NEWSನಮ್ಮಜಿಲ್ಲೆ

ವಿಜಯಪುರ ಕಂಟೇನ್ಮೆಂಟ್ ಜೋನ್ ಘೋಷಣೆ

ಕೊರೊನಾ ಪಾಸಿಟಿವ್ ಪ್ರಕರಣ ಕಂಡುಬಂದ ಪ್ರದೇಶಕ್ಕೆ ಅನ್ವಯ l ಡಿಸಿ ವೈ.ಎಸ್ ಪಾಟೀಲಆದೇಶ

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ನೊವೇಲ್ ಕೊರೊನಾ ಪಾಸಿಟಿವ್ ಪ್ರಕರಣ ಕಂಡುಬಂದ ಹಿನ್ನೆಲೆಯಲ್ಲಿ ವಿಜಯಪುರ ನಗರದ ಹಕೀಮ್ ಚೌಕ್, ಕಾಮತ್ ಹೋಟೆಲ್ ಮುಂಭಾಗದ ಹರಣಶಿಖಾರಿ ಓಣಿ, ಕೊಂಚಿಕೊರವರ ಓಣಿ, ಬಡಿ ಕಮಾನ, ಚಪ್ಪರ್ ಬಂದ್ ಓಣಿ, ಜುಮ್ಮಾ ಮಸೀದಿಯ ಹಿಂದೆ ಇರುವ ಕೆ.ಎಚ್.ಬಿ ಕಾಲನಿ, ಪೈಲ್ವಾನ್ ನಗರ, ಮಹೀಬೂಬ್ ನಗರ, ಬೆಂಡಿಗೇರಿ ಓಣಿ, ಸುಭಾಸ್ ಕಾಲನಿ, ಶಾಂತಿ ನಗರ ಈ ಭೌಗೋಳಿಕ ಪ್ರದೇಶವನ್ನು ನಿಷೇಧಿತ ಪ್ರದೇಶ ಮತ್ತು ಕಂಟೇನ್ಮೆಂಟ್ ಜೋನ್ ಎಂದು ಘೋಷಿಸಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಆದೇಶ ಹೊರಡಿಸಿದ್ದಾರೆ.

ಈ ಕಂಟೇನ್ಮೆಂಟ್ ಜೋನ್ ಹೊರಗಿನ ಸುತ್ತಮುತ್ತಲಿನ 100 ಮೀಟರ್ ಪ್ರದೇಶದ ವ್ಯಾಪ್ತಿಯ ಭೌಗೋಳಿಕ ಪ್ರದೇಶವನ್ನು ಬಫರ್ ಜೋನ್ ಎಂದು ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಈ ಪ್ರದೇಶದ ವ್ಯಾಪ್ತಿಯಲ್ಲಿ ಯಾವದೇ ವ್ಯಕ್ತಿ ಜನರ ಕಾಲ್ನಡಿಗೆ/ ವಾಹನದ ಮೂಲಕ ಅಥವಾ ಇನ್ನಾವುದೇ ರೀತಿಯಿಂದ ಬಂದು ಹೋಗುವುದನ್ನು ಸಂಪೂರ್ಣ ಬಂದ್ ಮಾಡಲಾಗಿದೆ.

ಈ ಆದೇಶ ಕರ್ತವ್ಯನಿರತ ವಾಹನಗಳಿಗೆ ಅನ್ವಯಿಸುವುದಿಲ್ಲ, ನಿರ್ಬಂಧಿತ ಪ್ರದೇಶಕ್ಕೆ ಒಂದೇ ಆಗಮನ-ನಿರ್ಗಮನ ಇರಬೇಕು. ಯಾವುದೇ ವಾಹನವು ಈ ನಿರ್ಬಂಧಿತ ಪ್ರದೇಶದಿಂದ ನಿರ್ಗಮಿಸುವ ಪೂರ್ವದಲ್ಲಿ ಕಡ್ಡಾಯವಾಗಿ ಸ್ಯಾನಿಟೈಜೇಶನ್ ಮಾಡಿ ನಿರ್ಗಮಿಸಬೇಕು. ಸದರಿ ಪ್ರದೇಶದ ಶುಚಿತ್ವವನ್ನು ಮಹಾನಗರ ಪಾಲಿಕೆಯಿಂದ ಕಾಪಾಡಬೇಕು.

ಈ ನಿಷೇಧಿತ ಪ್ರದೇಶದ ವ್ಯಾಪ್ತಿಯಲ್ಲಿರುವ ಎಲ್ಲ ನಿವಾಸಿಗಳು ಮುಂದಿನ ಆದೇಶದ ವರೆಗೆ ತಮ್ಮ ಮನೆಯಲ್ಲಿದ್ದುಕೊಂಡು ಆರೋಗ್ಯ ಇಲಾಖೆ ಅಧಿಕಾರಿಗಳು ನೀಡುವ ಸಲಹೆ ಸೂಚನೆಗಳನ್ನು ತಪ್ಪದೇ ಪಾಲಿಸಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯವರು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ತಂಡಗಳನ್ನು ರಚಿಸಿ ಪ್ರತಿನಿತ್ಯ ಈ ಪ್ರದೇಶದಲ್ಲಿ ವಾಸಿಸುತ್ತಿರುವವರ ಆರೋಗ್ಯ ತಪಾಸಣೆ ಕೈಗೊಂಡು ತೀವ್ರ ನಿಗಾ ವಹಿಸಬೇಕು. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸುರಕ್ಷತಾ ಕ್ರಮ ಕೈಗೊಳ್ಳುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯವರು ಐಇಸಿ/ಬಿಬಿಸಿ ಚಟುವಟಿಕೆ ಕೈಗೊಳ್ಳಬೇಕು. ಕಂಟೇನ್ಮೆಂಟ್ ಮತ್ತು ಬಫರ್ ಜೋನ್‍ಗಳಲ್ಲಿ ಪೊಲೀಸ್ ಬಂದೋಬಸ್ತ್ ಮತ್ತು ಬ್ಯಾರಿಕೇಡಿಂಗ್ ವ್ಯವಸ್ಥೆ ಮಾಡಬೇಕು ಎಂದು ಆದೇಶ ನೀಡಿದ್ದಾರೆ.

ಅದರಂತೆ ನಾಲ್ಕಕ್ಕಿಂತ ಹೆಚ್ಚಿನ ಜನರು ಈ ಪ್ರದೇಶ ವ್ಯಾಪ್ತಿಯಲ್ಲಿ ಗುಂಪು ಸೇರುವುದು, ಜನಸಂದಣಿಯಾಗುವ ಮೆರವಣಿಗೆ, ಸಭೆ, ಧಾರ್ಮಿಕ ಉತ್ಸವ, ಮದುವೆ, ಕ್ರೀಡೆ, ಉರುಸು, ಸಂತೆ, ಜಾತ್ರೆ, ಸಮ್ಮೇಳನ ಸಂಪೂರ್ಣ ನಿಷೇಧಿಸಲಾಗಿದೆ. ಎಲ್ಲಾ ಮನೆಗಳಲ್ಲಿನ ಸದಸ್ಯರು ಅವರ ಮನೆಬಿಟ್ಟು ಹೊರಗಡೆ ತಿರುಗಾಡುವಂತಿಲ್ಲ. ಇತರರ ಮನೆಗಳಿಗೆ ಹೋಗುವಂತಿಲ್ಲ. ಸದರಿ ಪ್ರದೇಶಗಳಲ್ಲಿನ ಎಲ್ಲ ಮನೆಗಳ ಸದಸ್ಯರು (ಗೃಹ ಸಂಪರ್ಕ ತಡೆ) ಹೋಮ್‍ಕ್ವಾರಂಟೈನ್‍ದಲ್ಲಿರಬೇಕು. ಈ ಆದೇಶ ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ -188 ರನ್ವಯ ಕ್ರಮ ಜರುಗಿಸಲಾಗುತ್ತದೆ. ಈ ಆದೇಶ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮತ್ತು ಕಾರ್ಯಗತಗೊಳಿಸಲು ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಪೊಲೀಸ್ ಉಪವಿಭಾಗ ಅಧೀಕ್ಷಕರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿ ಅವರು ಆದೇಶ ನೀಡಿದ್ದು, ಈ ಆದೇಶ ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ -188 ರನ್ವಯ ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ