CRIMENEWSನಮ್ಮಜಿಲ್ಲೆ

ಹುಲ್ಲಿನ ಮೆದೆಗೆ ಬಿದ್ದಿದ್ದ ಬೆಂಕಿ ಆರಿಸಲು ಹೋದ ಯುವಕ ಸಜೀವ ದಹನ

ವಿಜಯಪಥ ಸಮಗ್ರ ಸುದ್ದಿ

ಕೆ.ಆರ್.ಪೇಟೆ: ಹುಲ್ಲಿನ ಮೆದೆಗೆ ಆಕಸ್ಮಿಕವಾಗಿ ಬಿದ್ದಿದ್ದ ಬೆಂಕಿ ಆರಿಸಲು ಹೋಗಿ ಯುವಕನೊಬ್ಬ ಸಜೀವ ದಹನಗೊಂಡಿರುವ ಘಟನೆ ಕತ್ತರಘಟ್ಟ ಗ್ರಾಮದಲ್ಲಿ ನಡೆದಿದೆ.

ಕತ್ತರಘಟ್ಟ ಗ್ರಾಮದ ಸಿದ್ದಯ್ಯ ಎಂಬುವರ ಮಗ ದಲಿತ ಯುವ ರೈತ ಜಯಕುಮಾರ್ ಜೀವಂತ ಸುಟ್ಟು ಕರಕಲಾದ ದುರ್ದೈವಿಯಾಗಿದ್ದಾರೆ.

ಸಾವಿರಾರು ರೂಪಾಯಿ ಬೆಲೆ ಬಾಳುವ ಹುಲ್ಲಿನ ಮೆದೆ ಹಾಳಾಗುತ್ತಿದೆಯಲ್ಲ ಎಂದು ಅದನ್ನು ನಂದಿಸಲು ಮುಂದೆ ಹೋದಾಗ ಬೆಂಕಿಯ ಕೆನ್ನಾಲಿಗೆಗೆ ಸಿಕ್ಕಿ ಜಯಕುಮಾರ್ ಸಜೀವ ದಹನಗೊಂಡಿದ್ದಾರೆ.

ಇನ್ನು ಸ್ಥಳಕ್ಕೆ ಬಂದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಕೆ.ಆರ್.ಪೇಟೆ ಗ್ರಾಮಾಂತರ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ವಿಷಯ ತಿಳಿದ ಅಗ್ನಿ ಶಾಮಕ ಸಿಬ್ಬಂದಿಗಳು ಹಾಗೂ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದರಾದರೂ ಅಷ್ಟರಲ್ಲಿ ಹುಲ್ಲಿನ ಮೆದೆ ಸಂಪೂರ್ಣವಾಗಿ ಸುಟ್ಟು ಬೂದಿಯಾಗಿತ್ತು.

ಇತ್ತ ಜಯಕುಮಾರ್ ಅವರ ಮೃತದೇಹ ಕೂಡ ಹುಲ್ಲಿನ ಮೆದೆಯ ಬಳಿಯೇ ಬಿದ್ದಿತ್ತು. ಈ ಸಂಬಂಧ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

ಆದರೆ, ಇದು ಬೆಂಕಿ ನಂದಿಸಲು ಹೋಗಿ ಯುವಕ ಸಜೀವ ದಹನಗೊಂಡಿದ್ದಾನೋ ಇಲ್ಲ ಬೇರೆ ಏನಾದರು ಹೆಚ್ಚುಕಮ್ಮಿ ಆಗಿದೆಯೋ ಎಂಬ ಅನುಮಾನ ಕೂಡ ಮೂಡುತ್ತಿದ್ದು, ಈ ಬಗ್ಗೆ ಪೊಲೀಸರ ತನಿಖೆಯಿಂದ ಸತ್ಯ ತಿಳಿಯಬೇಕಿದೆ.

Megha
the authorMegha

Leave a Reply

error: Content is protected !!
Latest news
ಟನ್‌ ಕಬ್ಬಿಗೆ 3650 ರೂ. ಎಫ್ಆರ್‌ಪಿ ದರ ಘೋಷಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಸಲ್ಲ- 4500 ರೂ. ನಿಗದಿಗೊಳಿಸಬೇಕು: ಕ... KKRTC ವಿಜಯಪುರ: ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಭ್ರಷ್ಟಾಚಾರ ಸಾಬೀತು- ಆದರೂ ಕ್ರಮ ತೆಗೆದುಕೊಳ್ಳದ ಎಂಡ... KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ...