NEWSನಮ್ಮಜಿಲ್ಲೆನಮ್ಮರಾಜ್ಯ

KKSRTC ಸಂಡೂರು ಘಟಕದಲ್ಲಿ ನೀರಿಲ್ಲದೆ ಸಿಬ್ಬಂದಿಗಳ ಪರದಾಟ – ಮಲ ಮೂತ್ರ ವಿಸರ್ಜನೆಗೂ ತೊಳಲಾಟ!

ವಿಜಯಪಥ ಸಮಗ್ರ ಸುದ್ದಿ

ಸಂಡೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (NWKRTC) ಬಳ್ಳಾರಿ ವಿಭಾಗದ ಸಂಡೂರು ಘಟದಲ್ಲಿ ಕಳೆದ ಒಂದು ತಿಂಗಳಿಂದಲೂ ನೀರಿಲ್ಲದೆ ನೌಕರರು ಮತ್ತು ಘಟಕದ ಸಿಬ್ಬಂದಿ ಪರದಾಡುತ್ತಿದ್ದಾರೆ. ಆದರೂ ಡಿಎಂ ಈ ಬಗ್ಗೆ ಯಾವುದೇ ವ್ಯವಸ್ಥೆ ಮಾಡಿಲ್ಲ ಎಂದು ಸಿಬ್ಬಂದಿ ಆರೋಪಿಸಿದ್ದಾರೆ.

ಘಟಕದಲ್ಲಿ 20-5ದಿನಗಳಿಂದಲೂ ಕುಡಿಯುವುದಕ್ಕೆ, ಶೌಚ್ಚ ಹೋಗುವುದಕ್ಕೂ ನೀರಿಲ್ಲ. ಇದರಿಂದ ಪುರುಷ ಸಿಬ್ಬಂದಿಗಳು ಹೇಗೂ ಬಯಲಲ್ಲಿ ಮಲ ಮೂತ್ರ ವಿಸರ್ಜನೆ ಮಾಡಿಕೊಂಡು ಬರುತ್ತಿದ್ದಾರೆ. ಆದರೆ ಇಲ್ಲಿ ಕೆಲಸ ಮಾಡುವ ಮಹಿಳಾ ಸಿಬ್ಬಂದಿಗಳು ಬೆಳಗ್ಗೆಯಿಂದ ಸಂಜೆ ಡ್ಯೂಟಿ ಮುಗಿಸಿ ಹೋಗುವವರೆಗೂ ಶೌಚ್ಚಕ್ಕೆ ಹೋಗಲಾಗದೆ ತುಂಬ ಸಮಸ್ಯೆ ಅನುಭವಿಸುತ್ತಿದ್ದಾರೆ ಎಂದು ಅಳಲು ತೋಡಿಕೊಂಡಿದ್ದಾರೆ.

ನಾವು ಬೆಳಗ್ಗೆ 8 ಗಂಟೆಗೆ ಮನೆ ಬಿಟ್ಟು ಘಟಕಕ್ಕೆ ಬರುತ್ತೇವೆ. ಇನ್ನು ಕೆಲವರು ಮುಂಜಾನೆ 4.30ರಿಂದಲೇ ಘಟಕದಲ್ಲಿ ಇರುತ್ತಾರೆ. ಆದರೆ, ನಮಗೆ ಮೂಲಭೂತವಾಗಿ ಬೇಕಾದ ನೀರಿನ ವ್ಯಸ್ಥೆಯೇ ಇಲ್ಲದೆ ಶೌಚಾಲಯ ಕೂಡ ಮೂಗು ಕೊಡಲಾರದಷ್ಟು ಗಬ್ಬೆದ್ದು ನಾರುತ್ತಿದೆ.

ಇನ್ನೊಂದೆಡೆ ಘಟಕದಲ್ಲಿ ಸ್ವಚ್ಚತ ಸಿಬ್ಬಂದಿಗಳಿಲ್ಲ ಎಲ್ಲ ಕಡೆ ಕಸದಿಂದ ತುಂಬಿಹೋಗಿದೆ. ಈ ರೀತಿ ಆದರೆ ನಾವು ಕೆಲಸ ಮಾಡುವುದಾರರು ಹೇಗೆ? ಇನ್ನಾದರೂ ಈ ಬಗ್ಗೆ ಗಮನಹರಿಸಬೇಕು ಎಂದು ಹೆಸರೇಳಲಿಚ್ಛಿಸದ ಸಿಬ್ಬಂದಿ ಒತ್ತಾಯಿಸಿದ್ದಾರೆ.

ಸಿಬ್ಬಂದಿಯೊಬ್ಬರು ವಿಡಿಯೋ ಮಾಡಿ ಬಿಡುತ್ತಿದ್ದಂತೆ ಕೆಟ್ಟು ಹೋಗಿದ್ದ ಬೋರ್‌ವೆಲ್‌ ಸರಿಪಡಿಸಿದ್ದು, ಸದ್ಯ ಘಟಕದಲ್ಲಿ ಇರುವ ಶೌಚಾಲಯಕ್ಕೆ ಮತ್ತು ಕುಡಿಯುವ ನೀರಿನ ಪೈಪ್‌ಗಳನ್ನು ಹೊಸದಾಗಿ ಅಳವಡಿಸಿ ನೀರಿನ ಸಮಸ್ಯೆಯನ್ನು ನಿವಾರಿಸಲಾಗಿದೆ ಎಂದು ಘಟಕ ವ್ಯವಸ್ಥಾಪಕರು ವಿಜಯಪಥಕ್ಕೆ ತಿಳಿಸಿದ್ದಾರೆ.

ಹೀಗಾಗಿ ಕಳೆದ 20-25ದಿನಗಳಿಂದ ನೀರಿಲ್ಲದೆ ಬೇಸತ್ತು ಹೋಗಿದ್ದ ಸಿಬ್ಬಂದಿಗಳು ಸದ್ಯ ನಿರಾಳರಾಗಿದ್ದಾರೆ. ಘಟಕದಲ್ಲಿ ನೀರು ಬಾರದಿದ್ದರಿಂದ ಮಹಿಳಾ ಸಿಬ್ಬಂದಿ ಮತ್ತು ಮಧುಮೇಹದಿಂದ ಬಳಲುತ್ತಿದ್ದ ಸಿಬ್ಬಂದಿಗಳು ಭಾರಿ ಯಾತನೆ ಅನುಭವಿಸುತ್ತಿದ್ದರು ಆದರೆ ಅದಕ್ಕೆ ಸದ್ಯ ಮುಕ್ತಿ ಸಿಕ್ಕಿದೆ ಎಂದು ಡಿಪೋ ವ್ಯವಸ್ಥಾಪಕರು ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತ ಕಟ್ಟುನಿಟ್ಟಿನ ಕಾನೂನು ಜಾರಿಗೆ ರೈತ ಮುಖಂಡರ ಆಗ್ರಹ KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು