CrimeNEWSನಮ್ಮಜಿಲ್ಲೆ

ಚಿರತೆ ದಾಳಿಗೆ ಮೇಕೆ  ಬಲಿ ವರ್ಷದ ಹಿಂದೆ ವಿದ್ಯಾರ್ಥಿ ಕೊಂದಿದ್ದ ಸ್ಥಳದಲ್ಲೇ ಘಟನೆ: ಜನರಲ್ಲಿ ಆತಂಕ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ಜಮೀನಿನಲ್ಲಿ ಚಿರತೆ ಒಂದು ಮೇಕೆ ಮರಿಯನ್ನು ಕೊಂದು ಅರೆಬರೆ ತಿಂದು ಬಿಟ್ಟು ಹೋಗಿರುವ ಘಟನೆ ತಾಲೂಕಿನ ಕೇತುಪುರ ಗ್ರಾಮದ ಸಮೀಪ ನಡೆದಿದೆ.

ತಾಲೂಕಿನ ಸೋಸಲೆ ಹೋಬಳಿಯ ಕೇತುಪುರ ಹಾಗೂ ಉಕ್ಕಲಗೆರೆ ಗ್ರಾಮದ ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದ ಸಮೀಪ ಮಧ್ಯ ಇರುವ ಚಿನ್ನಸ್ವಾಮಿ ಎಂಬುವರ ಜಮೀನಿನ ಬಳಿ ಶುಕ್ರವಾರ ಸಂಜೆ ಚಿನ್ನಸ್ವಾಮಿ ಕುಟುಂಬದವರ ಎದುರೆ 15ರಿಂದ 20 ಸಾವಿರ ರೂ. ಮೌಲ್ಯದ ಮೇಕೆ ಮರಿಯನ್ನು ಚಿರತೆ ಎಳೆದುಕೊಂಡು ಹೋಗಿದೆ. ಅದನ್ನು ಕಂಡು ಕಿರುಚಿ ಕೊಂಡಾಗ ಅರೆಬರೆ ತಿಂದು ಓಡಿಹೋಗಿದೆ.

ಒಂದು ವರ್ಷದ ಹಿಂದೆ ಉಕ್ಕಲಗೆರೆಯ ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದ ಸಮೀಪ ಎಂ.ಎಲ್.ಹುಂಡಿ ಗ್ರಾಮದ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಮಂಜುನಾಥ್ ಮೇಲೆ ದಾಳಿ ಮಾಡಿ ಚಿರತೆ ಕೊಂದು ಹಾಕಿತ್ತು. ಆ ಘಟನೆ ನಡೆದ ಸಮೀಪದ ಸ್ಥಳದಲ್ಲಿ ಮತ್ತೆ ಈ ಘಟನೆ ಜರುಗಿರುವುದು ಸುತ್ತಮುತ್ತಲ ಗ್ರಾಮಗಳ ಜನತೆಯಲ್ಲಿ ಆತಂಕ ಮೂಡಿಸಿದೆ.

ಇನ್ನು ಇಟ್ಟಿಗೆ ಕೂಲಿ ಕಾರ್ಮಿಕರು ಓಡಾಡಲು, ರೈತರು ದನಕರುಗಳನ್ನು ಮೇಯಿಸಲು ಜಮೀನಿಗೆ ಹೋಗುವುದು ಕಷ್ಟಕರವಾಗಿದೆ ಎಂದು ರೈತ ಸಂಘದ ಮುಖಂಡ ಕಳ್ಳಿಪುರ ಮಹದೇವಸ್ವಾಮಿ ತಿಳಿಸಿದ್ದಾರೆ.

ಅರಣ್ಯ ಇಲಾಖೆ ಅಧಿಕಾರಿಗಳು ಉಕ್ಕಲಗೆರೆಯ ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದ ಬಳಿ ಸಿಬ್ಬಂದಿಯನ್ನು ನಿಯೋಜಿಸಿದ್ದೇವೆ ಎನ್ನುತ್ತಾರೆ. ಆದರೆ ಅಲ್ಲಿ ಯಾರೂ ಇರುವುದಿಲ್ಲ ಎಂದು ಮಹದೇವಸ್ವಾಮಿ ದೂರಿದ್ದಾರೆ.

ಅರಣ್ಯ ಇಲಾಖೆಯ ಮಂಜುನಾಥ್ ಮಾತನಾಡಿ, ಲೋಕೇಶ್ ಹಾಗೂ ಸುಂದರರಾಜ್ ನೇತೃತ್ವದ ತಂಡ ಶುಕ್ರವಾರ ರಾತ್ರಿಯೇ ಚಿನ್ನಸ್ವಾಮಿ ಯವರ ಜಮೀನಿಗೆ ಭೇಟಿ ನೀಡಿ ಬೋನು ಇಟ್ಟಿದೆ ಎಂದು ತಿಳಿಸಿದ್ದಾರೆ.

ಇನ್ನು ಚಿನ್ನಸ್ವಾಮಿಯವರು ಕೇತುಪುರ ಗ್ರಾಮದಿಂದ ಬೆಟ್ಟದ ಸಮೀಪಕ್ಕೆ ಹೊಂದಿಕೊಂಡಿರುವಂತೆ ಮನೆ ಮಾಡಿಕೊಂಡಿರುವುದರಿಂದ ಜಾಗೃತರಾಗಿ ಸ್ವಲ್ಪ ದಿನಗಳ ಮಟ್ಟಿಗೆ ಗ್ರಾಮದಲ್ಲಿ ವಾಸಿಸುವಂತೆ ಸಲಹೆ ನೀಡಲಾಗಿದೆ ಎಂದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ