NEWSದೇಶ-ವಿದೇಶನಮ್ಮರಾಜ್ಯ

ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಸುಪ್ರೀಂ ಕೋರ್ಟ್ ವಿಭಾಗೀಯ ಪೀಠದ ಮುಂದೆ ಪಾರ್ಟಿ ಇನ್ ಪರ್ಸನ್ ಆಗಿ ಹಾಜರಾದ ವಕೀಲರೊಬ್ಬರು ಹಿಂದಿಯಲ್ಲಿ ವಾದ ಮಂಡಿಸಿದರು. ವಾದ ಮುಗಿಸಿದ ನಂತರ ವಕೀಲರಿಗೆ ಕೋರ್ಟ್‌ ಅಧಿಕೃತ ಭಾಷೆ ಇಂಗ್ಲಿಷ್ ಎಂದು ಸುಪ್ರೀಂ ಕೋರ್ಟ್ ವಿಭಾಗೀಯ ಪೀಠ ಮೌಖಿಕವಾಗಿ ನೆನಪಿಸಿತು.

ನ್ಯಾಯಮೂರ್ತಿ ಹೃಷಿಕೇಶ್ ರಾಯ್ ಮತ್ತು ನ್ಯಾಯಮೂರ್ತಿ ಎಸ್.ವಿ.ಎನ್. ಭಟ್ಟಿ ಅವರಿದ್ದ ವಿಭಾಗೀಯ ಪೀಠದ ಮುಂದೆ ಈ ಘಟನೆ ನಡೆಯಿತು.

ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕೋರ್ಟ್ ಭಾಷೆ ಇಂಗ್ಲಿಷ್ ಎಂಬುದನ್ನು ವಕೀಲರಿಗೆ ನೆನಪಿಸಿದ ಸುಪ್ರೀಂ ಕೋರ್ಟ್, ಮೊದಲು ನೀವು ಮಂಡಿಸಿದ ವಾದವನ್ನು ನ್ಯಾಯಾಲಯ ಅರ್ಥ ಮಾಡಿಕೊಳ್ಳುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿ ಹೇಳಿತು.

ನೀವು ಪಾರ್ಟಿ ಇನ್ ಪರ್ಸನ್ ಆಗಿ ವಾದ ಮಾಡಲು ಬಂದಿದ್ದೀರಿ. ಆದ್ದರಿಂದ ನಿಮ್ಮನ್ನು ಮಧ್ಯದಲ್ಲಿ ನಿಲ್ಲಿಸಿಲ್ಲ. ನೀವು ಏನನ್ನು ಹೇಳಲು ಬಯಸಿದ್ದೀರಿ ಎಂಬುದನ್ನು ಹೇಳಿದ್ದೀರಿ. ಆದರೆ, ನ್ಯಾಯಾಲಯದಲ್ಲಿ ವಿಚಾರಣೆಗಳು ಇಂಗ್ಲಿಷ್‌ನಲ್ಲಿ ಇವೆ ಎಂದು ಕಕ್ಷಿದಾರರಿಗೆ ನ್ಯಾಯಪೀಠ ಮೌಖಿಕವಾಗಿ ಹೇಳಿತು.

ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಅಲಹಾಬಾದ್ ಹೈಕೋರ್ಟ್ ಪತ್ನಿಯ ಕೋರಿಕೆ ಮೇರೆಗೆ ಕೇಸನ್ನು ಮತ್ತೊಂದು ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ವಕೀಲರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಹಾಕಿದ್ದು, ಇದರ ವಿಚಾರಣೆಯಲ್ಲಿ ಅವರು ಪಾರ್ಟಿ ಇನ್ ಪರ್ಸನ್ ಆಗಿ ಪೀಠದೆದುರು ಹಾಜರಾಗಿದ್ದರು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್