CRIMENEWSನಮ್ಮಜಿಲ್ಲೆಮೈಸೂರು

ಮೈಸೂರು ಅರಮನೆ ಸೇರಿದಂತೆ ಸೂಕ್ಷ್ಮ ವಲಯಗಳಲ್ಲಿ ಡ್ರೋನ್ ಹಾರಾಟ ನಿಷೇಧ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಭಯೋತ್ಪಾದಕರು/ ದೇಶ ವಿರೋಧಿಗಳು ಡ್ರೋನ್‌ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟುಮಾಡುವ ಸಾಧ್ಯತೆಯಿರುವುದರಿಂದ ಅರಮನೆ ಆರವಣ ಸೇರಿದಂತೆ ಜಿಲ್ಲೆಯ ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧಿಸಲಾಗಿದೆ.

ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವಿನ ಬಿಗುವಿನ ವಾತಾವರಣ ಈಗ ಶಮನಗೊಂಡಿದೆ. ಅದಾಗ್ಯೂ ತುರ್ತು ಸಂದರ್ಭಗಳಲ್ಲಿ ಜಿಲ್ಲೆಯಲ್ಲಿರುವಂತಹ ಸೂಕ್ಷ್ಮವಲಯಗಳನ್ನು ಗುರುತಿಸಿ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಭದ್ರತಾ ಕಾಳಜಿಗಳ ದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಲಾಗಿದೆ.

ಕೈಗಾರಿಕಾ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಭದ್ರತೆಯನ್ನು ಒದಗಿಸುವ ಎಲ್ಲಾ ಖಾಸಗಿ ಭದ್ರತಾ ಏಜೆನ್ಸಿಗಳಿಗೆ ಮಾಹಿತಿ ನೀಡಲಾಗಿದ್ದು ಕಣ್ಗಾವಲು ಅಥವಾ ಇತರ ಉದ್ದೇಶಗಳಿಗಾಗಿ ಡ್ರೋನ್ ಗಳನ್ನು ನಿಯೋಜಿಸುವುದನ್ನು ತಪ್ಪಿಸಲು ಸಲಹೆಗಳನ್ನು ಸೂಚಿಸಲಾಗಿದೆ.

ಸಂಭವನೀಯ ವಿಧ್ವಂಸಕ ಕೃತ್ಯಗಳನ್ನು ತಡೆಗಟ್ಟಲು ನಗರ ಹಾಗೂ ಜಿಲ್ಲೆಯ ಪೊಲೀಸ್ ಇಲಾಖೆಗೆ ಭದ್ರತೆಯನ್ನು ಒದಗಿಸಲು ತಿಳಿಸಲಾಗಿದೆ. ಜತೆಗೆ ಅಂತಹ ಚಟುವಟಿಕೆಗಳ ಮೇಲೆ ಕೆಲವು ನಿರ್ಬಂಧಗಳನ್ನು ಹಾಕುವುದು ಅಗತ್ಯವಾಗಿದೆ.

ಜಿಲ್ಲಾ ಅಗ್ನಿಶಾಮಕದಳ ತುರ್ತು ಸಂದರ್ಭಗಳಲ್ಲಿ ಸಿದ್ಧರಿರಬೇಕು. ಜಿಲ್ಲಾ ಮತ್ತು ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದು ಮತ್ತು ವಿಶೇಷವಾಗಿ ನಾಗರಿಕರಿಗೆ ಯಾವುದೇ ತೊಂದರೆ ಮತ್ತು ಅಪಘಾತಗಳನ್ನು ನಿರ್ವಹಿಸಲು ಸನ್ನದ್ಧವಾಗಿರಲು ಜಾಗೃತಿ ಮೂಡಿಸಲಾಗುವುದು.

Deva
the authorDeva

Leave a Reply

error: Content is protected !!
Latest news
KSRTC: ಅತೀ ಶೀಘ್ರದಲ್ಲೇ ಶೇ.15ರಿಂದ 20ರಷ್ಟು ಬಸ್‌ ಪ್ರಯಾಣ ದರ ಏರಿಕೆ- ಸುಳಿವುಕೊಟ್ಟ ಮುಖ್ಯಮಂತ್ರಿ ಡಿಕೆಶಿ ವಿದ್ಯುತ್‌ ಖಾಸಗೀಕರಣ ನಿಲ್ಲಿಸಲು ಆಗ್ರಹಿಸಿ ಅತ್ತಹಳ್ಳಿ ದೇವರಾಜ್ ನೇತೃತ್ವದಲ್ಲಿ ಪ್ರತಿಭಟನೆ NWKRTC: ಡೋರ್‌ ಹಾಕದಿದ್ದರೆ, ಚಾಲಕರ ಬಳಿ ಕುಳಿತಿದ್ದರೆ ಕಂಡಕ್ಟರ್‌ ವಿರುದ್ಧ ಪ್ರಕರಣ ದಾಖಲಿಸಿ- ತನಿಖಾಧಿಕಾರಿಗಳಿ ಡಿಸ... ಇದು ನಿಗಮಗೆ ಗೊತ್ತೆ? ಗ್ರಾಚ್ಯುಟಿ, ರಜೆ ನಗದೀಕರಣ ಸೇರಿ 10 ಆದಾಯಗಳ ಮೇಲೆ ಸರ್ಕಾರ ಯಾವುದೇ ತೆರಿಗೆ ವಿಧಿಸುವಂತಿಲ್ಲ 4-6 ತಿಂಗಳಿನಲ್ಲಿ ಬೆಂಗಳೂರಿನ ರಸ್ತೆಗಳಿಗೆ ಹೊಸ ಲುಕ್‌: ಸಚಿವ ಕೃಷ್ಣ ಬೈರೇಗೌಡ BMTC ಬಸ್‌- ಬೈಕ್‌ಗೆ ಡಿಕ್ಕಿ: ಬೈಕ್‌ನಲ್ಲಿದ್ದ ಮಗು, ದಂಪತಿ ಸೇರಿ ಮೂವರು ಮೃತ ಮತ್ತೊಂದು ಮಗುವಿನ ಸ್ಥಿತಿ ಚಿಂತಾಜನಕ BMTC: ಮುಂದಿನ ವರ್ಷದಿಂದ ನಿರ್ವಾಹಕರ ಮುಂಬಡ್ತಿ ಜೇಷ್ಠತಾ ಪಟ್ಟಿಯಲ್ಲಿ ನಿಧನ, ವಜಾ, ನಿವೃತ್ತರ ಹೆಸರು ಸೇರ್ಪಡೆ ಆಗಲ್ಲ-... ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ಇಂದು KSRTC ನೂತನ ಎಂಡಿಯಾಗಿ ಅಧಿಕಾರ ವಹಿಸಿಕೊಂಡ ಶಿವಕುಮಾರ್ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಇಳಿದಿದೆ ಪೆಟ್ರೋಲ್, ಡೀಸೆಲ್ ಬೆಲೆ ಕೂಡಲೇ ಕಡಿತಗೊಳಿಸಿ – ಕೇಂದ್ರಕ್ಕೆ ಅಶೋಕ್ ಆಗ್ರಹ