CRIMENEWSನಮ್ಮಜಿಲ್ಲೆ

ವಿವಾದಿತ ಜಮೀನಿನಲ್ಲಿ ಮಾವಿನಕಾಯಿ ಗಲಾಟೆ: ಓರ್ವನ ಕೊಲೆಯಲ್ಲಿ ಅಂತ್ಯ

ವಿಜಯಪಥ ಸಮಗ್ರ ಸುದ್ದಿ

ಹುಣಸೂರು: ವಿವಾದಿತ ಜಮೀನಿನಲ್ಲಿ ಮಾವಿನಕಾಯಿ ಕೊಯ್ಯುವ ವಿಚಾರದಲ್ಲಿ ಶುರುವಾದ ಜಗಳ ರೈತನೋರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಹುಣಸೂರು ತಾಲೂಕಿನ ಶಂಕಹಳ್ಳಿ ಗ್ರಾಮದಲ್ಲಿ ನಡೆದಿದೆ.

ಶಂಕಹಳ್ಳಿ ಗ್ರಾಮದ ನಿವಾಸಿ ಮಲ್ಲೇಶ್ ಹತ್ಯೆಯಾದ ರೈತ. ಅದೇ ಗ್ರಾಮದ ನಿವಾಸಿ ಚೇತನ್ ಹತ್ಯೆ ಮಾಡಿದ ಆರೋಪಿಯಾಗಿದ್ದು ಈಗ ಪೊಲೀಸರ ವಶದಲ್ಲಿದ್ದಾನೆ.

ಶಂಕಹಳ್ಳಿಯಲ್ಲಿರುವ ಜಮೀನಿನಲ್ಲಿ ಮಲ್ಲೇಶ್ ಮತ್ತು ಕುಟುಂಬ ವ್ಯವಸಾಯ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಈ ಜಮೀನು ವಿಚಾರದಲ್ಲಿ ವಿವಾದ ಶುರುವಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದು. ಈ ವೇಳೆ ಮಲ್ಲೇಶ್ ಜಮೀನಿನಲ್ಲಿದ್ದ ಮಾವಿನ ಮರದಿಂದ ಕಾಯಿಗಳನ್ನು ಕೀಳಿಸುವಾಗ ಚೇತನ್ ಕಿರೀಕ್ ತೆಗೆದಿದ್ದಾನೆ.

ಈ ವೇಳೆ ಮಾತಿಗೆ ಮಾತು ಬೆಳೆದಿದ್ದು, ಚೇತನ್ ಜತೆ ಸರಿತಾ, ಪ್ರವೀಣ, ಪವನ್, ಮಂಜುಳ, ಕರಿಗೌಡ ಸಹ ಸೇರಿ ಗಲಾಟೆ ಮಾಡಿದ್ದಾರೆ. ಜಗಳದ ವೇಳೆ ಚೇತನ್ ತನ್ನ ಬಳಿ ಇದ್ದ ಚಾಕುವಿನಿಂದ ಮಲ್ಲೇಶ್‌ಗೆ ಇರಿದು ಪರಾರಿಯಾಗಿದ್ದಾನೆ. ಇತ್ತ ರಕ್ತಸ್ರಾವವಾಗಿ ಅಸದವಸ್ಥಗೊಂಡಿದ್ದ ಮಲ್ಲೇಶ್ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಮಲ್ಲೇಶ್ ಪತ್ನಿ ನಾಗಮ್ಮ ಚೇತನ್ ಸೇರಿದಂತೆ 6 ಮಂದಿ ವಿರುದ್ದ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Megha
the authorMegha

Leave a Reply

error: Content is protected !!
Latest news
KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ... ಪ್ರಾಮಾಣಿಕತೆ ಮೆರೆದ KSRTC ಸಿಬ್ಬಂದಿ - ಆಭರಣ ಅಡವಿಟ್ಟು ತಂದಿದ್ದ ಹಣ ಕಳೆದು ಕೊಂಡ ಪ್ರಯಾಣಿಕನಿಗೆ ಮರಳಿ ಕೊಟ್ಟ ನೌಕರರ... KSRTC: ಚಾಲನಾ ಸಿಬ್ಬಂದಿ ವಿರುದ್ಧ ಮೆಮೊ ನೀಡುವುದಕಷ್ಟೇ ತಮ್ಮ ಕಾರ್ಯ ವ್ಯಾಪ್ತಿಯ ಸೀಮಿತಗೊಳಿಸಿಕೊಂಡ ತನಿಖಾಧಿಕಾರಿಗಳು?...