NWKRTC: ಸಾರಿಗೆ ನೌಕರರ ವೇತನ ಹೆಚ್ಚಳ ಯಾವಾಗ? ನಾಟಕದ ಮೂಲಕ ಸರ್ಕಾರದ ಗಮನ ಸೆಳೆದ ನಗರ ಸಾರಿಗೆ ಸಿಬ್ಬಂದಿ
ಹುಬ್ಬಳ್ಳಿ: ರಾಜ್ಯದಲ್ಲಿರುವ ನಮ್ಮ ಸಾರಿಗೆ ನಿಗಮಗಳ ಅಧಿಕಾರಿಗಳು – ನೌಕರರಲ್ಲಿ ಹಾಗೂ ನೌಕರರು – ನೌಕರರಲ್ಲೇ ಒಗ್ಗಟ್ಟಿಲ್ಲ. ಪರಿಣಾಮ ನಾಲ್ಕೂ ನಿಗಮಗಳಲ್ಲಿ ಸಮಸ್ಯೆಗಳ ಸರಮಾಲೆಯೇ ಇದೆ. ಹೀಗಾಗಿ ಮೊದಲು ನೀವು ಒಗ್ಗೂಡಿ ಎಲ್ಲವೂ ಸಾಧ್ಯವಾಗಲಿದೆ ಎಂದು NWKRTC ನಿಗಮದ ಅಧ್ಯಕ್ಷ ಭರಮಗೌಡ (ರಾಜು) ಕಾಗೆ ಮತ್ತೊಮ್ಮೆ ಕಿವಿ ಮಾತು ಹೇಳಿದ್ದಾರೆ.
ಬಸವ ಜಯಂತಿ ಅಂಗವಾಗಿ ಹುಬ್ಬಳ್ಳಿ-ಧಾರವಾಡ ನಗರ ಸಾರಿಗೆ ವಿಭಾಗ ಆಯೋಜಿಸಿದ್ದ ಬಸವ ಜಯಂತಿ ಉತ್ಸವ-2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಈಗಲಾದರೂ ಎಲ್ಲರೂ ಒಗ್ಗಟ್ಟಾಗಿಗಿ ಇಲ್ಲದ್ದಿದ್ದರೆ ಯಾವುದೇ ಸಮಸ್ಯೆಗಳು ಬಗೆಹರಿಯುವುದಿಲ್ಲ. ಇನ್ನು ನೀವು ಒಬ್ಬರ ಕಾಲು ಒಬ್ಬರು ಎಳೆದುಕೊಳ್ಳುವ ಜತೆಗೆ ಪೊಲೀಸ್ ಪ್ರಕರಣಗಳನ್ನು ಹಾಕುವುದು. ಇದೆಲ್ಲವನ್ನು ನಾನು ಅಧ್ಯಕ್ಷನಾಗಿ ಬಂದಾಗಿನಿಂದಲೂ ಕಂಡಿದ್ದೀನಿ ಇದನ್ನು ಭಾರಿ ನೋವಿನಿಂದ ಹೇಳುತ್ತಿದ್ದೇನೆ ಎಂದರು.
ಇನ್ನು ಚಾಲನಾ ಸಿಬ್ಬಂದಿಗಳು ಮಾಡದ ತಪ್ಪಿಗೆ ಅಧಿಕಾರಿಗಳು ವಜಾ, ಅಮಾನತು ಮತ್ತು ವರ್ಗಾವಣೆಯಂತ ಶಿಕ್ಷೆ ಕೊಡುತ್ತಿದ್ದಾರೆ. ಬಸ್ ಇಳಿಯುವುದಕ್ಕೆ ಮುಂದಾಗಿ ಯಾರೋ ಬಿದ್ದು ಮೃತಪಟ್ಟರೆ ಇಲ್ಲಿ ಚಾಲನಾ ಸಿಬ್ಬಂದಿಗಳನ್ನು ಹೊಣೆ ಮಾಡಿ ಅಮಾನತು ಮಾಡುತ್ತಾರೆ.
ಅಧಿಕಾರಿಗಳು ಏನೆ ಆದರೂ ನೌಕರರ ಪರ ನಿಲ್ಲಬೇಕು. ಅದನ್ನು ಬಿಟ್ಟು ಅವರ ವಿರುದ್ಧ ನಿಂತರೆ ಅವರ ಪಾಡೇನು. 8ತಾಸು ಹಳ್ಳಿ ಹಳ್ಳಿಗಳಿಗೆ ಸರಿ ಇಲ್ಲದ ಹಳ್ಳ ಕೊಳ್ಳಗಳ ರಸ್ತೆಗಳಲ್ಲಿ ಬಸ್ ಓಡಿಸುತ್ತಾರೆ. ಈ ವೇಳೆ ಜನರು ಅವರನ್ನು ಎಷ್ಟು ರೀತಿ ಬೈದುಕೊಳ್ಳುತ್ತಾರೋ ಗೊತ್ತಿಲ್ಲ. ಆದರೂ ಅವರು ಅದ್ಯಾವುದನ್ನು ಮನಸ್ಸಿನಲ್ಲಿ ಇಟ್ಟಿಕೊಳ್ಳದೆ ಸುರಕ್ಷಿತವಾಗಿ ತಲುಪಿಸುವ ಕೆಲಸ ಮಾಡುತ್ತಾರೆ.
ಇಷ್ಟೆಲ್ಲ ಕಷ್ಟಪಡುವ ನೌಕರರ ಪರವಾಗಿ ನಿಲ್ಲಬೇಕು. ಒಂದು ವೇಳೆ ಸಾವು ನೋವುಗಳಾದಗ ಬಸ್ ಮತ್ತು ಚಾಲನಾ ಸಿಬ್ಬಂದಿಗಳನ್ನು ಕಾನೂನಾತ್ಮಕವಾಗಿ ಬಿಡಿಸಿಕೊಂಡು ಬರಬೇಕು ಎಂಬ ದೃಷ್ಟಿಯಿಂದ ಕಾನೂನು ವಿಭಾಗ ಇದೆ. ಆದರೆ, ಆ ಕಾನೂನು ವಿಭಾಗದ ಅಧಿಕಾರಿಗಳು ಮಾಡುತ್ತಿರುವುದು ಏನು? ನೌಕರರ ವಿರುದ್ಧವೇ ಪ್ರಕರಣ ದಾಖಲಿಸುವುದು. ಬಳಿಕ ಅವರಿಗೆ ಬೇಲ್ ವ್ಯವಸ್ಥೆ ಮಾಡದೆ ನ್ಯಾಯಾಂಗ ಬಂಧನಕ್ಕೆ ಬಿಡುವುದಾ? ಇದು ಮೊದಲು ನಿಲ್ಲಬೇಕು ಎಂದು ಹೇಳಿದರು.
ಇನ್ನು ನಾನು ಅಧ್ಯಕ್ಷನಾಗಿ ಬಂದಾಗಿನಿಂದ ಗಮನಿಸಿದಾಗ ನಮಗೆ ತಿಳಿದು ಬಂದಿದ್ದು ನೌಕರರು ಅಧಿಕಾರಿಗಳಲ್ಲಿ ಒಗ್ಗಟ್ಟಿಲ್ಲದಿರುವುದು ಜತೆಗೆ ನೌಕರರು ನೌಕರರಲ್ಲೇ ಹೊಂದಾಣಿಕೆ ಇಲ್ಲದಿರುವುದರಿಂದ ಪೊಲೀಸ್ ಪ್ರಕರಣಗಳು ದಾಖಲಾಗುತ್ತಿವೆ ಇವೆಲ್ಲವನ್ನು ಬಿಡಬೇಕು. ಇನ್ನು ವೇತನಕ್ಕಾಗಿ ಹೋರಾಟ ಮಾಡಿದ 2500 ನೌಕರರನ್ನು ಅಮಾನತು, ವಜಾ, ವರ್ಗಾವಣೆ ಮಾಡಿದ್ದೇವೆ ಎಂದು ಅಧಿಕಾರಿಗಳು ಖುಷಿಯಿಂದ ಹೇಳುತ್ತಾರೆ ಎಂದರೆ ಅವರ ಮನಸ್ಥಿತಿ ಹೇಗಿದೆ ಎಂಬುವುದು ತಿಳಿಯುತ್ತದೆ ಎಂದು ಹೇಳಿದರು.
ಬಸವ ಜಯಂತಿ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಸಂಸ್ಥೆಯ ನೌಕರರು ವೇತನ ಹೆಚ್ಚಳ ಆಗದಿರುವ ಬಗ್ಗೆ ಅನುಭವಿಸುತ್ತಿರುವ ಸಮಸ್ಯೆಗಳನ್ನು ನಾಟಕ ಪ್ರದರ್ಶನದ ಮೂಲಕ ಭಾರಿ ಅಚ್ಚುಕಟ್ಟಾಗಿ ಸರ್ಕಾರದ ಮನ ಮುಟ್ಟುವಂತೆ ಅಭಿನಯಿಸಿದರು.
ಈ ನಾಟಕವನ್ನು NWKRTC ನಿಗಮದ ಅಧ್ಯಕ್ಷ ಭರಮಗೌಡ (ರಾಜು) ಕಾಗೆ ಕೂಡ ನೋಡಿದರು. ನೌಕರರ ಸಮಸ್ಯೆ ಬಗ್ಗೆ ಸರ್ಕಾರದ ಗಮನ ಸೆಳೆದು ಶೀಘ್ರದಲ್ಲೇ ಪರಿಹಾರ ಕೊಡಿಸುವ ಭರವಸೆ ನೀಡಿದರು.
Related

You Might Also Like
ವಾಣಿಜ್ಯ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಗುಡ್ ನ್ಯೂಸ್: ಬೆಲೆಯಲ್ಲಿ ಭಾರಿ ಇಳಿಕೆ
ನ್ಯೂಡೆಲ್ಲಿ: ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. 19 ಕೆಜಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್...
KSRTC: ಶೇ.31ರಷ್ಟು ತುಟ್ಟಿಭತ್ಯೆ 2022 ಜು.1ರ ಮೂಲ ವೇತನಕ್ಕೆ ವಿಲೀನಗೊಂಡ ಬಳಿಕ ನೌಕರರು 4% HRA ಕಳೆದುಕೊಳ್ಳುವರು..!
ಆದರೂ ಅಲ್ಪ ಮಟ್ಟಿಗೆ ಸಂಬಳದಲ್ಲಿ ಏರಿಕೆ ಕಾಣಬಹುದಾಗಿದೆ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ 01.07.2022 ರಲ್ಲಿದ್ದ ಶೇ.31 ರಷ್ಟು ತುಟ್ಟಿಭತ್ಯೆಯನ್ನು 1ನೇ ಆಗಸ್ಟ್...
BMTC: ಚಾಲಕ ಹುದ್ದೆಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಗೆ ನಿಯೋಜಿಸಿದ್ದ ಆದೇಶ ಹಿಂಪಡೆಯಲು ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿಯಮ 17/1 ರ ಅಡಿಯಲ್ಲಿ ಚಾಲಕ ಹುದ್ದೆಯಿಂದ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ನಿಯೋಜಿಸಿರುವ ಆದೇಶಗಳನ್ನು ಜುಲೈ 1ರಿಂದಲೇ ಹಂತ ಹಂತವಾಗಿ ಹಿಂಪಡೆದು...
ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಡ್ಯ: ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನ್ನ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ವಿಶ್ವಾಸ ಸರಿ ಇಲ್ಲ ಎಂದು ಬುರುಡೆ...
ವನಮಹೋತ್ಸವದಲ್ಲಿ ತ್ರಿಚಕ್ರ ವಾಹನ ವಿತರಣೆ, ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು ಗ್ರಾಮಾಂತ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ಸ್ವಚ್ಛತಾ ಕೆಲಸಕ್ಕಾಗಿ ನೂತನ ಆಟೋ ವಾಹನ ಮತ್ತು ಹಿಟಾಚಿ...
9 ಎಕರೆಯಲ್ಲಿ ಕೆಂಪೇಗೌಡರ ವಸ್ತು ಸಂಗ್ರಹಾಲಯ ನಿರ್ಮಾಣ: ಉಸ್ತುವಾರಿ ಸಚಿವ ಕೆಎಚ್ಎಂ
ನಾಡಪ್ರಭು ಕೆಂಪೇಗೌಡರ 516 ನೇ ಜಯಂತ್ಯೋತ್ಸವ ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಆವತಿ ಗ್ರಾಮದ ಬಳಿ 9.10 ಎಕರೆ ಪ್ರದೇಶದಲ್ಲಿ ನಾಡಪ್ರಭು ಕೆಂಪೇಗೌಡರ ಜೀವನ ಚರಿತ್ರೆ,...
ಲೋಕಾಯುಕ್ತರು ರಾಜಿನಾಮೆ ನೀಡಬೇಕು, ಅಬಕಾರಿ ಸಚಿವರ ವಜಾಗೊಳಿಸಲು ಆಗ್ರಹಿಸಿ KRS ಪಕ್ಷದಿಂದ ಬೃಹತ್ ಪ್ರತಿಭಟನೆ
ಬೆಂಗಳೂರು: ಲೋಕಾಯುಕ್ತರು ರಾಜಿನಾಮೆ ನೀಡಲಿ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ವಜಾಗೊಳಿಸಿ, ನ್ಯಾಯಾಂಗದ ಉಸ್ತುವಾರಿಯಲ್ಲಿ ಸಿಬಿಐ ತನಿಖೆಗೆ ವಹಿಸಿ ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ...
ಸರ್ಕಾರ ಅತೀ ಶೀಘ್ರದಲ್ಲೇ ಸಾರಿಗೆ ನೌಕರರಿಗೆ ಕೊಟ್ಟ ಭರವಸೆ ಈಡೇರಿಸಲಿದೆ: ಡಿಸಿಎಂ ಡಿಕೆಶಿ
ಬೆಂಗಳೂರು: ಚುನಾವಣಾ ಪೂರ್ವ ಪ್ರಣಾಳಿಕೆ ಭರವಸೆಯಂತೆ ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಂತೆ ಸಮಾನ ವೇತನ ನೀಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ...
KKRTC: ತನ್ನದಲ್ಲದ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಕೇಳಿದ ಮಹಿಳೆ- ಪ್ರಶ್ನಿಸಿದ್ದಕ್ಕೆ ಪ್ರಜ್ಞೆ ತಪ್ಪುವವರೆಗೂ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಸಂಬಂಧಿಕರು
ಕಲಬುರಗಿ: ಬೇರೆಯವರ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಪಡೆದುಕೊಳ್ಳಲು ಮುಂದಾದ ಮಹಿಳೆಗೆ ಇದು ನಿಮ್ಮ ಆಧಾರ ಕಾರ್ಡ್ ಅಲ್ಲ ನಿಮ್ಮದನ್ನು ಕೊಡಿ ಎಂದು ನಿರ್ವಾಹಕರು ಹೇಳಿದ್ದಕ್ಕೆ ಮಹಿಳೆ...