CrimeNEWSನಮ್ಮರಾಜ್ಯ

“ವಿಜಯಪಥ ಇಂಪ್ಯಾಕ್ಟ್‌”:  ನಕಲಿ ಬಸ್‌ಪಾಸ್‌ನಲ್ಲೇ 23ವರ್ಷಗಳು ಓಡಾಡಿದ್ದ  ಹೋಂ ಗಾರ್ಡ್‌ ಬಂಧಿಸಿದ KSRTC ಎಸ್‌&ವಿ ಅಧಿಕಾರಿಗಳು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಕಲಿ ಬಸ್‌ ಪಾಸ್‌ ಇಟ್ಟುಕೊಂಡು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಕಳೆದ 23 ವರ್ಷಗಳಿಂದಲೂ ಉಚಿತವಾಗಿ ಓಡಾಡುತ್ತಿದ್ದ ಗೃಹ ರಕ್ಷಕ ದಳದ ಸಿಬ್ಬಂದಿ (ಹೋಂ ಗಾರ್ಡ್‌) ಮುನಿರಾಜು ಎಂಬಾತನ ಬಗ್ಗೆ ಬುಧವಾರ ವಿಜಯಪಥದಲ್ಲಿ ವರದಿ ಮಾಡಲಾಗಿತ್ತು.

KSRTC: ಗೃಹ ರಕ್ಷಕ ದಳದ ಸಿಬ್ಬಂದಿಗೆ 54 ವರ್ಷಗಳವರೆಗೂ ಮಾನ್ಯತೆ ಇರುವ ಬಸ್‌ಪಾಸ್‌ ವಿತರಣೆ!!? 2001ರಿಂದ ಫ್ರೀಯಾಗಿ ಪ್ರಯಾಣಿಸುತ್ತಿರುವ ಭೂಪ! ಎಂಬ ಶೀರ್ಷಿಕೆಯಡಿ ವಿಜಯಪಥದಲ್ಲಿ ವರದಿ ಬರುತ್ತಿದಂತೆ ಅಲರ್ಟ್‌ ಆದ ಕೆಎಸ್‌ಆರ್‌ಟಿಸಿ ಭದ್ರತಾ ಮತ್ತು ಜಾಗೃತ ಅಧಿಕಾರಿಗಳು ಹೋಂ ಗಾರ್ಡ್‌ನ ಪತ್ತೆ ಕಾರ್ಯದಲ್ಲಿ ನಿರತರಾಗಿದ ಕೇವಲ 24 ಗಂಟೆಯೊಳಗೆ ಆತನನ್ನು ಹಿಡಿದು ಉಪ್ಪಾರಪೇಟೆ ಪೊಲೀಸರಿಗೆ ಒಪ್ಪಿಸಿದ್ದಾರೆ.

ವರದಿ ಆಧರಿಸಿ ಬುಧವಾರ ರಾತ್ರಿಯಿಂದ ಆತ ಎಲ್ಲಿದ್ದಾನೆ ಎಂಬುದರ ಬಗ್ಗೆ ಶೋಧ ನಡೆಸುತ್ತಿದ್ದರು. ಇಂದು ಅಂದರೆ ಗುರುವಾರ ಮುಂಜಾನೆ 6 ಗಂಟೆ ವೇಳೆಗೆ ಆತ ಮೆಜೆಸ್ಟಿಕ್ ತುಳಸಿ ಪಾರ್ಕ್ ಹತ್ತಿರ ಗೃಹರಕ್ಷಕ ದಳದ ಪೆರೇಡ್‌ ಬಳಿ ಬಂದಾಗ ಸಾರಿಗೆ ಸಂಸ್ಥೆಯ ಕೆಂಪೇಗೌಡ ಬಸ್ ನಿಲ್ದಾಣದ ಭದ್ರತಾ ಮತ್ತು ಜಾಗೃತಾಧಿಕಾರಿಗಳು ಹಿಡಿದು ತಂದಿದ್ದಾರೆ.

ಬಳಿಕ ವಿಚಾರಣೆ ನಡೆಸಿದ್ದು ಆತ ನಿನ್ನೆಯೇ ಪಾಸ್‌ಅನ್ನು ನಿನ್ನೆಯೇ ಯಾರೋ ಕೆ.ಆರ್.ಮಾರ್ಕೆಟ್‌ನಲ್ಲಿ ಕಿತ್ತುಕೊಂಡು ಹೋಗಿದ್ದಾರೆ ಎಂದು ಹೇಳಿಕೆ ನೀಡಿದ್ದಾನೆ ಎಂದು ತಿಳಿದು ಬಂದಿದೆ. ಅಲ್ಲದೆ ಮಾನಸಿಕ ಅಸ್ವಸ್ಥನಂತೆ ನಟಿಸುತ್ತ ಯಾವುದೇ ಮಾಹಿತಿಯನ್ನು ಸರಿಯಾಗಿ ನೀಡುತ್ತಿಲ್ಲ ಎಂದು ಹೇಳಲಾಗಿದೆ.

ಸಾರಿಗೆ ಸಂಸ್ಥೆ ಅಧಿಕಾರಿಗಳು ಕೂಡ ವಿವಿ ಪುರಂ ಪೊಲೀಸ್ ಠಾಣೆಗೆ ಆತನನ್ನು ಕರೆದುಕೊಂಡು ಹೋಗಿದ್ದು, ಪಾಸ್ ಕಿತ್ತುಕೊಂಡು ಹೋಗಿರುವ ಬಗ್ಗೆ ಕೆ.ಆರ್.ಮಾರ್ಕೆಟ್‌ನಲ್ಲಿ ಸ್ಥಳ ಪರಿಶೀಲನೆ ಮಾಡಿ ಮಾಹಿತಿ ಪಡೆದಿದ್ದಾರೆ. ಮತ್ತೆ ಮುನಿರಾಜುವಿನ ಸ್ವಂತ ಊರಾದ ಕೋಲಾರದ ಶ್ರೀನಿವಾಸಪುರ ತಾಲೂಕು, ರೋಣೂರು ಹೋಬಳಿಯ ಕೊಟ್ರುಗುಳಿ ಗ್ರಾಮಕ್ಕೂ ಕೂಡ ಸಂಸ್ಥೆಯ ಭದ್ರತಾ ಮತ್ತು ಜಾಗೃತ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ.

ಈ ವೇಳೆ ಮುನಿರಾಜು ಪತ್ನಿ ಮತ್ತು ಮಕ್ಕಳ ವಿಚಾರಿಸಿದ್ದಾರೆ. ಅವರ ಹತ್ತಿರ ಪಾಸ್‌ ಇತ್ತು ಎಂದು ಹೇಳಿದ್ದಾರೆ. ಈ ಎಲ್ಲ ಬಳವಳಿಗೆಯ ಮಧ್ಯೆಯೇ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಆರೋಪಿ ಮುನಿರಾಜುವನ್ನು ಒಪ್ಪಿಸಿ ಭದ್ರತಾ ಮತ್ತು ಜಾಗೃತ ಅಧಿಕಾರಿಗಳು ದೂರು ನೀಡಿದ್ದಾರೆ.

Leave a Reply

error: Content is protected !!
LATEST
KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತ ಕಟ್ಟುನಿಟ್ಟಿನ ಕಾನೂನು ಜಾರಿಗೆ ರೈತ ಮುಖಂಡರ ಆಗ್ರಹ KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು