ಯಂತ್ರಗಳ ಬಳಕೆ ಮತ್ತು ಕಡಿಮೆ ತೂಕದಲ್ಲಿ ಮಾರುತ್ತಿದ್ದ ಅಂಗಡಿಗಳ ಮೇಲೆ ಅಧಿಕಾರಿಗಳ ತಂಡ ದಾಳಿ ಮಾಡಿ 16  ಮೊಕದ್ದಮೆಗಳನ್ನು ದಾಖಲಿಸಿದೆ.

ಕಾನೂನು ಮಾಪನಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ರಫೀಕ್ ಲಾಡಜಿ ನೇತೃತ್ವದ ಅಧಿಕಾರಿಗಳ ತಂಡ ಕಳೆದ ಏಪ್ರಿಲ್ 7 ರಿಂದ 10ರ ವರೆಗೆ ಜಿಲ್ಲೆಯಾದ್ಯಂತ ಸುಮಾರು 82 ನ್ಯಾಯ ಬೆಲೆ ಅಂಗಡಿ ಹಾಗೂ ಸಗಟು ಮಾರಾಟ ಮಳಿಗೆಗಳ ಮೇಲೆ ದಾಳಿ ಮಾಡಿ ತಪಾಸಣೆ ನಡೆಸಿದೆ.

ಇದರಲ್ಲಿ ಕಡಿಮೆ ತೂಕದಲ್ಲಿ ಮಾರುತ್ತಿದ್ದದವರ ಮೇಲೆ 6 ಮೊಕದಮ್ಮೆ ಹಾಗೂ ಸತ್ಯಾಪನೆ  ಮತ್ತು ಮುದ್ರೆ ಇಲ್ಲದ ತೂಕದ  ಯಂತ್ರಗಳ ಬಳಸುತ್ತಿದ್ದಕ್ಕಾಗಿ 10 ಮೊಕದಮ್ಮೆ ಸೇರಿ ಒಟ್ಟು 16 ಮೊಕದಮ್ಮೆ ದಾಖಲಿಸಿ 28000 ರೂ. ಅಭಿ ಸಂಧಾನ ದಂಡ ವಿಧಿಸಲಾಗಿದೆ ಎಂದು ರಫೀಕ್ ಲಾಡಜಿ ತಿಳಿಸಿದಾರೆ.

ದಾಳಿಯ ತಂಡದಲ್ಲಿ ಕಾನೂನು ಮಾಪನಶಾಸ್ತ್ರ ಇಲಾಖೆಯ ನಿರೀಕ್ಷಕರಾದ ಅಮರೇಶ್ ಹೊಸಮನಿ,  ಅಶ್ವತ್ ಕುಮಾರ್ ಪತ್ತಾರ್ ಮತ್ತು ವಿಶ್ವನಾಥ್ ರೆಡ್ಡಿ ಇದ್ದರು.

ನ್ಯಾಯಬೆಲೆ ಅಂಗಡಿಗಳ ತೂಕದಲ್ಲಿ ವ್ಯತ್ಯಾಸವಿದಲ್ಲಿ ಗ್ರಾಹಕರು ದೂರವಾಣಿ ಸಂಖ್ಯೆ: 08472-278678 ಕರೆ ಮಾಡಿ ದೂರು ದಾಖಲಿಸಬಹುದು ಎಂದು ಸಹಾಯಕ ನಿಯಂತ್ರಕ ರಫೀಕ್ ಲಾಡಜಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ