NEWS

ಹಿರೇಬಾಗೇವಾಡಿ ವೃದ್ಧೆ ಸಾವು

ಗಂಟಲು ಮಾದರಿ ಪ್ರಯೋಗಾಲಯಕ್ಕೆ ರವಾನೆ l  ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಹಿರೇಬಾಗೇವಾಡಿಯ ಕೋವಿಡ್-೧೯ ಸೋಂಕಿತ ವ್ಯಕ್ತಿ (ಪಿ-224)ಯ ಜತೆ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ 80 ವರ್ಷದ ವೃದ್ಧೆ ಇಂದು ಬೆಳಿಗ್ಗೆ 10.30ರಲ್ಲಿ ಮೃತಪಟ್ಟಿದ್ದಾರೆ.

ಅವರ ಗಂಟಲು ದ್ರವದ ಮಾದರಿಯನ್ನು ತೆಗೆದು ಪ್ರಯೋಗಾಲಯಕ್ಕೆ ಕಳಿಸಲಾಗುತ್ತಿದ್ದು, ವರದಿ ಬಂದ ನಂತರವೇ ಮರಣದ ನಿರ್ದಿಷ್ಟ ಕಾರಣ ತಿಳಿದುಬರಲಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಹಿರೇಬಾಗೇವಾಡಿಯ ಪಿ-224 ವ್ಯಕ್ತಿಗೆ ಪಾಸಿಟಿವ್ ಇರುವುದು ನಿನ್ನೆ ಸಂಜೆ ದೃಢಪಟ್ಟಿರುತ್ತದೆ ಎಂದು ತಿಳಿಸಿದರು.

ಈ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಕ್ಕೆ ಬಂದಿರುವ 21 ವ್ಯಕ್ತಿಗಳನ್ನು ಗುರುತಿಸಿ ಅವರನ್ನು ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್ ನಲ್ಲಿ ಇರಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದರು.

ಈ ಹಂತದಲ್ಲಿ ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದಿದ್ದ 21 ವ್ಯಕ್ತಿಗಳ ಪೈಕಿ ಒಬ್ಬರಾಗಿದ್ದ 80 ವರ್ಷದ ವೃದ್ಧೆ ಮೃತಪಟ್ಟಿರುತ್ತಾರೆ. ಆದ್ದರಿಂದ ಅವರ ಗಂಟಲು ದ್ರವದ ಮಾದರಿಯನ್ನು ತೆಗೆದು ಪ್ರಯೋಗಾಲಯಕ್ಕೆ ಕಳಿಸಲಾಗುತ್ತಿದೆ‌. ವರದಿ ಬಂದ ನಂತರವೇ ಅವರ ಮರಣದ ನಿರ್ದಿಷ್ಟ ಕಾರಣವನ್ನು ತಿಳಿಸಲಾಗುವುದು ಎಂದರು.

ಪ್ರಾಥಮಿಕ ಮಾಹಿತಿಯ ಪ್ರಕಾರ ಅವರು ಹೃದಯಾಘಾತದಿಂದ ಮೃಪಟ್ಟಿರುತ್ತಾರೆ ಎಂದು ವೈದ್ಯರು ತಿಳಿಸಿರುತ್ತಾರೆ. ಆದಾಗ್ಯೂ ಪ್ರಯೋಗಾಲಯದ ವರದಿ ಬಂದ ನಂತರವೇ ಮರಣದ ಕಾರಣ ಖಚಿತಗೊಳ್ಳಲಿದೆ.

ಜನರ ಆರೋಗ್ಯದ ದೃಷ್ಟಿಯಿಂದ ಅವರ ಅಂತ್ಯಕ್ರಿಯೆಯನ್ನು ಸರ್ಕಾರದ ಮಾರ್ಗಸೂಚಿಯ ಪ್ರಕಾರ ನೆರವೇರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ