KKRTC: ಮಧ್ಯರಾತ್ರಿ ಕೆಟ್ಟುನಿಂತ ಎಸಿ ಬಸ್- 8ಗಂಟೆಗಳು ಪ್ರಯಾಣಿಕರ ಪರದಾಡಿಸಿದ ಡಿಎಂ ಅಮಾನತು ಮಾಡಿ ಎಂಡಿ ರಾಚಪ್ಪ ಆದೇಶ

- ಮಧ್ಯರಾತ್ರಿ ಕೆಟ್ಟು ನಿಂತ ಕೆಕೆಆರ್ಟಿಸಿ ಬಸ್ । ಪರ್ಯಾಯ ವ್ಯವಸ್ಥೆ ಮಾಡದೆ ಡಿಪೋ ವ್ಯವಸ್ಥಾಪಕನ ನಿರ್ಲಕ್ಷ್ಯ
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ (KKRTC) ಸಂಸ್ಥೆಯ ಎಸಿ ಸ್ವೀಪರ್ ಬಸ್ವೊಂದು ಕಲಬುರಗಿ- ಬೆಂಗಳೂರಿಗೆ ಹೋಗುವ ಮಾರ್ಗ ಮಧ್ಯದಲ್ಲೇ ತಡರಾತ್ರಿ ಕೆಟ್ಟು ನಿಂತಿದ್ದರೂ ಪರ್ಯಾಯ ವ್ಯವಸ್ಥೆ ಮಾಡದೆ ನಿರ್ಲಕ್ಷ್ಯ ಮಾಡಿದ ಘಟಕ ವ್ಯವಸ್ಥಾಪಕರನ್ನು ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಚಪ್ಪ ಅಮಾನತು ಮಾಡಿದ್ದಾರೆ.
ಮಾರ್ಗಮಧ್ಯೆ ಬಸ್ ಕೆಟ್ಟು ನಿಂತ ಬಳಿಕ ಸಕಾಲಕ್ಕೆ ಮತ್ತೊಂದು ಬಸ್ ವ್ಯವಸ್ಥೆ ಮಾಡದೆ ನಿರ್ಲಕ್ಷ್ಯ ಮಾಡಿದ ಸಂಸ್ಥೆಯ ಕಲಬುರಗಿ ಘಟಕ-1ರ ಡಿಎಂ ಅಶೋಕ ದೊಡ್ಡಮನಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಕೆಕೆಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಚಪ್ಪ ತಿಳಿಸಿದ್ದಾರೆ.
ಘಟನೆ ವಿವರ: ಕಲಬುರಗಿ ಘಟಕ-1ರ ಎಸಿ ಸ್ವೀಪರ್ ಬಸ್ (ಕೆಎ 32 ಎಫ್ 2011) ಗುರುವಾರ ಅಂದರೆ ಮೇ 15 ರಾತ್ರಿ 7 ಗಂಟೆಗೆ ಸುಮಾರಿಗೆ 30 ಜನ ಪ್ರಯಾಣಿಕರನ್ನು ಕರೆದುಕೊಂಡು ಕಲಬುರಗಿಯಿಂದ ಬೆಂಗಳೂರಿಗೆ ಹೊರಟಿತ್ತು. ಈ ಬಸ್ ಶುಕ್ರವಾರ ಮೇ 16ರ ಬೆಳಗ್ಗೆ 7 ಗಂಟೆಗೆ ಬೆಂಗಳೂರಿಗೆ ತಲುಪಬೇಕಾಗಿತ್ತು.
ಇನ್ನು ಪ್ರಯಾಣಿಕರು ತಲಾ 1210 ರೂ. ಬಸ್ ಚಾರ್ಜ್ಕೊಟ್ಟದರು. ಇನ್ನು ಶುಕ್ರವಾರ ಬೆಳಗ್ಗೆ ಮದುವೆ, ಆಸ್ಪತ್ರೆ ಮತ್ತು ಸಂದರ್ಶನ ಹೀಗೆ ಹಲವಾರು ಕಾರ್ಯಗಳಲ್ಲಿ ತೊಡಗುವವರಿದ್ದರು. ಆದರೆ ಬೆಂಗಳೂರನ್ನು ಸಮಯಕ್ಕೆ ಸರಿಯಾಗಿ ತಲುಪುತ್ತೇವೆ ಅಂದು ಕೊಂಡಿದ್ದ ವೃದ್ಧರು, ಕಂಪನಿಗಳಲ್ಲಿ ಸಂದರ್ಶನಕ್ಕೆ ಹೋಗುತ್ತಿದ್ದ ಯುವಕರು ಸೇರಿದಂತೆ ಇತರೆ ಪ್ರಯಾಣಿಕರಿಗೆ ಶಾಕ್ಆಗಿದೆ. ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಬಳ್ಳಾರಿ ಬಳಿಯಲ್ಲಿರುವ ಬೈಲೂರ ಹತ್ತಿರ ಹಠಾತ್ ಆಗಿ ಬಸ್ ಕೆಟ್ಟು ನಿಂತಿದೆ. ಇದನ್ನು ನೋಡಿ ಪ್ರಯಾಣಿಕರು ಆತಂಕಗೊಂಡರು.
ಇನ್ನು ಸ್ವಲ್ಪಹೊತ್ತಿನಲ್ಲೇ ಬಸ್ ದುರಸ್ತಿಯಾಗಲಿದೆ ಎಂಬ ಆಶಾಭಾವನೆ ಹೊಂದಿದ್ದ ಪ್ರಯಾಣಿಕರಿಗೆ ನಿರಾಸೆಯಾಗಿದೆ. ಹಲವಾರು ಗಂಟೆಗಳ ಕಾಲ ಚಾಲಕ-ನಿರ್ವಾಹಕರು ದುರಸ್ತಿಗೆ ಪ್ರಯತ್ನಿಸಿದ್ದರೂ ಅದು ಫಲ ನೀಡಲಿಲ್ಲ. ಕೊನೆಗೆ ಪ್ರಯಾಣಿಕರು ಮತ್ತು ಚಾಲಕರು ಕಲಬುರಗಿ ಘಟಕ-1ರ ಮ್ಯಾನೇಜರ್ಗೆ ಕರೆ ಮಾಡಿ ಪರ್ಯಾಯ ಬಸ್ ವ್ಯವಸ್ಥೆಗೆ ಮನವಿ ಮಾಡಿದ್ದಾರೆ.
ಆದರೆ ಸಕಾಲಕ್ಕೆ ಅವರು ಬಸ್ ವ್ಯವಸ್ಥೆ ಮಾಡಲಿಲ್ಲ. ಮನೆಯಲ್ಲಿ ಹೋಗಿ ಬೆಚ್ಚಗೆ ಮಲಗಿ ಬಳಗ್ಗೆ ಡ್ಯೂಟಿಗೆ ಮಾಮೂಲಿನಂತೆ ಬಂದು ಅದರಲ್ಲೂ ಮುಂಜಾನೆ 5-6ಗಂಟೆಗಾದರೂ ಬಸ್ ವ್ಯವಸ್ಥೆ ಮಾಡಬೇಕಿತ್ತು. ಆದರೆ ಹಾಗೆ ಮಾಡದರೆ ಮಾರನೇ ದಿನ ಅಂದರೆ ಶುಕ್ರವಾರ ಬೆಳಗ್ಗೆ 10 ಗಂಟೆ ಬಸ್ ವ್ಯವಸ್ಥೆ ಮಾಡಿ ಕಳುಹಿಸಿದ್ದಾರೆ.

ಇನ್ನು ಅಲ್ಲಿಯವರೆಗೂ ಪ್ರಯಾಣಿಕರು ರಾತ್ರಿ ಪೂರ್ತಿ ನಿದ್ದೆಗೆಟ್ಟು ಬಸ್ಗಾಗಿ ಕಾದು ಸುಸ್ತಾಗಿದ್ದರು. ಕೊನೆಗೆ ಬೆಳಗ್ಗೆ 10 ಗಂಟೆ ಬಳಿಕ ನಾನ್ ಎಸಿ ಕೆಂಪು ಬಸ್ ಬಂದ ಬಳಿಕ ಸಂಜೆ 4.30ಕ್ಕೆ ಬೆಂಗಳೂರು ತಲುಪಬೇಕಾಯಿತು.
ನಿರ್ಜನ ಪ್ರದೇಶದಲ್ಲಿ ಬಸ್ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಸುತ್ತಮುತ್ತಲೂ ಹೋಟೆಲ್ ಇತರೆ ಆಶ್ರಯ ಇಲ್ಲದೆ 8 ಗಂಟೆಗಳಿಗೂ ಹೆಚ್ಚು ಕಾಲ ಇನ್ನೊಂದು ಬಸ್ಗಾಗಿ ಕಾಯುವಂತಾಯಿತು. ರಾತ್ರಿಯಿಡಿ ವೃದ್ಧರು, ಮಕ್ಕಳು ತೊಂದರೆ ಅನುಭವಿಸಬೇಕಾಯಿತು.
ಜತೆಗೆ ಭಯ, ಆತಂಕದಲ್ಲಿಯೇ ನಿದ್ದೆ ಇಲ್ಲದೆ ತೊಂದರೆ ಅನುಭವಿಸುವಂತಾಯಿತು. ಇದಕ್ಕೆಲ್ಲ ಘಟಕ ವ್ಯವಸ್ಥಾಪಕರ ನಿರ್ಲಕ್ಷ್ಯವೆ ಕಾರಣ ಎಂದು ಪ್ರಯಾಣಿಕರು ತಾವು ಅನುಭವಿಸಿದ ಸಮಸ್ಯೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.
Related


You Might Also Like
ಬೆಳ್ಳಂಬೆಳಗ್ಗೆ ಅನಿರೀಕ್ಷಿತ ಭೇಟಿ ನೀಡಿ ಹಾಜರಾತಿ ಪರಿಶೀಲಿಸಿದ ಆಯುಕ್ತರು: ಪೌರ ಕಾರ್ಮಿಕರ ಮೇಲ್ವಿಚಾರಕರಿಬ್ಬರ ಮೇಲೆ ಕ್ರಮ
ಬೆಂಗಳೂರು: ಸರ್ವಜ್ಞನಗರ ಕ್ಷೇತ್ರದ ಬಾಣಸವಾಡಿಯ ಬಿಎಸ್ಎನ್ಎಲ್ ಮಸ್ಟರಿಂಗ್ ಪಾಯಿಂಟ್ (ಭುವನಗಿರಿ ಪಾರ್ಕ್) ನಲ್ಲಿ ಇಂದು ಮುಂಜಾನೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್...
ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ HCM
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು. ಇದೇ ಸೆ.22 ರಂದು ಪ್ರಾರಂಭವಾಗಲಿರುವ...
ಮೊಸಳೆಹೊಸಳ್ಳಿ ದುರಂತ: ಮೃತರ ಮನೆಗಳಿಗೆ ವ್ಹೀಲ್ ಚೇರ್ನಲ್ಲೇ ತೆರಳಿ ಸಾಂತ್ವನ ಹೇಳಿದ ಮಾಜಿ ಪ್ರಧಾನಿ ಎಚ್ಡಿಡಿ
ಹಾಸನ: ಜಿಲ್ಲೆಯ ಮೊಸಳೆಹೊಸಳ್ಳಿಯಲ್ಲಿ ಮೊನ್ನೆ ನಡೆದ ಅಪಘಾತ ಪ್ರಕರಣ ನಿಜಕ್ಕೂ ಘನಘೋರ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಚಂದನ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಮೂಲಕ...
ಸಾಲಬಾಧೆ-ಗಂಡ, ಇಬ್ಬರು ಮಕ್ಕಳು ಸೇರಿ ನಾಲ್ವರು ಆತ್ಮಹತ್ಯೆಗೆ ಯತ್ನ ಮೂವರು ಮೃತ: ಸಾವು ಬದುಕಿನ ನಡುವೆ ತಾಯಿ ಸೆಣಸಾಟ
ಹೊಸಕೋಟೆ: ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಮೃತಪಟ್ಟಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಗಂಡ, ಇಬ್ಬರು ಮಕ್ಕಳನ್ನು...
KSRTC ಹಾಸನ: ಸತ್ಯ ಮರೆಮಾಚಿದ ತನಿಖಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾದ ಡಿಸಿ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಸನ ವಿಭಾಗದ ತನಿಖಾ ಸಿಬ್ಬಂದಿ ಸತ್ಯ ಮರೆಮಾಚಲು ಬಾಡಿ ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವೊಂದು ಸಮಯದಲ್ಲಿ ಹ್ಯಾಂಗ್...
KSRTC ಹಾಸನ: ತನಿಖಾಧಿಕಾರಿಗಳ ಬಾಡಿ ಕ್ಯಾಮೆರಾದ ವಿಡಿಯೋ ರೆಕಾರ್ಡಿಂಗ್ ಕೊಡಲು ವಿಫಲ- ಆರೋಪ ಪತ್ರ ಜಾರಿ ಮಾಡಿದ ಡಿಸಿ
ಹಾಸನ: ಸಾರಿಗೆ ಸಂಸ್ಥೆಯ ಮಾರ್ಗ ತನಿಖಾಧಿಕಾರಿಗಳು ಬಾಡಿ ಕ್ಯಾಮೆರಾವನ್ನು ಹಾಕಿಕೊಂಡು ತನಿಖೆ ಮಾಡದ ಪರಿಣಾಮ ಮಾಹಿತಿ ಆಯೋಗದಲ್ಲಿ ಪ್ರಕರಣ ದಾಖಲು ಮಾಡಿದ ನೌಕರನಿಗೆ ವಿಡಿಯೋ ರೆಕಾರ್ಡಿಂಗ್ ಕೊಡಲು...
ಮೆಜೆಸ್ಟಿಕ್ BMTC: ಟೀ ಚೆನ್ನಾಗಿರುವುದಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ- ಆರೋಪಿ ಬಂಧನ
ಬೆಂಗಳೂರು: ಈ ಅಂಗಡಿಯಲ್ಲಿ ಬೇಡ ಇಲ್ಲಿ ಟೀ ಚೆನ್ನಾಗಿರುವುದಿಲ್ಲ ಎಂದು ಹೇಳಿ ಅಲ್ಲಿಯೇ ಪಕ್ಕದಲ್ಲಿದ್ದ ಟೀ ಅಂಗಡಿಗೆ ಹೋಗೋಣ ಎಂದು ಸಹೋದ್ಯೋಗಿಗೆ ಹೇಳಿದ್ದಕ್ಕೆ ಕುಪಿತನಾದ ಟೀ ಮಾರುವ...
KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!
ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ...
ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ಎಲ್ಲರೂ...