NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಗಣೇಶ ಹಬ್ಬಕ್ಕೆ 1500 ಹೆಚ್ಚು ಬಸ್‌ಗಳ ಓಡಾಟ- ಓಟಿ, ರಜೆಯಲ್ಲಿ ಡ್ಯೂಟಿ ಮಾಡುವ ಚಾಲನಾ ಸಿಬ್ಬಂದಿಗೆ ಡಬಲ್‌ ವೇತನ ಕೊಡಲು ಒತ್ತಾಯ 

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇದೇ ಸೆ.6ರಂದು ಸ್ವರ್ಣಗೌರಿವ್ರತ ಮತ್ತು ಸೆ.7ರಂದು ಗಣೇಶ ಹಬ್ಬ ವಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೆಚ್ಚಿದ ಬೇಡಿಕೆಗೆ ಅನುಗುಣವಾಗಿ ಹೆಚ್ಚುವರಿ ಬಸ್‌ಗಳನ್ನು ರಸ್ತೆಗಿಳಿಸಲು ಸಿದ್ಧತೆ ನಡೆಸಿದೆ.

ಬೆಂಳೂರಿನಿಂದ ಸಾಮಾನ್ಯ ವೇಳಾಪಟ್ಟಿಯನ್ನು ಹೊರತುಪಡಿಸಿ ಅನೇಕ ಸ್ಥಳಗಳಿಗೆ ಹೆಚ್ಚವರಿಯಾಗಿ 1,500 ವಿಶೇಷ ಬಸ್‌ಗಳನ್ನು ಜನರ ಸೇವೆಗೆ ಬಿಡಲಾಗುತ್ತಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ಎಲ್ಲಿಗೆಲ್ಲ ವಿಶೇಷ ಬಸ್? KSRTC ವಿಶೇಷ ಬಸ್​​ಗಳು ಬೆಂಗಳೂರಿನ ಕೆಂಪೇಗೌಡ ಬಸ್‌ ನಿಲ್ದಾಣದಿಂದ ಹಲವು ಪ್ರಮುಖ ಸ್ಥಳಗಳಿಗೆ ಸಂಚರಿಸಲಿವೆ. ತಿರುಪತಿ, ವಿಜಯವಾಡ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ವಿಜಯಪುರ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಬೀದರ್, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಮತ್ತು ಹೈದರಾಬಾದ್ ಸೇರಿದಂತೆ ಇತರೆ ಕಡೆಗಳಿಗೆ ಈ ವಿಶೇಷ ಬಸ್​​ಗಳು ಸಂಚರಿಸಲಿದೆ.

ಇನ್ನು ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಕೂಡ ವಿಶೇಷ ಬಸ್‌ಗಳ ಸೌಲಭ್ಯವಿರಲಿದ್ದು ಪಿರಿಯಾಪಟ್ಟಣ, ವಿರಾಜಪೇಟೆ, ಮೈಸೂರು, ಹುಣಸೂರು, ಕುಶಾಲನಗರ ಮತ್ತು ಮಡಿಕೇರಿ ಸೇರಿದಂತೆ ಪ್ರಮುಖ ಸ್ಥಳಗಳಿಗೆ ತೆರಳಲಿವೆ ಎಂದು ಕೆಎಸ್ಆರ್​​ಟಿಸಿ ತಿಳಿಸಿದೆ.

ವಿಶೇಷ ಬಸ್​​ಗಳ ಟಿಕೆಟ್ ಬುಕಿಂಗ್? ವಿಶೇಷ ಹಾಗೂ ಹೆಚ್ಚುವರಿ ಬಸ್​ಗಳ ಪ್ರಯಾಣದ ಸಮಯ ಹಾಗೂ ದರದ ಬಗ್ಗೆ ಕೆಎಸ್‌ಆರ್‌ಟಿಸಿ ಮೊಬೈಲ್​ ಆ್ಯಪ್​ ಹಾಗೂ https://www.ksrtc.in/ ವೆಬ್​ಸೈಟ್​​ ಮೂಲಕ ಸಂಸ್ಥೆ ಮಾಹಿತಿ ನೀಡಲಿದೆ. ಇವುಗಳ ಮೂಲಕವೇ ಟಿಕೆಟ್ ಕಾಯ್ದಿರಿಸಬಹುದಾಗಿದೆ. ಕರ್ನಾಟಕದಾದ್ಯಂತ ಬಸ್​​ ನಿಲ್ದಾಣಗಳಲ್ಲಿನ ಹಾಗೂ ನೆರೆ ರಾಜ್ಯಗಳ ಕೆಎಸ್‌ಆರ್‌ಟಿಸಿ ಕೌಂಟರ್​ಗಳ ಮೂಲಕವೂ ಟಿಕೆಟ್ ಕಾಯ್ದಿರಿಸಬಹುದಾಗಿದೆ.

ಒಬ್ಬ ವ್ಯಕ್ತಿಯು ಒಂದು ಬುಕಿಂಗ್​ಗೆ 4 ಅಥವಾ 5 ಮಂದಿಗೆ ಟಿಕೆಟ್ ಕಾಯ್ದಿರಿಸಿದರೆ ಶೇ.5ರ ರಿಯಾಯಿತಿ ನೀಡುವುದಾಗಿಯೂ ಕೆಎಸ್‌ಆರ್‌ಟಿಸಿ ಘೋಷಿಸಿದೆ. ರಿಟರ್ನ್ ಟಿಕೆಟ್ ಕೂಡ ಒಟ್ಟಿಗೇ ಕಾಯ್ದಿರಿಸಿದರೆ ಶೇ.10ರ ರಿಯಾಯಿತಿ ದೊರೆಯಲಿದೆ ಎಂಧು ತಿಳಿಸಿದೆ.

ಡಬಲ್‌ ವೇತನಕ್ಕೆ ಒತ್ತಾಯ: ಇನ್ನು 1500 ವಿಶೇಷ ಬಸ್‌ಗಳನ್ನು ಹೆಚ್ಚುವರಿಯಾಗಿ ಓಡಿಸುವುದಾಗಿ ಸಂಸ್ಥೆ ತಿಳಿಸಿದೆ. ಆದರೆ, ಈ ಹೆಚ್ಚುವರಿ ಬಸ್‌ ಓಡಿಸುವುದಕ್ಕೆ ಚಾಲನಾ ಸಿಬ್ಬಂದಿಗಳ ಅಗತ್ಯವಿದೆ. ಅಂದರೆ ನೌಕರರು ರಜೆ ತೆಗೆದುಕೊಳ್ಳದೆ ಜತೆಗೆ ಓಟಿ ಮಾಡುಬೇಕಾಗುತ್ತದೆ. ಈ ರೀತಿ ರಜೆ ಪಡೆಯದೆ ಮತ್ತು ಸಾಮಾನ್ಯ ಡ್ಯೂಟಿ ಬಳಿಕ ಓಟಿ ಮಾಡುವ ನೌಕರರಿಗೆ ಅವರ ಶ್ರಮಕ್ಕೆ ತಕ್ಕ ಓಟಿ ಹಣ ಮತ್ತು ರಜೆ ತೆಗೆದುಕೊಳ್ಳದೆ ಡ್ಯೂಟಿ ಮಾಡಿದ್ದಕ್ಕೆ ಡಬಲ್‌ ವೇತನವನ್ನು ಕೊಡಬೇಕು ಎಂದು ನೌಕರರು ಒತ್ತಾಯಿಸಿದ್ದಾರೆ.

ಆದರೆ ಈ ಬಗ್ಗೆ ಸಂಸ್ಥೆಯ ಯಾವುದೇ ಅಧಿಕಾರಿಗಳು ಸ್ಪಷ್ಟನೆ ನೀಡಿಲ್ಲ. ಹೀಗಾಗಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್‌ ಅವರು ಎಲ್ಲ ವಿಭಾಗೀಯ ನಿಯಂತ್ರಣಾಧಿಕಾರಿಗಳು ಮತ್ತು ಡಿಎಂಗಳಿಗೆ ವೇತನದ ಡಬಲ್‌ ಓಟಿ ಮತ್ತು ರಜೆಯಲ್ಲಿ ಕೆಲಸ ಮಾಡುವವರಿಗೆ ಡಬಲ್‌ ವೇತನ ಕೊಡಬೇಕು ಎಂದು ಸೂಚನೆ ನೀಡುವಂತೆ ನೌಕರರು ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತ ಕಟ್ಟುನಿಟ್ಟಿನ ಕಾನೂನು ಜಾರಿಗೆ ರೈತ ಮುಖಂಡರ ಆಗ್ರಹ KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು