NEWSವಿಡಿಯೋ

ಬೀದಿಗೆ ಬಿದ್ದ ಗುಲಾಬಿ ಬೆಳೆಗಾರರು

ವಿಜಯಪಥ ಸಮಗ್ರ ಸುದ್ದಿ

ದೊಡ್ಡಬಳ್ಳಾಪುರ:  ಇಡೀ ದೇಶವೇ ಲಾಕ್ ಡೌನ್ ಆಗಿರುವ ಸಂದರ್ಭದಲ್ಲಿ  ಹೂ ಬೆಳಗಾರರು ಬೀದಿಗೆ ಬೀಳುವಂತಾಗಿದೆ. ತಾಲೂಕಿನಲ್ಲಿ ಗುಲಾಬಿ, ಜರ್ಬಾರ್,   ಸೆವಂತಿಗೆ  ಹೂ ಗಳನ್ನು  ಬೆಳೆದ ರೈತರು ಕಂಗಾಲಾಗಿದ್ದು ಹೂ ಗಿಡದಲ್ಲೇ ಕೊಳೆಯುತ್ತಿದೆ.

ಕೊರೊನಾ ಲಾಕ್ ಡೌನ್  ಹಿನ್ನೆಲೆಯಲ್ಲಿ  ಯಾವುದೇ ದೇವಾಲಯಗಳು ಶುಭ ಸಮಾರಂಭಗಳು ನಡೆಯದೇ ಇರುವುದರಿಂದ ಹೂ ಮಾರಾಟ ಗಣನೀಯವಾಗಿ ಇಳಿಕೆಯಾಗಿದೆ. ಆದರೆ ಸಾಲ ಮಾಡಿ ಬಂಡವಾಳ ಹೂಡಿರುವ ರೈತರ ಪರಿಸ್ಥಿತಿ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಸುಮಾರು 10 ಎಕರೆ  ಪ್ರದೇಶದಲ್ಲಿ ಗುಲಾಬಿ, ಜರ್ಬಾರ್, ಸೆವಂತಿಗೆ ಬೆಳೆದ ಮುನಿಕೃಷ್ಣಪ್ಪ ಎಂಬ  ರೈತ  ಬ್ಯಾಂಕ್ನಲ್ಲಿ ಸಾಲ ಮಾಡಿ ಬಂಡವಾಳ ಹೂಡಿಕೆ ಮಾಡಿದ್ದೇವೆ ಆದರೆ ವೈರಸ್ ಕಾರಣದಿಂದ ಹೂಗಳನ್ನು ಯಾರು ಕೊಳ್ಳುತ್ತಿಲ್ಲ ಇದರಿಂದ ಕಿತ್ತು ಎಲ್ಲ ತಿಪ್ಪೆಗೆ ಸುರಿಯುತ್ತಿದ್ದೇವೆ ಎಂದು ಅಳಲು ತೋಡಿಕೊಂಡಿದ್ದಾರೆ.

ಇನ್ನು ಸಂಬಂಧಪಟ್ಟ ತೋಟಗಾರಿಕಾ ಅಧಿಕಾರಿಗಳು ಇಂತಹ ಬೆಳೆಗಳಿಗೆ ಪರಿಹಾರ ನೀಡಬೇಕೆಂದು ರೈತ ಮುನಿಕೃಷ್ಣಪ್ಪ ಮನವಿ ಮಾಡಿದ್ದಾರೆ. ಅಲ್ಲದೇ ಹೂವನ್ನು ಮಾರಲು ಮಾರುಕಟ್ಟೆ ಸೌಲಭ್ಯ ಒದಗಿಸಿ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಇಂದು ಕೊರೊನಾ ಮಹಾಮಾರಿಗೆ ಜಗತ್ತೇ ತತ್ತರಿಸಿ ಹೋಗಿದ್ದು, ಒಂದೆಡೆ ವಸ್ತುಗಳ ಬೆಲೆ ಏರಿಕೆಯಾದರೆ ಮತ್ತೊಂದೆಡೆ ರೈತರು ಸಂಕಷ್ಟಪಡುವ ಸ್ಥಿತಿ ನಿರ್ಮಾಣವಾಗಿದೆ ಇದಕ್ಕೆ ಸರ್ಕಾರ ಸೂಕ್ತ ಪರಿಹಾರ ಕಂಡುಕೊಂಡು ರೈತರಿಗೆ ನೆರವಾಗಬೇಕಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ