NEWSನಮ್ಮಜಿಲ್ಲೆಬೆಂಗಳೂರು

ಇಂದಿನಿಂದ 5 ದಿನಗಳವರೆಗೆ ನಮ್ಮ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಆ.20 ಅಂದರೆ ಇಂದಿನಿಂದ ಒಟ್ಟು ಐದು ದಿನಗಳು ಮೆಟ್ರೋ ರೈಲುಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ಹಸಿರು ಮಾರ್ಗದ ನಾಗಸಂದ್ರದಿಂದ ಮಾದಾವರವರೆಗಿನ ವಿಸ್ತೃತ ಮಾರ್ಗದಲ್ಲಿ ಸಿಗ್ನಲಿಂಗ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಈ ಹಿನ್ನೆಲೆ ಪೀಣ್ಯ ಇಂಡಸ್ಟ್ರಿ-ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ 5 ದಿನಗಳು ರೈಲು ಸಂಚಾರ ಸಂಪೂರ್ಣ ಬಂದ್ ಆಗಲಿದೆ ಎಂದು ತಿಳಿಸಿದೆ.

ಯಾವೆಲ್ಲ ನಿಲ್ದಾಣಗಳ ನಡುವೆ ಸಂಚಾರ ಇರಲ್ಲ?: ನಿಗದಿತ ದಿನಗಳಂದು ಹಸಿರು ಮಾರ್ಗದಲ್ಲಿ ರೈಲು ರೇಷ್ಮೆ ಮಂಡಳಿಯಿಂದ ಆರಂಭವಾಗಿ ಪೀಣ್ಯ ಇಂಡಸ್ಟ್ರಿವರೆಗೂ ಮಾರ್ಗ ಮಾತ್ರ ಸಂಚಾರ ನಡೆಸಲಿವೆ. ಆ ಬಳಿಕ ಬರುವ ಜಾಲಹಳ್ಳಿ, ದಾಸರಹಳ್ಳಿ ಹಾಗೂ ನಾಗಸಂದ್ರ ನಿಲ್ದಾಣಗಳಿಗೆ ರೈಲು ಸೇವೆ ಇರಲ್ಲ.

ಒಟ್ಟಾರೆ ಪೀಣ್ಯ ಇಂಡಸ್ಟ್ರಿಯಿಂದ ನಾಗಸಂದ್ರ ನಡುವೆ 4 ನಿಲ್ದಾಣಗಳ ನಡುವೆ 5 ದಿನ ಸಂಚಾರ ಬಂದ್ ಆಗಲಿದೆ. ಆಗಸ್ಟ್ 24ರಂದು ಒಂದು ಗಂಟೆ ವ್ಯತ್ಯಯ. ಆಗಸ್ಟ್ 24 ರಂದು ನಾಗಸಂದ್ರದಿಂದ ರಾತ್ರಿ 11.05 ರ ಬದಲಾವಣೆ 10 ಗಂಟೆಗೆ ಕೊನೆಯ ರೈಲು ಹೊರಡಲಿದೆ. ಅಂದರೆ, ಒಂದು ಗಂಟೆ ಬೇಗ ಸೇವೆ ಕೊನೆಗೊಳಿಸಲಾಗುತ್ತಿದೆ.

ಇನ್ನು ಆಗಸ್ಟ್ 25 ರಂದು ನಾಗಸಂದ್ರದಿಂದ ರೈಲು ಬೆಳಗ್ಗೆ 5 ಗಂಟೆಯ ಬದಲಾಗಿ 6 ಗಂಟೆಗೆ ಆರಂಭವಾಗಲಿದೆ. ಇದೇ ದಿನಗಳಂದು ಪೀಣ್ಯ ಇಂಡಸ್ಟ್ರಿಯಿಂದ ಎಂದಿನಂತೆ ಸೇವೆ ಇರಲಿದೆ. ಅಂದರೆ, ಆಗಸ್ಟ್ 24 ರಂದು ಕೊನೆಯ ರೈಲು ಪೀಣ್ಯ
ಇಂಡಸ್ಟ್ರಿಯಿಂದ ರಾತ್ರಿ 11.12 ಕ್ಕೆ ಹೊರಡಲಿದೆ. ಆಗಸ್ಟ್ 25 ಕ್ಕೆ ಮೊದಲ ರೈಲು ಬಳಗ್ಗೆ 5 ಕ್ಕೆ ಆರಂಭವಾಗಲಿದೆ.

ನೇರಳೆ ಮಾರ್ಗದಲ್ಲಿ ವ್ಯತ್ಯಯ ಇಲ್ಲ!: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ರೈಲುಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯ ಇಲ್ಲ. ಅಲ್ಲದೇ, ಹಸಿರು ಮಾರ್ಗದ ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಮಂಡಳಿವರೆಗೂ ರೈಲುಗಳ ಸಂಚಾರದಲ್ಲಿ ಸಮಸ್ಯೆ ಇಲ್ಲ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ನಾಗಸಂದ್ರ-ಮಾದಾವರ ಪ್ರಾಯೋಗಿಕ ಸಂಚಾರ: ನಮ್ಮ ಮೆಟ್ರೋ ನಾಗಸಂದ್ರ ಮಾದಾವರ ನಡುವೆ ಭಾನುವಾರದಿಂದ ಪ್ರಾಯೋಗಿಕ ಸಂಚಾರ ಆರಂಭವಾಗಿದೆ. ಸದ್ಯ ಈ ಮಾರ್ಗವನ್ನು ಸೆಪ್ಟೆಂಬರ್‌ನಲ್ಲಿ ಆರಂಭಿಸಬೇಕು ಎಂದು ಅಗತ್ಯ ಸಿದ್ಧತೆ ನಡೆಸಲಾಗುತ್ತಿದೆ. ಸಿಗ್ನಲಿಂಗ್ ಕೆಲಸ ಬಾಕಿ ಇದ್ದು, ಅವುಗಳನ್ನು ಪೂರ್ಣಗೊಳಿಸಲು ಕೆಲ ನಿಲ್ದಾಣಗಳ ನಡುವೆ ರೈಲು ಸಂಚಾರ ರದ್ದು ಮಾಡಲಾಗುತ್ತಿದೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್