ಬೆಂಗಳೂರು: ಪೌರಕಾರ್ಮಿಕರ ನೇಮಕಾತಿಗೆ ಅಗತ್ಯವಿರುವ ಎಲ್ಲ ದಾಖಲಾತಿಗಳಿಗೆ ತಗಲುವ ವೆಚ್ಚ ಮತ್ತು ಪಾರದರ್ಶಕ ಪ್ರಕ್ರಿಯೆ ನಡೆಸುವ ಉದ್ದೇಶದಿಂದ ಯಾವುದೇ ಆಮಿಷಗಳಿಗೆ ಒಳಗಾಗದಿರಲು ವಿಶೇಷ ಆಯುಕ್ತರು (ಆಡಳಿತ) ನವೀನ್ ಕುಮಾರ್ ರಾಜು ಮನವಿ ಪೌರ ಕಾರ್ಮಿಕರಲ್ಲಿ ಮನವಿ ಮಾಡಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾಯಂ ನೇಮಕಾತಿಗೆ ಒಳಪಟ್ಟಿರುವ ಪೌರಕಾರ್ಮಿಕರ ಸಿಂಧುತ್ವ ಪ್ರಮಾಣ ಪತ್ರಕ್ಕಾಗಿ ಸಲ್ಲಿಸಬೇಕಿರುವ ಇತರೆ ಪ್ರಮಾಣ ಪತ್ರಗಳಿಗೆ ತಗಲುವ ವೆಚ್ಚವನ್ನು ಪಾಲಿಕೆಯಿಂದಲೇ ಭರಿಸಲಾಗುವುದು ಎಂದು ತಿಳಿಸಿದ್ದಾರೆ.
ಪಾಲಿಕೆಯ ಘನತ್ಯಾಜ್ಯ ನಿರ್ವಹಣೆಯ ವಿಭಾಗದಲ್ಲಿ ನೇರಪಾವತಿಯಡಿ (ಡಿಪಿಎಸ್) ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರುಗಳ ಪೈಕಿ, ರೋಸ್ಟರ್ ಅಥವಾ ಮೀಸಲಾತಿ ನಿಯಮಾವಳಿಗಳನ್ವಯ 12,692 ಪೌರಕಾರ್ಮಿಕರ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು 16ನೇ ನವೆಂಬರ್ 2024 ರಂದು ಪ್ರಚುರಪಡಿಸಲಾಗಿದೆ.
ಈಗಾಗಲೇ ಸುಮಾರು 4,000 ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಲಾಗಿದ್ದು, ಉಳಿದ ಪೌರಕಾರ್ಮಿಕರಿಗೆ ಅತಿ ಶೀಘ್ರದಲ್ಲೇ ನೇಮಕಾತಿ ಆದೇಶ ಪತ್ರಗಳನ್ನು ನೀಡಲು ಕ್ರಮ ವಹಿಸಲಾಗುತ್ತಿದೆ ಎಂದು ವಿವರಿಸಿದ್ದಾರೆ.
ಇನ್ನು ನೇಮಕಗೊಂಡ ಪೌರಕಾರ್ಮಿಕ ಅಭ್ಯರ್ಥಿಗಳ ಸಿಂಧುತ್ವ ಪರಿಶೀಲನೆಗೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಂದ ವರದಿಯನ್ನು ಪಡೆಯಬೇಕಿದ್ದು, ಈ ಸಲುವಾಗಿ ಸೇವಾಸಿಂಧು ಪೋರ್ಟಲ್ನಲ್ಲಿ ಈಗಾಗಲೇ ಅರ್ಜಿಗಳನ್ನು ಅಪ್ಲೋಡ್ ಮಾಡಲಾಗಿದೆ. ಈ ಪೈಕಿ ಸಂಬಂಧಪಟ್ಟ ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದು, ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಬಿಬಿಎಂಪಿ ವತಿಯಿಂದಲೇ ವೆಚ್ಚ ಭರಿಸಲಾಗುವುದು: ಸೇವಾ ಸಿಂಧು ಅರ್ಜಿದಾರರ ಪ್ರಮಾಣ ಪತ್ರ ಪೋರ್ಟಲ್ ನಲ್ಲಿ ಅರ್ಜಿದಾರರ ಲಾಗಿನ್ ನಿಂದ ಪ್ರಮಾಣ ಪತ್ರ-1 ಹಾಗೂ ಪ್ರಮಾಣ ಪತ್ರ-2 ಆಪ್ಲೋಡ್ ಮಾಡಬೇಕಾಗಿರುತ್ತದೆ. ಈ ಸಂಬಂಧ ಎರಡೂ ಪ್ರಮಾಣ ಪತ್ರಗಳ ಛಾಪಾ ಕಾಗದ ಹಾಗೂ ನೋಟರಿ ಸೇರಿದಂತೆ ಇನ್ನಿತರೆ ದಾಖಲಾತಿಗಳಿಗೆ ತಗಲುವ ವೆಚ್ಚವನ್ನು ನೇಮಕಾತಿ ಆದೇಶ ಪತ್ರಗಳು ನೀಡಿದವರನ್ನು ಹೊರತುಪಡಿಸಿ ಇನ್ನುಳಿದ ಪೌರಕಾರ್ಮಿಕರಿಗೆ ಪಾಲಿಕೆಯಿಂದಲೇ ಭರಿಸಲಾಗುವುದು.
ಪ್ರಮಾಣ ಪತ್ರಗಳಿಗೆ ತಗಲುವ ಮೊತ್ತವನ್ನು ಪ್ರಸಕ್ತ ಸಾಲಿನ ಆಯವ್ಯಯದ ಲೆಕ್ಕ ಶೀರ್ಷಿಕೆ ಸಂಖ್ಯೆ: 02-210999 ಇತರೆ ಸಾಮಾನ್ಯ ಮತ್ತು ವಿವಿಧ ವೆಚ್ಚಗಳಡಿ ಭರಿಸುವಂತೆ ಎಲ್ಲ ವಲಯ ಜಂಟಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ.
ಯಾವುದೇ ಆಮಿಷಗಳಿಗೆ ಒಳಗಾಗದಿರಿ: ಪೌರಕಾರ್ಮಿಕ ನೇಮಕಾತಿ ವಿಚಾರವಾಗಿ ಪ್ರಮಾಣ ಪತ್ರಗಳನ್ನು ಸಿದ್ಧಪಡಿಸಿ, ಅಪ್ಲೋಡ್ ಮಾಡಲು ಪಾಲಿಕೆಯ ಅಧಿಕಾರಿಗಳು ಸಹಕರಿಸಲಿದ್ದು, ಈ ಸಂಬಂಧ ನೇಮಕಗೊಂಡ ಪೌರಕಾರ್ಮಿಕರು ಯಾವುದೇ ಮಧ್ಯವರ್ತಿಗಳನ್ನು ಭೇಟಿ ಮಾಡಕೂಡದು. ಜತೆಗೆ ಯಾವುದೇ ಆಮಿಷಗಳಿಗೆ ಒಳಗಾಗಬಾರದೆಂದು ಪೌರಕಾರ್ಮಿಕ ಹುದ್ದೆಗೆ ಆಯ್ಕೆಯಾಗಿರುವ, ಸಿಂಧುತ್ವ ಪ್ರಮಾಣ ಪತ್ರ ಅಗತ್ಯವಿರುವವರಲ್ಲಿ ಆಡಳಿತ ವಿಭಾಗದ ವಿಶೇಷ ಆಯುಕ್ತರು ಹಾಗೂ ಪೌರಕಾರ್ಮಿಕರ ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಯಾದ ನವೀನ್ ಕುಮಾರ್ ರಾಜು ಕೋರಿದ್ದಾರೆ.
Related

You Might Also Like
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...