NEWSನಮ್ಮಜಿಲ್ಲೆಶಿಕ್ಷಣ-

ಸಮಾನತೆ ಯಾತ್ರೆ: ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ ಕಣ್ತುಂಬಿಕೊಂಡ ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಲಾಲ್‌ಬಾಗ್‌ನಲ್ಲಿ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಕೇಂದ್ರಿತ 216ನೇ ಫಲಪುಷ್ಪ ಪ್ರದರ್ಶನವನ್ನು ಕೊನೆಯ ದಿನವಾದ ಸೋಮವಾರ  ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಣ್ತುಂಬಿಕೊಂಡರು.

ಡಾ.ಬಿ.ಆರ್.ಅಂಬೇಡ್ಕರ್ ಕೇಂದ್ರಿತ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗಾಗಿ ವಿಶೇಷ ಪ್ರವಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. “ಸಮಾನತೆ ಯಾತ್ರೆ” ಹೆಸರಿನಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು ಲಾಲ್‌ಬಾಗ್‌ಗೆ ಭೇಟಿ ನೀಡಿ ಪುಷ್ಪಪ್ರದರ್ಶನವನ್ನು ವೀಕ್ಷಿಸಿದರು.

ವಿದ್ಯಾರ್ಥಿಗಳ ಪ್ರವಾಸಕ್ಕಾಗಿ ವಿವಿ ಆಡಳಿತ ಮಂಡಳಿ ಬಸ್ ವ್ಯವಸ್ಥೆ ಮಾಡಿದ್ದು, 10ಕ್ಕೂ ಹೆಚ್ಚು ಬಿಎಂಟಿಸಿ ಬಸ್‌ಗಳಲ್ಲಿ 600ಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರಯಾಣಿಸಿ ಪುಷ್ಪಪ್ರದರ್ಶನ ವೀಕ್ಷಿಸಿದರು. ಸಮಾನತೆ ಯಾತ್ರೆಯ ಪ್ರವಾಸಕ್ಕೆ ಬೆಂಗಳೂರು ವಿಶ್ವವಿದ್ಯಾಲಯ ಕುಲಪತಿ ಡಾ.ಜಯಕರ ಎಸ್.ಎಂ, ಕುಲಸಚಿವ ಶೇಕ್ ಲತೀಫ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಪುಷ್ಪಪ್ರದರ್ಶನದಲ್ಲಿ ಹೂಗಳಲ್ಲಿ ಅರಳಿ ನಿಂತಿದ್ದ ಬಾಬಾಸಾಹೇಬ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಜೀವನ ಸಾಧನೆ, ಕೊಡುಗೆಗಳು, ಪ್ರಮುಖ ಘಟ್ಟಗಳು, ಚಿಂತನೆಗಳು, ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಆಶಯಗಳನ್ನು ವೀಕ್ಷಿಸಿದರು.

ಸಮಾನತೆ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಕುಲಪತಿ ಡಾ‌.ಎಸ್.ಎಂ.ಜಯಕರ, ಇತಿಹಾಸದ ಭಾಗವಾಗಿರುವ ಡಾ.ಬಿ.ಆರ್.ಅಂಬೇಡ್ಕರ್‌ರ ಅಧ್ಯಯನ ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕವಾಗಿರಲಿದೆ. ಪುಷ್ಪಪ್ರದರ್ಶನ ವೀಕ್ಷಿಸುವ ಮೂಲಕ ವಿದ್ಯಾರ್ಥಿಗಳು ಡಾ.ಬಿ.ಆರ್.ಅಂಬೇಡ್ಕರರ ಚಿಂತನೆ, ಆಶಯ, ವ್ಯಕ್ತಿ ಉದ್ದೇಶಗಳನ್ನು ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳ ಜ್ಞಾನರ್ಜನೆಗೆ ವಿಶ್ವವಿದ್ಯಾಲಯ ಸದಾ ಬೆಂಬಲವಾಗಿರಲಿದೆ ಎಂದರು.

ಸಂಶೋಧನಾ ವಿದ್ಯಾರ್ಥಿ ಹಾಗೂ ಮುಖಂಡ ಚಂದ್ರು ಪೆರಿಯಾರ್ ಮಾತನಾಡಿ, “ಸ್ವಾತಂತ್ರ್ಯೋತ್ಸವದಂದು ಅಂಬೇಡ್ಕರ್‌ರವರ ಕೇಂದ್ರಿತ ಫಲಪುಷ್ಪ ಪ್ರದರ್ಶನ ಆಯೋಜಿಸಿ ರಾಜ್ಯ ಸರ್ಕಾರ ಮತ್ತು ತೋಟಗಾರಿಕೆ ಇಲಾಖೆ ವಿಶ್ವದ ಗಮನ ಸೆಳೆದಿದೆ. ಇನ್ನು ವಿವಿಯೂ ಕೂಡ ನಮಗೆ ಈ ಅವಕಾಶ ಕಲ್ಪಿಸಿಕೊಟ್ಟಿರುವುದು ಸಂತಸ ತಂದಿದೆ. ಈ ಕಾರ್ಯ ದೇಶದ ಎಲ್ಲ ವಿಶ್ವವಿದ್ಯಾಲಯಗಳಿಗೆ ಮಾದರಿಯಾಗಬೇಕು ಎಂದರು.

ವಿತ್ತಾಧಿಕಾರಿ ಡಾ.ಸುನೀತಾ,ವಿದ್ಯಾರ್ಥಿ ಕಲ್ಯಾಣ ನಿರ್ದೇಶಕ ಪ್ರೊ. ಜಯರಾಮ್ ನಾಯಕ್, ಪ್ರೊ.ಪಿ.ಸಿ.ನಾಗೇಶ್, ಸಿಂಡಿಕೇಟ್ ಸದಸ್ಯೆ ಡಾ. ಸರ್ವಮಂಗಳ, ನಿಕಟಪೂರ್ವ ಕುಲಸಚಿವ (ಮೌಲ್ಯಮಾಪನ) ಪ್ರೊ.ಸಿ. ಶಿವರಾಜು, ಪ್ರೊ.ಸಿ.ಡಿ. ವೆಂಕಟೇಶ್, ಡಾ. ದಿನೇಶ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತ ಕಟ್ಟುನಿಟ್ಟಿನ ಕಾನೂನು ಜಾರಿಗೆ ರೈತ ಮುಖಂಡರ ಆಗ್ರಹ KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು