NEWSದೇಶ-ವಿದೇಶನಮ್ಮರಾಜ್ಯ

ಕನಿಷ್ಠ ಮಾಸಿಕ 7,500 ರೂ. ಪಿಂಚಣಿ ಕೊಡಲು ಪರಿಶೀಲನೆ: ಕೇಂದ್ರ ಸರ್ಕಾರ ಭರವಸೆ – EPS ಹೋರಾಟಕ್ಕೆ ಫಲ ಸಿಗುವ ಮುನ್ಸೂಚನೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: 78 ಲಕ್ಷ ಪಿಂಚಣಿದಾರರ ಪರ ನಿಂತಿರುವ ಇಪಿಎಸ್-95 ರಾಷ್ಟ್ರೀಯ ಆಂದೋಲನ ಸಮಿತಿ  (ಎನ್‌ಸಿ) ಹೋರಾಟಕ್ಕೆ ಫಲಸಿಗುವ ಎಲ್ಲ ಮುನ್ಸೂಚನೆಗಳು ಕಾಣಿಸುತ್ತಿವೆ.  ಹೀಗಾಗಿ ಅತೀ ಶೀಘ್ರದಲ್ಲೇ ಎಲ್ಲ ಪಿಂಚಣಿದಾರರಿಗೆ ಕನಿಷ್ಠ ಮಾಸಿಕ ₹7,500 ಪಿಂಚಣಿ ನೀಡುವ ಬಗ್ಗೆ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ಮುಂದಾಗಿದೆ.

ಈ ಹಿನ್ನೆಲೆಯಲ್ಲಿ ಕೈಗಾರಿಕೆ, ಸಾರ್ವಜನಿಕ ಸಹಕಾರ ಮತ್ತು ಖಾಸಗಿ ವಲಯದ 78 ಲಕ್ಷ ಪಿಂಚಣಿದಾರರಿಗೆ ಕನಿಷ್ಠ ಮಾಸಿಕ ₹7,500 ಪಿಂಚಣಿ ನೀಡುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಸ್ವತಃ ಕೇಂದ್ರ ಸರ್ಕಾರ ಭರವಸೆ ನೀಡಿದೆ ಎಂದು ಇಪಿಎಸ್-95 ರಾಷ್ಟ್ರೀಯ ಆಂದೋಲನ ಸಮಿತಿ (ಎನ್‌ಸಿ) ಶುಕ್ರವಾರ ತಿಳಿಸಿದೆ.

ಇನ್ನು ಪಿಂಚಣಿ ಹೆಚ್ಚಳಕ್ಕೆ ಆಗ್ರಹಿಸಿ ಕಳೆದ ಜುಲೈ 31 ಮತ್ತು ಇದೇ ತಿಂಗಳ 1ರಂದು ದೆಹಲಿಯ ಜಂತರ್‌ ಮಂತರ್‌ನಲ್ಲಿ ಸಮಿತಿಯಿಂದ ಹೋರಾಟ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಸಮಿತಿಯ ಪ್ರತಿನಿಧಿಗಳು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಮನಸುಖ್ ಮಾಂಡವೀಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ತಂದ ಬಳಿಕ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಸಚಿವರು ಭರವಸೆ ನೀಡಿದ್ದಾರೆ ಎಂದು ಸಮಿತಿ ತಿಳಿಸಿದೆ.

ಸದ್ಯ ಪಿಂಚಣಿದಾರರಿಗೆ ಮಾಸಿಕ ₹1,450 ಪಿಂಚಣಿ ದೊರೆಯುತ್ತಿದೆ. 36 ಲಕ್ಷ ಪಿಂಚಣಿದಾರರು ಕನಿಷ್ಠ ₹1 ಸಾವಿರಕ್ಕಿಂತಲೂ ಕಡಿಮೆ ಪಿಂಚಣಿ ಪಡೆಯುತ್ತಿದ್ದಾರೆ. ಹಾಗಾಗಿ, ಈ ಮೊತ್ತ ಹೆಚ್ಚಿಸಲು ಒತ್ತಾಯಿಸಲಾಗಿದೆ ಎಂದು ತಿಳಿಸಿದೆ.

ಪಿಂಚಣಿ ಹೆಚ್ಚಳದ ಜೊತೆಗೆ ಅದಕ್ಕೆ ಅನುಗುಣವಾಗಿ ತುಟ್ಟಿಭತ್ಯೆ ನೀಡಬೇಕು. ಪಿಂಚಣಿದಾರರು ಮತ್ತು ಅವರ ಪತ್ನಿಯರಿಗೆ ಉಚಿತ ಆರೋಗ್ಯ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಅಶೋಕ್ ರಾವುತ್ ತಿಳಿಸಿದ್ದಾರೆ.

ಇನ್ನು ಈ ಎಲ್ಲ ಭರವಸೆಗಳ ಬಗ್ಗೆ ಹಾಗೂ ಸಚಿವ ಜತೆ ನಡೆದ ಮಾತುಕತೆ ಏನಾಯಿತು ಎಂಬುದರ ಬಗ್ಗೆ ನಿವೃತ್ತರೊಂದಿಗೆ ಚರ್ಚಿಸುವ ಸಲುವಾಗಿ ನಾಳೆ ಅಂದರೆ ಆ.4ರಂದು ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಸಭೆಕರೆಯಲಾಗಿದೆ. ಹೀಗಾಗಿ ಎಲ್ಲರೂ ತಪ್ಪದೆ ಸೇರಿ ಅಂದು ಚರ್ಚೆ ಮಾಡಲಿದ್ದೇವೆ ಎಂದು ಬಿಎಂಟಿಸಿ & ಕೆಎಸ್ಆರ್ಟಿಸಿ ನಿವೃತ್ತ ನೌಕರರ ಸಂಘಟನೆಯ ಕಾರ್ಯಾಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್